Recent Posts

Monday, June 8, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು. ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಕೂರ್ನಡ್ಕದ ಬಾಣಂತಿ ಸಾವಿನ ಬೆನ್ನಲ್ಲೇ,10 ದಿನದ ಶಿಶುವಿಗೂ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು 09 : ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.   ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ‘ ಡೆಂಗ್ಯೂ ನಿಯಂತ್ರಣಕ್ಕಾಗಿ ಆಂದೋಲನ, ಸ್ವಚ್ಚ ಮನೆ ಪ್ರಶಸ್ತಿ’ ; ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಘೋಷಣೆ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 09 : ಸ್ವಚ್ಛತೆಯ ಕೊರತೆಯಿಂದಾಗಿ ಡೆಂಗ್ಯೂ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತಿದೆ. ಹಾಗಾಗಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸ್ವಚ್ಚತೆ ಅತೀ ಮುಖ್ಯವಾಗಿದ್ದು, ಸಾರ್ವಜನಿಕರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಸ್ವಚ್ಚ ಮನೆ ಆಂದೋಲನ ನಡೆಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ.   ಜುಲೈ ೮ರಂದು ಬೆಳ್ತಂಗಡಿ ತಾಲೂಕು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾಲೂಕಿನಲ್ಲಿರುವ 248 ಆಶಾಕಾರ್ಯಕರ್ತೆಯರು ತಮ್ಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ವಾಮದಪದವಿನಲ್ಲಿ ಕರ್ತವ್ಯನಿರತ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ವ್ಯಕ್ತಿಯೋರ್ವ ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ, ಇಲ್ಲಿಗೆ ಸಮೀಪದ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿರುವ ವ್ಯಕ್ತಿ. ಇಂದು ಬೆಳಿಗ್ಗೆ ಎಂದಿನಂತೆ ಮಮತಾ ಅವರು...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಪಾರೆಂಕಿಯ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಪಾರೆಂಕಿ ಗ್ರಾಮದ ಒಂದೇ ಕುಟುಂಬದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಡಂತ್ಯಾರಿನ ಸಂಬಂಧಿಕರ ಮನೆಯಲ್ಲಿದ್ದು ಮೀನು ಮಾರಾಟ ಮಾಡುತ್ತಿದ್ದ ಓರ್ವ ಪುರುಷರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಆ ಪೈಕಿ ಆ ಸಂಬಂಧಿಕರ ಮನೆಯ ಇಬ್ಬರು ಮಹಿಳೆಯರು , ಇಬ್ಬರು ಪುರುಷರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು ಇಂದು ಇದರ ವರದಿ ನಾಲ್ಕು ಜನರಿಗೂ ಪಾಸಿಟಿವ್ ಬಂದಿದೆ. ಈ ಮೂಲಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಘಾಟ್ ಬಂದ್! – ಕಹಳೆ ನ್ಯೂಸ್

ಬೆಳ್ತಂಗಡಿ: ಚಿಕ್ಕಮಗಳೂರು-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದು ಇದನ್ನು ತಪ್ಪಿಸಲು ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ತಿಳಿಸಿದ್ದಾರೆ. ಕಳೆದ ವರ್ಷದ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆಯೇ ಮಾಯವಾಗಿತ್ತು. ಕಳೆದೊಂದು ವಾರದಿಂದ ಚಿಕ್ಕಮಗಳೂರು, ಕೊಟ್ಟಿಗೆಹಾರ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮಣ್ಣು...
ದಕ್ಷಿಣ ಕನ್ನಡಸುಳ್ಯ

ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಗಳ ಸಹಿತ 6 ಮಂದಿಗೆ ಕೊರೊನಾ ಪಾಸಿಟಿವ್ ; ಆತಂಕದಲ್ಲಿ ಜನತೆ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು. ಸರಕಾರಿ ಆಸ್ಪತ್ರೆಯ ಒಬ್ಬರು ವೈದ್ಯಾಧಿಕಾರಿ, ಮೂವರು ನರ್ಸ್ ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ಉಪ್ಪಿನಂಗಡಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ ; ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್‌ರಿಂದ ಪದಪ್ರಧಾನ – ಕಹಳೆ ನ್ಯೂಸ್

ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 10ರಂದು ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ಜರಗಲಿದೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರವೀಂದ್ರ ದರ್ಭೆ ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿ, ರೋಟರಿ ವಲಯ-4ರ ಸಹಾಯಕ ಗವರ್ನರ್ ಹಾಗೂ ವಿಧಾನ ಪರಿಷತ್ ಸದಸ್ಯ  ಪ್ರತಾಪಸಿಂಹ ನಾಯಕ್ ಪದಪ್ರಧಾನ ಮಾಡಲಿದ್ದಾರೆ. ರೋಟರಿ ವಲಯ ಸೇನಾನಿ ಜೆರೋಮಿಯಸ್ ಪಾಯಸ್, ಮಾತೃ ಘಟಕವಾದ ಪುತ್ತೂರು...
1 877 878 879 880 881 885
Page 879 of 885