Recent Posts

Monday, June 8, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮೂಲದ 32 ವರ್ಷದ ಮಹಿಳೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮೂರು ಮಂದಿ ಬಲಿ ; ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 08 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ...
ದಕ್ಷಿಣ ಕನ್ನಡಮೂಡಬಿದಿರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಸಾವು – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26 ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು. 07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್‌ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಒಂದು ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇದೀಗ ಮಂಗಳವಾರ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು ಈವರೆಗೆ ಜಿಲ್ಲೆಯಲ್ಲಿ...
ಪುತ್ತೂರುಸುದ್ದಿ

ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿ ನೀಡಿದ ಪುತ್ತೂರಿನ ಹಿರಿಯ ವೈದ್ಯೆ ಡಾ.ಗೌರಿ ಪೈ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹಿರಿಯ ವೈದ್ಯೆ ಡಾ. ಗೌರಿ ಪೈಯವರು ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಅವರ ಮುಖಾಂತರ ಪ್ರಧಾನಿಯವರ ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿಗಳನ್ನು ಚೆಕ್ ಮುಖಾಂತರ ದೇಣಿಗೆ ನೀಡಿದರು....
ಕಾಸರಗೋಡುಮಂಜೇಶ್ವರಸುದ್ದಿ

ಕುಂಬಳೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಮನೆಯಲ್ಲಿತ್ತು 4 ಕೆ.ಜಿ ಗಾಂಜಾ ; ಆರೋಪಿ ಮುಹಮ್ಮದ್ ಬಾತಿಷಾ ಅಂದರ್ – ಕಹಳೆ ನ್ಯೂಸ್

ಕುಂಬಳೆ, ಜು 06 : ನಾಲ್ಕು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ . ಬಂಧಿತನನ್ನು ಬಂದ್ಯೋಡು ಅಡ್ಕದ ಬಾಡಿಗೆ ಕಟ್ಟಡದಲ್ಲಿ ವಾಸವಾಗಿರುವ ಕುಕ್ಕಾರು ಮೂಲದ ಮುಹಮ್ಮದ್ ಬಾತಿಷಾ (36) ಎಂದು ಗುರುತಿಸಲಾಗಿದೆ . ಈತ ಕಾಮಗಾರಿ ನಡೆಯುತ್ತಿದ್ದ ಮನೆಯೊಳಗೆ 4 ಕೆ.ಜಿ ಗಾಂಜಾವನ್ನು ಬಚ್ಚಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದು ಕಾರ್ಯಾಚರಣೆ ವೇಳೆ ಬಚ್ಚಿಡಲಾಗಿದ್ದ 4 ಕೆ. ಜಿ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ....
ಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಬೈಕ್‌ಗಳ ಕಳವು ಪ್ರಕರಣ ; ಐವರು ಆರೋಪಿಗಳ ಹೆಡೆಮುರಿಕಟ್ಟಿದ ಎಸ್.ಐ. ನಂದಕುಮಾರ್ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 05 : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.     ಬಂಧಿತ ಆರೋಪಿಗಳನ್ನು ಸುರತ್ಕಲ್‌ನ ವಿಜಯ ಯಾನೆ ಆಂಜನೇಯ (23), ಉಳಾಯಿಬೆಟ್ಟು ನಿವಾಸಿ ಪ್ರದೀಪ್ ಯಾನೆ ಚೇತನ್ ಯಾನೆ ಪ್ರದಿ ( 27), ಬಂಟ್ವಾಳದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಮಂಗಳೂರಿನ ಕೋವಿಡ್ ಆಸ್ಪತ್ರೆಯಿಂದ ಪುತ್ತೂರಿನ ಸೋಂಕಿತ ಪರಾರಿ – ಕಹಳೆ ನ್ಯೂಸ್

ಮಂಗಳೂರು : ಪುತ್ತೂರು ಮೂಲದ ವ್ಯಕ್ತಿ ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದಿದ್ದವನನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಜುಲೈ ೫ರಂದು ಈತನಿಗೆ ಕೋವಿಡ್ 19 ಇರುವುದು ದೃಢ ಪಟ್ಟಿದೆ‌. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪುತ್ತೂರುಸುದ್ದಿ

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ – ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ‘ Jio Mart ‘ ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! – ಕಹಳೆ ನ್ಯೂಸ್

ಎಸ್, ಪುತ್ತೂರಿನ ರಿಲಯನ್ಸ್ ಸ್ಮಾರ್ಟ್‌ನಿಂದ ಜಿಯೋ ಮಾರ್ಟ್ ನಿಂದ ಗ್ರಾಹಕರಿಗೆ ಬಂಪರ್ ಆಫರ್! Jio Mart ' ಲಾಕ್ ಡೌನ್ ಸಂಡೇ ' ಗೆ ಸ್ಪೆಷಲ್ ಆಫರ್ ನೀಡಿದೆ. July 5, ಭಾನುವಾರ ಮಾತ್ರ ಸ್ಪೆಷಲ್ ಆಫರ್ ..! ಏನು ಈ ಆಫರ್ ಅಂತಿರಾ..? ?ಮೊಬೈಲ್‌ ನಲ್ಲಿ ಬುಕ್ ಮಾಡಿ, ನಿಮ್ಮ ಮನೆ ಬಾಗಿಲಿಗೆ ಬರಲಿದೆ ದಿನ ನಿತ್ಯದ ಸಾಮಾಗ್ರಿ ಉಚಿತವಾಗಿ...! Login to : https://www.jiomart.com/...
ಪುತ್ತೂರುಸುದ್ದಿ

” ಇಂಗು ತಿಂದ ಮಂಗನಂತಾದ ಮೊಹಮದ್..!? ” – ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾ ಸಂದೇಶ ರವಾನಿಸಿದ್ದಾರೆಂದು ಆರೋಪಿಸಿದ್ದ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯರ ವಿರುದ್ಧ ಎಸ್.ಡಿ.ಪಿ.ಐ.ಯ ಮುಖಂಡನ ಖಾಸಗಿ ದೂರು ಅರ್ಜಿಯನ್ನು ಸ್ವಯಂ ಪ್ರೇರಿತರಾಗಿ ವಜಾಗೊಳಿಸಿದ ನ್ಯಾಯಾಧೀಶರು – ಕಹಳೆ ನ್ಯೂಸ್

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಸಂದೇಶ ರವಾನಿಸಿದ ಡಾ.ಸುರೇಶ್ ಪುತ್ತೂರಾಯರವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಪುರುಷರಕಟ್ಟೆಯ ಪಿ.ಬಿ.ಕೆ. ಮೊಹಮ್ಮದ್ ಎಂಬವರು ವಕೀಲ ಅಬ್ದುಲ್ ಮಜೀದ್ ಖಾನ್‌ರವರ ಮೂಲಕ ಸಲ್ಲಿಸಿದ್ದ ಖಾಸಗಿ ದೂರನ್ನು ಪುತ್ತೂರು ಸೀನಿಯರ್ ಸಿವಿಲ್ ಜಡ್ಜ್ ಮತ್ತು ಎ.ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್‌ರವರು ವಜಾಗೊಳಿಸಿ ಜುಲೈ 3ರಂದು ಆದೇಶ ನೀಡಿದ್ದಾರೆ. ಸ್ವಯಂಪ್ರೇರಿತರಾಗಿ ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು : ಸಾಮಾಜಿಕ ಜಾಲತಾಣವಾದ...
1 878 879 880 881 882 885
Page 880 of 885