Thursday, July 23, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುರಾಜ್ಯಶಿಕ್ಷಣಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರ: ಪ್ರತೀ ಗ್ರಾಮಕ್ಕೊಂದು ಕೆಪಿಎಸ್ ಶಾಲೆ ಮಂಜೂರು ಮಾಡಿ: ಶಾಸಕ ಅಶೋಕ್ ರೈ ಮನವಿ -ಕಹಳೆ ನ್ಯೂಸ್

ಪುತ್ತೂರು: ಗ್ರಾಮಾಂತರ ಪ್ರದೇಶದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ತನ್ನ ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮಕ್ಕೊಂದರಂತೆ ಕೆಪಿಎಸ್ ಶಾಲೆಯನ್ನು ಮಂಜೂರುಗೊಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಶ್ಮಿ ಮಹೇಶ್ ರವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಇಲಾಖಾ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈ ಮನವಿ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ಬಡ ಮಕ್ಕಳು ಗುಣ ಮಟ್ಟದ ಶಿಕ್ಷಣದಿಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನೆ – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು : "ಸುಮಾರು 75 ವರ್ಷಗಳ ಇತಿಹಾಸವಿರುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನವು ವಹಿಸಿಕೊಂಡ ನಂತರ ಈ ಪ್ರದೇಶಕ್ಕೆ ಒಂದು ಉತ್ತಮವಾದ ಶಿಕ್ಷಣ ವ್ಯವಸ್ಥೆಯನ್ನು ನೀಡುವ ಕನಸಿನೊಂದಿಗೆ, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಬೇಕೆಂಬ ದೃಷ್ಟಿಯಿಂದ ಶಾಲೆಯ ಮೂಲಭೂತ ಸೌಕರ್ಯದೊಂದಿಗೆ ಈ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡುತ್ತಿದ್ದೇವೆ" ಎಂದು ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ದೀಪ ಬೆಳಗಿಸಿ ಮಾತನಾಡಿದರು. ಜು. 09...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕ ನಿರಂಜನ ರೈ ಹೃದಯಾಘಾತದಿಂದ ನಿಧನ..!!! -ಕಹಳೆ ನ್ಯೂಸ್

ಪುತ್ತೂರು, : ಕಾಂಗ್ರೆಸ್‌ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಬುಧವಾರ ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟರು.ಕೆಲಸದ ನಿಮಿತ್ತ ತಾಲೂಕು ಕಚೇರಿಗೆ ಆಗಮಿಸಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಉಪ್ಪಿನಂಗಡಿ ಸಮೀಪದ ಮಠಂತಬೆಟ್ಟು ನಿವಾಸಿಯಾಗಿದ್ದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಯಕ್ಷದ್ರುವ ಪಟ್ಲ ಪೌಂಡೇಶನ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಯಕ್ಷ ಶಿಕ್ಷಣತರಬೇತಿ ಉದ್ಘಾಟನೆ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ತಾನು ಪಡೆದ ಖ್ಯಾತಿಯನ್ನು ಇತರೆ ಕಲಾವಿದರಿಗೆ ಧಾರೆಯುವುದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಟ್ರಸ್ಟ್ ನ ಮುಖ್ಯ ಉದ್ದೇಶ ನಮ್ಮ ಮಣ್ಣಿನ ಕಲೆಯ ಮೂಲಕ ಸಂಸ್ಕೃತಿಯನ್ನು, ಕಲಿಕೆಯಲ್ಲಿ ಏಕಾಗ್ರತೆಯನ್ನು ಆತ್ಮಸ್ಥೈರ್ಯವನ್ನು ಮೂಡುವುದು.ಮನಸ್ಸಿಗೆ ನೆಮ್ಮದಿ ಕೊಡುವ ಕಲೆ ಅದೇ ಯಕ್ಷಗಾನದ ಕಲೆ ಎಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಶಿಕ್ಷಣ ತರಬೇತಿಯನ್ನು ಉದ್ಘಾಟನೆ ಮಾಡಿ ಶ್ರೀ ವಾಸುದೇವ ಐತಾಳ ಪಣಂಬೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್: ಬಜರಂಗದಳದ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ – ಕಹಳೆ ನ್ಯೂಸ್

ಪುತ್ತೂರು: ಅಕ್ರಮವಾಗಿ ಹಸುವನ್ನು ಮಾಂಸ ಮಾಡುವ ಉದ್ದೇಶದಿಂದ ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಯಾಪು ಗ್ರಾಮದ ಮರಕ್ಕ ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಉಪನಿರೀಕ್ಷಕಿ (ತನಿಖೆ) ಸುಷ್ಮಾ ಜಿ. ಭಂಡಾರಿ ಅವರ ನೇತೃತ್ವದ ತಂಡ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಪಿಕಪ್ ವಾಹನವನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾಣಿಯಿಂದ ಸಂಪಾಜೆಗೆ ಸಂಪರ್ಕಿಸುವ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನ ವರದಿ ರೆಡಿ, ಡಿಪಿಆರ್ ಸಲ್ಲಿಸುವಂತೆ ಶಾಸಕ ಅಶೋಕ್ ರೈ ಮನವಿ.- ಕಹಳೆ ನ್ಯೂಸ್

ಪುತ್ತೂರು : ಕೋಟ್ಯಂತರ ರೂ. ವೆಚ್ಚದಲ್ಲಿ ಬಹು ನಿರೀಕ್ಷೆಯ ಪ್ರಾಜೆಕ್ಟ್ ಆಗಿರುವ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನೆಯ ವರದಿ (ಡಿಪಿಆರ್) ಸಿದ್ಧವಾಗಿದ್ದು, ಅದರ ಅಪ್ರೂವಲ್‌ಗಾಗಿ ಸರಕಾರಕ್ಕೆ ಡಿಪಿಆರ್ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಆಯುಕ್ತರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರಕಾರದ ಮೂಲಕ ೩.೧೯ ಕೋಟಿ ರೂ ವೆಚ್ಚದಲ್ಲಿ ಡಿಪಿಆರ್ ಸಿದ್ದಪಡಿಸಲಾಗಿದೆ. ಲೋಕೋಪಯೋಗಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿಯವರ ಮೂಲಕ ಮಾಣಿ- ಸಂಪಾಜೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ನೂಜಿಬರೆ ಮೇಲು ಮನೆಯ ನಿವಾಸಿ ರಂಜಿತ್ ಕುಮಾರ್ ರೈ ಅವರು 2026ನೇ ಸಾಲಿನ ಡಿ.ಜಿ ಮತ್ತು ಐ.ಜಿ.ಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿದ್ದು, ಕುಟುಂಬದವರು ಹಾಗೂ ಊರಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ರಂಜಿತ್ ಕುಮಾರ್ ರೈ ಅವರು ಗಣೇಶ್ ರೈ ಎನ್.ಬಿ. ಮತ್ತು ರತ್ನವತಿ ಜಿ. ದಂಪತಿಯ ಪುತ್ರರಾಗಿದ್ದಾರೆ. ಅವರ ಪತ್ನಿ ಕೃತಿ ಆರ್. ರೈ ಆಗಿದ್ದು, ಹೃದ್ಯಾಂಶ್ ಆರ್. ರೈ ಮತ್ತು ಮೇದಾಂಶ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆ – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು :ಸದಾ ಚಟುವಟಿಕೆ ಲವಲವಿಕೆ ಆರೋಗ್ಯದಿಂದಿರಲು ಯೋಗ ಉತ್ತಮ ಮಾರ್ಗವಾಗಿದೆ ಇದು ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ವಿದ್ಯೆ. ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿಕೊಟ್ಟದ್ದು ನಮ್ಮ ಭಾರತ. ದೇಹ ಮನಸ್ಸನ್ನು ಸಮತೋಲಿಸಿಕೊಂಡು ಮಹರ್ಷಿ ಪತಂಜಲಿ ಅವರಿಂದ ಪ್ರಣಿತವಾದ ಯೋಗವನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು. ನಾವಿಂದು ಆಚರಿಸುವ ಯೋಗ ದಿನಾಚರಣೆಯು ನಿರಂತರ ಅಭ್ಯಾಸವಾಗಿ ನಮ್ಮ ಜೀವನ ಸದಾ ಆರೋಗ್ಯದಿಂದ ಕೂಡಿರುವಂತಾಗಲಿ ಎಂದು ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್...
1 2 3 359
Page 1 of 359