Sunday, April 26, 2026

ಪ್ರಾದೇಶಿಕ

ಪುತ್ತೂರುಸುದ್ದಿ

ಪುತ್ತೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾದ ವಿಟ್ಲದ ಮಹಮ್ಮದ್‌ ಫಯಾಝ್ ನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪುತ್ತೂರು ಬಿಜೆಪಿ ನಾಯಕರು – ಕಹಳೆ ನ್ಯೂಸ್

ಪುತ್ತೂರು : ನಗರದ ಹಳೇ ಬಸ್ಸು ನಿಲ್ದಾಣದ ನಾಗನ‌ಕಟ್ಟೆ ಬಳಿ ರಾತ್ರಿ ಸುಮಾರು 9.00 ಗಂಟೆ ಸಮಯಕ್ಕೆ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ವಿಟ್ಲದ ಮಹಮ್ಮದ್ ಫಯಾಝ್ ತನ್ನ ಆಕ್ಟಿವಾದಿಂದ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ, ತಕ್ಷಣ ಅದೇ ಮಾರ್ಗವಾಗಿ ತೆರಳುತ್ತಿದ್ದ, ಪುತ್ತೂರಿನ ಬಿಜೆಪಿ ನಾಯಕರು ಆತನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ‌. ಪುತ್ತೂರು ಬಿಜೆಪಿ ನಗರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಯುವ ಮೋರ್ಛಾ ಮುಖಂಡರಾದ ಕಿರಣ್...
ಸುದ್ದಿಸುಳ್ಯ

ಸುಳ್ಯ:ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ನಿಧನ-ಕಹಳೆ ನ್ಯೂಸ್

ಹೆಸರಾಂತ ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದ್ದರು. ಅನೇಕ...
ಪುತ್ತೂರು

ಅನುತ್ತೀರ್ಣರಾದವರ ದಾರಿದೀಪವಾದ ಪ್ರಗತಿ ಸ್ಟಡಿ ಸೆಂಟರ್, ಪುತ್ತೂರು- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಟಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜುಕೇಶನಲ್ ಫೌಂಡೇಶನ್(ರಿ.) ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್‍ಗೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿಯೇ ಕಳೆದ 13 ವರುಷಗಳಿಂದ ತನ್ನ ಸೇವೆಯನ್ನು ನೀಡುತ್ತಾ ಬಂದಿದ್ದು, 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92% ಫಲಿತಾಂಶ ಪಡೆದುಕೊಂಡಿತ್ತು. ಮರುಪರೀಕ್ಷೆಯಲ್ಲಿ ದಾಖಲೆಯ 96% ಫಲಿತಾಂಶ ಬಂದಿರುತ್ತದೆ. ದ.ಕ, ಉಡುಪಿ, ಕೊಡಗು, ಚಿಕ್ಕಮಂಗಳೂರು, ಶಿವಮೊಗ್ಗ, ಬೆಂಗಳೂರು ಜಿಲ್ಲೆಗಳಿಂದ ಆನ್‍ಲೈನ್ ತರಗತಿಯಲ್ಲಿ 60 ವಿದ್ಯಾರ್ಥಿಗಳು...
ಪುತ್ತೂರು

ಮನುಷ್ಯನ ದುರಾಸೆಯೇ ಪ್ರಕೃತಿ ವಿಕೋಪಕ್ಕೆ ಕಾರಣ ಡಾ. ಶ್ರೀಷ ಕುಮಾರ್ ಎಂ.ಕೆ – ಕಹಳೆ ನ್ಯೂಸ್

ಪುತ್ತೂರು : ಅ.8 ಇಂದು ಪ್ರಕೃತಿಯ ಮುನಿಸಿಗೆ ಮಾನವನ ಕೃತ್ಯಗಳೇ ಕಾರಣ. ಒಂದು ವೇಳೆ ನಾವಿಂದು ಪ್ರಕೃತಿಗೆ ಒಲಿಯದೇ ಹೋದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವಿವೇಕಾನಂದ ಪದವಿ ಕಾಲೇಜಿನ ಸಂಸ್ಕøತ ಉಪನ್ಯಾಸಕರಾದ ಡಾ. ಶ್ರೀಷ ಕುಮಾರ್ ಎಂ.ಕೆ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಸಂಸ್ಕøತಿ- ಪ್ರಸ್ತುತಿ ಎಂಬ ಮೂರನೇ ಹಂತದ ಸರಣಿ ಸಂವಾದ ಕಾರ್ಯಕ್ರಮದಲ್ಲಿ ಕೊಡಗಿನ ಭೂ ಕುಸಿತಕ್ಕೆ ಕಾರಣಗಳೇನು ಹಾಗೂ ಶಿಕ್ಷಣ ಹಾಗೂ...
ಬಂಟ್ವಾಳಸುದ್ದಿ

ವಿಟ್ಲ : ಒಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ, ದರೋಡೆ-ಕಹಳೆ ನ್ಯೂಸ್

ಬಂಟ್ವಾಳ, ಅ.9: ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿ ಲಲಿತಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ, ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದು, ಬಳಿಕ ಕುತ್ತಿಗೆಯಲ್ಲಿರುವ...
ಪುತ್ತೂರು

ಬನ್ನೂರಿನಲ್ಲಿ ಗ್ರಾಮಸ್ಥರಿಗೆ ಯೋಗಾಸನ ಶಿಬಿರ – ಪುತ್ತೂರಿನ ವಿವಿಧ ಸಂಘ ಸಂಸ್ಧೆಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮ –ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜು, ಬನ್ನೂರು ಗ್ರಾಮ ವಿಕಾಸ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬನ್ನೂರು ಇವುಗಳ ಸಹಭಾಗಿತ್ವದಲ್ಲಿ ಬನ್ನೂರಿನ ಕುಂಟ್ಯಾನ ಸದಾಶಿವ ದೇವಸ್ಥಾನದ ವಠಾರದಲ್ಲಿ ಗ್ರಾಮಸ್ಥರಿಗೆ ಆಕ್ಟೋಬರ್.1 ರಂದು ಯೋಗಾಸನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಬನ್ನೂರು ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಸೇಡಿಯಾಪು ಜನಾರ್ಧನ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಇವರು ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ...
ಪುತ್ತೂರು

IRCMD ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ ನೇರ ನೇಮಕಾತಿ- ಕಹಳೆ ನ್ಯೂಸ್

ಪುತ್ತೂರು: ಹಾಸನದಲ್ಲಿ ಕಾರ್ಯಾಚರಿಸುತ್ತಿರುವ ಹೆಸರಾಂತ  ಹಿಮತ್‍ಸಿಂಗ್‍ಕಾ ಲಿನೆನ್ಸ್  ಕಂಪನಿಯಲ್ಲಿ ನೂರಕ್ಕೂ ಅಧಿಕ ಉದ್ಯೋಗಾವಕಾಶಗಳು. ಹುದ್ದೆಗಳ ವಿವರ: ಡಾಟಾ ಎಂಟ್ರಿ ಆಪರೇಟರ್, ಆಪರೇಟರ್, ಕ್ವಾಲಿಟಿ ಇನ್ಸ್ಪೆಕ್ಟರ್, ವೇವಿಂಗ್ ಸೆಕ್ಟರ್, ಟೈಲರಿಂಗ್ ಇತ್ಯಾದಿ. ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ, ಪಿಯುಸಿ, ಯಾವುದೇ ಪದವಿ, ಐಟಿಐ ಡಿಪ್ಲೋಮಾ. ಸೌಲಭ್ಯಗಳು: ಉಚಿತ ಹಾಸ್ಟೆಲ್ ಮತ್ತು ಉಚಿತ ಊಟದ ವ್ಯವಸ್ಥೆ, ಉಚಿತ ವೈದ್ಯಕೀಯ ಸೌಲಭ್ಯ, ಉಚಿತ ಸಾರಿಗೆ ವ್ಯವಸ್ಥೆ, PF, ESI, Gratuity, Annual Bonus ಇತ್ಯಾದಿ. ವಯೋಮಿತಿ: 18...
ಪುತ್ತೂರು

ಪುತ್ತೂರು: ಗಾಂಧಿ ಜಯಂತಿ ಪ್ರಯುಕ್ತ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ನ ವತಿಯಿಂದ ನಾಳೆ ರಕ್ತದಾನ ಶಿಬಿರ ಹಾಗೂ “ಒಳಿತು ಮಾಡು ಮನುಷ” ತಂಡದ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ಕಳೆದ 3ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ನ ಮಹತ್ವಪೂರ್ಣ ಯೋಜನೆಯಾದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ ಮತ್ತು ಆಸಕ್ತರಿಗೆ ನಿರಂತರವಾಗಿ ಪ್ರತಿ ತಿಂಗಳು ದಿನಸಿ ಸಾಮಗ್ರಿಗಳ ಕಿಟ್ ನೀಡುವ ಮಾಸಿಕ ಯೋಜನೆ "ಒಳಿತು ಮಾಡು ಮನುಷ" ಇದರ ಉದ್ಘಾಟನಾ ಸಮಾರಂಭ ಮತ್ತು ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಯಂ ಪ್ರೇರಿತ "ರಕ್ತದಾನ ಶಿಬಿರವು" ದಿನಾಂಕ 2-10-2020 ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ರೋಟರಿ...
1 849 850 851 852 853 872
Page 851 of 872