Sunday, September 6, 2026

ಪ್ರಾದೇಶಿಕ

ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಪ್ಯೂರ್ ಪ್ರೇಯರ್ ಸಂಸ್ಥೆ ಅವ್ಯವಹಾರ ನಡೆಸಿದೆ ಎನ್ನುವ ವಿಚಾರ ; ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‍ಲೈನ್ ಸೇವೆಗಳ ನಿರ್ವಹಣೆ ಫ್ಯೂರ್ ಪ್ರೇಯರ್ ಸಂಸ್ಥೆಗಿಲ್ಲ – ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಆನ್‍ಲೈನ್ ಸೇವೆಗಳ ನಿರ್ವಹಣೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಯನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾನು ಮುಜರಾಯಿ ಸಚಿವನಾಗಿ ಆಯ್ಕೆಯಾಗುವ ಮೊದಲೇ ರಾಜ್ಯದ 54 ದೇವಸ್ಥಾನಗಳ ಸೇವೆಯನ್ನು ಆನ್ ಲೈನ್ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿತ್ತು. ಇದಕ್ಕಾಗಿ ಸರ್ವೆಯನ್ನೂ ನಡೆಸಲಾಗಿದ್ದು, ಪ್ಯೂರ್ ಪ್ರೇಯರ್ ಸಂಸ್ಥೆಗೆ 15 ಜಿಲ್ಲೆಗಳ ದೇವಸ್ಥಾನಗಳನ್ನು ಬಿಟ್ಟುಕೊಡಲಾಗಿತ್ತು. ಉಳಿದ ಜಿಲ್ಲೆಗಳ ಸರ್ವೇ ಕಾರ್ಯವನ್ನು ಇನ್ನಷ್ಟೇ ಮಾಡಬೇಕಿದೆ. ಈ ನಡುವೆ...
ಪುತ್ತೂರುರಾಜಕೀಯ

ಪುತ್ತೂರು ಬಿಜೆಪಿ ಕಚೇರಿಗೆ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಭೇಟಿ ; ನೂತನ ಅಧ್ಯಕ್ಷರಿಗೆ ಬಿಜೆಪಿ ಮುಖಂಡರಿಂದ ಗೌರವ ಸಮರ್ಪಣೆ – ಕಹಳೆ ನ್ಯೂಸ್

ಪುತ್ತೂರು: ನಮ್ಮ ಯುವಕರಲ್ಲಿ ದುಡಿಯವ ಸಂಸ್ಕೃತಿ ಕಡಿಮೆ. ಇದಕ್ಕೆ ಕಾರಣ ರಾಜಕರಾಣಗಳು. ದುಡಿಯುವ ಸಂಸ್ಕೃತಿಯಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು ಹೇಳಿದರು. ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್(ಕಿಯೋನಿಕ್ಸ್)ನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅವರು ಪುತ್ತೂರು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ ನೀಡಿದರು. ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದಿಂದ ಅವರನ್ನು ಅಭಿನಂದಿಸಲಾಯಿತು. ಇದೇ...
ಪುತ್ತೂರುಸುದ್ದಿ

ಜೂ.21ಕ್ಕೆ ಖಂಡ ಗ್ರಾಸ ಸೂರ್ಯಗ್ರಹಣ ಹಿನ್ನಲೆ : ಹತ್ತೂರ ಒಡೆಯ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯ ಬದಲಾವಣೆ – ಕಹಳೆ ನ್ಯೂಸ್

ಪುತ್ತೂರು: ಜೂ.21ಕ್ಕೆ ಖಂಡ ಗ್ರಾಸ ಸೂರ್ಯಗ್ರಹಣ ನಡೆಯಲಿರುವುದರಿಂದ ದೇವಸ್ಥಾನದಲ್ಲಿ ಸಾರ್ವಜನಿಕ ದರುಶನಕ್ಕೆ ಸಮಯ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆಯೇ ಮಧ್ಯಾಹ್ನದ ಪೂಜೆ ನಡೆಯಲಿದ್ದು ಬಳಿಕ ಬಾಗಿಲು ಮುಚ್ಚಲಾಗುವುದು. ಬೆಳಿಗ್ಗೆ ಗಂಟೆ 7.30ಕ್ಕೆ ಪ್ರಾತಃ ಕಾಲ ಪೂಜೆ, ನಂತರ ಗಂಟೆ 9.15ಕ್ಕೆ ಮದ್ಯಾಹ್ನ ಪೂಜೆ ನಡೆಯಲಿದ್ದು, ಬಳಿಕ ಬಾಗಿಲು ಹಾಕಲಾವುದು. ಸಂಜೆ ಗಂಟೆ 4ಕ್ಕೆ ಬಾಗಿಲು ತೆರೆಯುವುದು. ರಾತ್ರಿ ಗಂಟೆ 7.30ರ ರಾತ್ರಿ ಪೂಜೆ ನಡೆಯಲಿದೆ. ಈ ನಡುವೆ ದೇವಳದಲ್ಲಿ ಗ್ರಹಣ ಶಾಂತಿ...
ಪುತ್ತೂರುಸುದ್ದಿ

ಕಬಕ ರೈಲ್ವೆ ಕ್ರಾಸಿಂಗ್ ಬಳಿ ಇರುವ ತಂತಿಯ ಬದಲಾವಣೆ: ನಾಳೆ ಕರೆಂಟ್ ಇಲ್ಲ ಎಂದ ಮೆಸ್ಕಾಂ- ಕಹಳೆ ನ್ಯೂಸ್

ಕ.ವಿ.ಪ್ರ.ನಿ.ನಿ ಬೃಹತ್ ಕಾಮಗಾರಿ ವಿಭಾಗ ಇವರ ವತಿಯಿಂದ ಕಬಕ ರೈಲ್ವೆ ಕ್ರಾಸಿಂಗ್ ಬಳಿ 110ಕೆವಿ ದ್ವಿಮಾರ್ಗದ ಹಾಲಿ ಇರುವ ತಂತಿಯ ಬದಲಾವಣೆ ಕಾರ್ಯಕ್ಕೆ ಸಂಬಂಧಪಟ್ಟಂತೆ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ 110/33/11ಕೆವಿ, ಪುತ್ತೂರು ಕರಾಯ ಮತ್ತು ಮಾಡಾವು ಉಪಕೇಂದ್ರಗಳ 110ಕೆವಿ ಮಾರ್ಗದ ವಿದ್ಯುತ್ ನಿಲುಗಡೆ ಮಾಡುವುದಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದೆ. ಇನ್ನೂ 110/33/11ಕೆವಿ ಪುತ್ತೂರು, ಕರಾಯ, ಮತ್ತು ಮಾಡಾವು...
ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ ರಾಷ್ಟ್ರ ಭಕ್ತ ಸಮಿತಿಯಿಂದ ಹುತಾತ್ಮ ಯೋಧರಿಗೆ ನಮನ ; ಮೌನ ಪ್ರಾರ್ಥನೆಗೆ ಜೊತೆಯಾದ ಸಂಘಪರಿವಾರದ ಕಾರ್ಯಕರ್ತರು – ಕಹಳೆ ನ್ಯೂಸ್

ಸುಳ್ಯ : ಭಾರತ ಮತ್ತು ಚೀನಾ ಗಡಿಯಲ್ಲಿ ನಡೆದ ಘಟನೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ‌ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಭಜರಂಗದಳ, ವಿಶ್ವ ಹಿಂದೂ ಪರಿಷದ್,...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಆಕ್ರೋಶ ; ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿದ ವಿದ್ಯಾರ್ಥಿ ಶಕ್ತಿ – ಕಹಳೆ ನ್ಯೂಸ್

ಪುತ್ತೂರು: ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಜತೆಗಿನ ಗಡಿ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ 20 ಯೋಧರು ಹುತಾತ್ಮರಾದ ಬಳಿಕ ದೇಶದಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಒತ್ತಡ ಹೆಚ್ಚುತ್ತಿದೆ. ಪುತ್ತೂರಿನಲ್ಲೂ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಜೊತೆಗೆ ಜೂ. 18ರಂದು ಮುಸ್ಸಂಜೆ ಇಲ್ಲಿನ ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಎಬಿವಿಪಿ ಕಾರ್ಯಕರ್ತರು ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಂಘಪರಿವಾರದ ಹಿರಿಯ ಕಾರ್ಯಕರ್ತ ಚಂದ್ರಶೇಖರ್ ಅವರು ಹುತಾತ್ಮ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹುತಾತ್ಮ ಯೋಧರಿಗೆ ನಮನ ; ಹಣತೆ ಹಚ್ಚಿ, ತಾಯಿ ಭಾರತಮಾತೆಗೆ ಪುಷ್ಪಾರ್ಚನೆ – ಕಹಳೆ ನ್ಯೂಸ್

ಪುತ್ತೂರು: ಲಾಡಕ್‌ನ ಗಡಿಯಲ್ಲಿ ಹುತಾತ್ಮರದ ಯೋಧರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಣತೆ ಹಚ್ಚಿ, ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜೂ. 18ರಂದು ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರ ಮಂಡಲದ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್...
ದಕ್ಷಿಣ ಕನ್ನಡಪುತ್ತೂರು

” ಚೀನಾ ನರಿ ಬುದ್ದಿಗೆ ಭಾರತ ತಕ್ಕ ಉತ್ತರ ಕೊಡಲಿದೆ ” – ಪುತ್ತೂರಿನಲ್ಲಿ ಹುತಾತ್ಮ ಭಾರತೀಯ ಯೋಧರಿಗೆ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಶ್ರದ್ಧಾಂಜಲಿ ; ಪ್ರಧಾನಿ ನಡೆ ಸಮರ್ಥನೆ, ಶ್ಲಾಘನೆ – ಕಹಳೆ ನ್ಯೂಸ್

ಪುತ್ತೂರು : ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿವರಿಗೆ ಬೆಂಬಲವಾಗಿ ನಾವು ಚೀನಾ ವಿರೋಧವನ್ನು ಕೇವಲ ಮಾತಿನಲ್ಲಿ ಹೇಳದೆ ಕೃತಿಯಲ್ಲೂ ಮಾಡಿ ತೋರಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂದು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು. ಜೂ.೧೬ರಂದು ಗಡಿಯಲ್ಲಿ ಚೀನಾದೊಂದಿಗೆ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಇಲ್ಲಿನ ಕಿಲ್ಲೆ ಮೈದಾನದ ಅಮರ್...
1 898 899 900 901
Page 900 of 901