Recent Posts

Saturday, April 25, 2026

ಪ್ರಾದೇಶಿಕ

ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಉಪ್ಪಿನಂಗಡಿಯ‌‌ಲ್ಲಿ ತಾಯಿ ಬೈದರೆಂದು ನೇಣಿಗೆ ಕೊರಳೊಡ್ಡಿದ 10ರ ಬಾಲೆ – ಕಹಳೆ ನ್ಯೂಸ್

ಉಪ್ಪಿನಂಗಡಿ‌‌, ಜು 17 : ಬಾಲಕಿಯೋರ್ವಳು ತಾಯಿ ಬೈದರೆಂದು ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬಂಡಾಡಿ ಗ್ರಾಮದ ಕೇದಗೆದಡಿ ಎಂಬಲ್ಲಿ ಗುರುವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಕೇದಗೆದಡಿ ನಿವಾಸಿ ಬಾಲಚಂದ್ರ ಎಂಬವರ ಪುತ್ರಿ ಪ್ರಿಯಾ (10) ಎನ್ನಲಾಗಿದೆ. ಗುರುವಾರ ಸಂಜೆ ವೇಳೆ ತಲೆಕಟ್ಟಲು ಹೇಳಿದ್ದಕ್ಕೆ ತಾಯಿ ಬೈದರೆಂದು ಮುನಿಸಿಕೊಂಡು ಮನೆಯ ಶೌಚಾಲಯಕ್ಕೆ ತೆರಳಿದ್ದಳು. ಪ್ರಿಯಾ ಕಾಣಿಸದೇ ಇದ್ದ ಸಂದರ್ಭ ಮನೆಯವರು ಹುಡುಕಾಟ ನಡೆಸಿದಾಗ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ...
ಪುತ್ತೂರುಸುದ್ದಿ

ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಗುಡ್ ನ್ಯೂಸ್-ಪುತ್ತೂರಿನ ಕಾಡು ಪಿಜಿಯಲ್ಲಿ ಉದ್ಯೋಗಿಗಳಿಗೆ ಸಕಲ ವ್ಯವಸ್ಥೆ – ಕಹಳೆ ನ್ಯೂಸ್

ಪುತ್ತೂರು: ದೇಶದೆಲ್ಲೆಡೆ ಕೊರೋನಾ ಮಹಾಮಾರಿ ಹೆಚ್ಚಿನ ಸಂಖ್ಯೆಯಲ್ಲಿ ಹಬ್ಬಿದ ಕಾರಣ ಬಹಳಷ್ಟು ಕಡೆ ಐಟಿ- ಬಿಟಿ ಉದ್ಯೋಗ ಸ್ವ-ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನ ಕಲ್ಪಿಸಿದೆ. ಆದ್ರೆ ಲಾಕ್‍ಡೌನ್ ಸಂದರ್ಭ ತಮ್ಮ ತಮ್ಮ ಊರುಗಳಿಗೆ ಬಂದಂತ ಸಾಫ್ಟ್ ವೇರ್ ಉದ್ಯೋಗಿಗಳು ಮನೆಯಲ್ಲಿ ಸರಿಯಾದ ನೆಟ್‍ವರ್ಕ್ , ಇಂಟರ್‍ನೆಟ್ ಸೌಲಭ್ಯ ಇಲ್ಲದೆ ಪರದಾಡುವಂತಾಗಿದೆ. ಆದ್ರೆ ಇದೀಗ ಇಂತಹ ಸಮಸ್ಯೆಗಳಿಗೆ ಪುತ್ತೂರಿನ ನೆಹರು ನಗರದಲ್ಲಿರುವ ಕಾಡು ಪಿಜಿಯಲ್ಲಿ ಸಕಲ ಸೌಲಭ್ಯವನ್ನು...
ಕಾಸರಗೋಡುಮಂಜೇಶ್ವರಸುದ್ದಿ

ಇಂದಿನಿಂದ ಕಾಸರಗೋಡು ಜಿಲ್ಲೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ; ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶ – ಕಹಳೆ ನ್ಯೂಸ್

ಕಾಸರಗೋಡು, ಜು.17 : ಸಂಪರ್ಕದಿಂದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 17ರಿಂದ ಜುಲೈ 31 ರ ತನಕ ವಾಹನ ಸಂಚಾರಕ್ಕೆ ನಿಯಂತ್ರಣ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೂ ನಿಯಂತ್ರಣ ಅನ್ವಯವಾಗಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಅನಗತ್ಯವಾಗಿ ವಾಹನಗಳನ್ನು ರಸ್ತೆಗಿಳಿಸಿದ್ದಲ್ಲಿ ಕ್ರಮ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢ ; ಆಸ್ಪತ್ರೆ ಗೇಟ್ ಮುರಿದು ಬಾಣಂತಿ – ಮಗು ಕರೆದೊಯ್ದು ಪತಿ – ಕಹಳೆ ನ್ಯೂಸ್

ಬೆಳ್ತಂಗಡಿ, ಜು 17 ;ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪತಿ ಗೇಟ್ ಬೀಗ ಮುರಿದು ಆಸ್ಪತ್ರೆ ಪ್ರವೇಶಿಸಿದ್ದು ಮಗು ಮತ್ತು ಬಾಣಂತಿಯನ್ನು ತನ್ನ ಕಾರಿನಲ್ಲಿ ಕರೆದೊಯ್ದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಇಲ್ಲಿನ  ನಾವೂರು ಗ್ರಾಮದ ಮಹಿಳೆ ಬುಧವಾರ ಇಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು.ಈ ಸಂದರ್ಭ ಅವರ ಗಂಟಲದ್ರವ ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು.ಈ ನಡುವೆ ಬುಧವಾರ ರಾತ್ರಿಯೇ ಅವರಿಗೆ ಹೆರಿಗೆ ಆಗಿತ್ತು.ಗುರುವಾರ ಸಂಜೆ ಕೊರೊನಾ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಡತನ, ಅಂಗ ವೈಕಲ್ಯ ಮೀರಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಬಂಟ್ವಾಳದ ಭಾಗ್ಯಶ್ರೀ – ಕಹಳೆ ನ್ಯೂಸ್

ಬಂಟ್ವಾಳ‌‌‌, ಜು 16 : ವಿದ್ಯಾರ್ಥಿನಿಯೋರ್ವಳು ಬಡತನ, ಅಂಗವೈಕಲ್ಯವನ್ನು ಮೆಟ್ಟಿನಿಂತು ದ್ವಿತೀಯ ಪಿಯುಸಿಯಲ್ಲಿ 470 ಅಂಕ ಗಳಿಸಿ ಉತ್ತಮ ಸಾಧನೆಗೈದಿದ್ದಾಳೆ.   ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೇಶವ ಕುಲಾಲ್‌ ಹಾಗೂ ರಾಜೀವಿ ದಂಪತಿಯ ಪುತ್ರಿ ಭಾಗ್ಯಶ್ರೀ ಬಂಟ್ವಾಳದ ಎಸ್‌‌.ವಿ.ಎಸ್‌‌ ಕಾಲೇಜಿನಲ್ಲಿ ಕಲಿತು ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ 476 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಭಾಗ್ಯಶ್ರೀ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಲೊರೆಟ್ಟೋ ಚರ್ಚ್‌ ಶಾಲೆಯಲ್ಲಿ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕ ; ಪೈ ಟ್ರೇಡರ್ಸ್ ನ ಮಾಲಕ ಹರೀಶ್ ಪೈ ನಿಧನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರ ಪ್ರಮುಖ್ ಆಗಿ ಚಿರಪರಿಚಿತಗೊಂಡಿರುವ ಇಲ್ಲಿನ ಸಿಪಿಸಿ ಪ್ಲಾಝಾದಲ್ಲಿರುವ ಪೈ ಟ್ರೇಡರ್‍ಸ್‌ನ ಮಾಲಕ ಹರೀಶ್ ಪೈ(52ವ)ರವರು ಜು.14ರ ನಸುಕಿನ ಜಾವ ಮೃತಪಟ್ಟಿದ್ದಾರೆ. ಜು.೧೨ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರೊಂದಿಗೆ ಆದಿತ್ಯವಾರದ ಸ್ವಚ್ಛತಾ ಕಾರ್ಯವನ್ನು ಮುಗಿಸಿ ಮಧ್ಯಾಹ್ನ ದೇವಳದ ಹೊರಾಂಗಣದ ಗೋಪುರದಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ...
ದಕ್ಷಿಣ ಕನ್ನಡಪುತ್ತೂರು

Breaking News : ಶಾಂತಿಗೋಡಿನ 15 ವರ್ಷದ ಬಾಲಕಿ, ಬಲ್ಯದ ನರ್ಸ್‌ ಸಹಿತ ಪುತ್ತೂರು ತಾಲೂಕಿನಲ್ಲಿ 4 ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಇಂದು ಪುತ್ತೂರು ತಾಲೂಕಿನಲ್ಲಿ 4 ಕೊರೋನಾ ದೃಢಪಟ್ಟ ಕುರಿತು ವರದಿಯಾಗಿದೆ. ವಿದೇಶದಿಂದ ಬಂದು ಮಂಗಳೂರು ಖಾಸಗಿ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್ ಆಗಿರುವ ಇಚಿಲಂಪಾಡಿಯ ಸುಮಾರು 27 ವರ್ಷದ ಯುವಕ, ಮರೀಲ್ ಕ್ಯಾಂಪ್ಕೋ ವಸತಿ ಗೃಹದ ನಿವಾಸಿ 35 ವರ್ಷದ ಗೃಹಿಣಿ, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿರುವ ಬಲ್ಯ ಹೊಸ್ಮಠದ 22 ವರ್ಷದ ಯುವತಿ ಮತ್ತು ಶಾಂತಿಗೋಡು ನಿವಾಸಿ 15...
1 862 863 864 865 866 872
Page 864 of 872