Recent Posts

Sunday, June 7, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬ ವಿಶೇಷ ಸಂಭ್ರಮದಿಂದ ಆಚರಣೆ -ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್ ಉಪಸ್ಥಿತರಿದ್ದರು. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್, ಹೋಟೆಲ್ ರಾಮ, ಜಿ.ಎಲ್. ಪ್ರಾಪರ್ಟೀಸ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: "ಇರುವುದೊಂದೇ ಪರಿಸರ ಈ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ"ಎಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪರಿಸರ ದಿನಾಚರಣೆ ಮಹತ್ವವನ್ನು ವಿವರಿಸಿದರು. ವಿಶ್ವ ಪರಿಸರ ದಿನಾಚರಣೆ ಮಹತ್ವದ ಬಗ್ಗೆ ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.ವಿದ್ಯಾರ್ಥಿಗಳಿಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀಕೃಷ್ಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಅಹನಾ, ಎ. NMMS ಪರೀಕ್ಷೆಯಲ್ಲಿ ತೇರ್ಗಡೆಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ – ಕಹಳೆ ನ್ಯೂಸ್

ಪಟ್ಟೆ :ಶ್ರೀಕೃಷ್ಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಅಹನಾ, ಎ. NMMS ಪರೀಕ್ಷೆಯಲ್ಲಿ ತೇರ್ಗಡೆಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಈಶ್ವರಮಂಗಲದಲ್ಲಿರುವ ಶ್ರೀಯುತ ಅಶೋಕ ಎ ಹಾಗೂ ಯಶೋಧ ಇವರ ಪುತ್ರಿ. ಶ್ರೀ ಕೃಷ್ಣವಿದ್ಯಾ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿದೆ. ಶೈಕ್ಷಣಿಕ್ಷೇತ್ರದಲ್ಲಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದುಕೊಂಡು ಸಂಸ್ಥೆಯಾಗಿದೆ. NMMS ಪರೀಕ್ಷೆಯಲ್ಲಿ ತೇರ್ಗಡೆ ಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ ಕುಮಾರಿ ಅಹನಾ ಇವಳನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮರುಮೌಲ್ಯಮಾಪನದಲ್ಲಿ ಹೆಚ್ಚು ಅಂಕ ಗಳಿಸಿದ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು : ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪ್ರೌಢಶಾಲಾ ವಿಭಾಗದ 2025-26 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮರು ಪರೀಕ್ಷೆಗೆ ಎರಡು ವಿದ್ಯಾರ್ಥಿಗಳು ಹಾಜರಾಗಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಹತ್ತನೇ ತರಗತಿಯ ಪೂರ್ವಿ 549 ಹಾಗೂ ಫಾತಿಮಾ ತರಾ 538 ಅಂಕಗಳನ್ನು ಪಡೆದು ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಗೊಂಡಿರುತ್ತಾರೆ. 2025-26 ನೇ ಸಾಲಿನ 10ನೇ ತರಗತಿಯ ಮರು ಮೌಲ್ಯ ಮಾಪನದಲ್ಲಿ ತೃತಿಕ್ 577 ಅಂಕಗಳನ್ನು ಪಡೆದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ ಮತ್ತು ವಿದ್ಯಾ ಸಂಕಲ್ಪ -ಕಹಳೆ ನ್ಯೂಸ್

ಪುತ್ತೂರು : ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇವರ ಜಂಟಿ ಆಶ್ರಯದಲ್ಲಿ, ವಿದ್ಯಾರ್ಥಿಗಳಲ್ಲಿ ವಿದ್ಯೆ, ಸಂಸ್ಕಾರ ಮತ್ತು ಏಕಾಗ್ರತೆಯನ್ನು ಬೆಳೆಸುವ ಉದ್ದೇಶದಿಂದ ಜೂನ್ 7ರಂದು ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸಾಮೂಹಿಕ “ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಶ್ರೀ ಮುಂಡ್ಯತ್ತಾಯ ದೈವಸ್ಥಾನ ಪಾಂಗಳಾಯಿ, ಮುಳಿಯ ದೇವರಕಟ್ಟೆ, ಕೋರ್ಟ್ ರಸ್ತೆ, ಅಟಲ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ 2026-27 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: "ಶಿಕ್ಷಣದಿಂದ ವಿದ್ಯಾರ್ಥಿಗಳು ಸಂಸ್ಕಾರವಂತರಾಗಬೇಕು, ಸತ್ಪ್ರಜೆಗಳಾಗಬೇಕು. ಶೈಕ್ಷಣಿಕವಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಅತ್ಯುತ್ತಮ ಸಾಧಕಾ ರಗಬೇಕೆಂದು"ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜೂನ್ ಒಂದರಂದು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನೂತನವಾಗಿ ದಾಖಲೆಗೊಂಡ ಹಾಗೂ ಇತರ ವಿದ್ಯಾರ್ಥಿಗಳನ್ನು ಶಾಲಾ ಪ್ರವೇಶದ್ವಾರದಿಂದ ಬ್ಯಾಂಡ್ ಸೆಟ್ ನೊಂದಿಗೆ ಕರೆತರಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶಾಸಕ ಅಶೋಕ್ ರೈ ಯವರಿಗೆ ಸಚಿವ ಸ್ಥಾನ ಸಿಗುವಂತೆ ಮಹಾಲಿಂಗೇಶ್ವರ ದೇವರಿಗೆ ಪೂಜೆ ಮಾಡಿಸಿ ಪ್ರಾರ್ಥನೆ -ಕಹಳೆ ನ್ಯೂಸ್

ಪುತ್ತೂರು:  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಕೃಷ್ಣಪ್ರಸಾದ್ ಅಳ್ವರವರ ನೇತೃತ್ವದಲ್ಲಿ ಇಂದು ನಮ್ಮ ಶಾಸಕರಾದ ಅಶೋಕ್ ಕುಮಾರ್ ರೈಯವರಿಗೆ ಸಚಿವ ಸ್ಥಾನ ಸಿಗುವಂತೆ ಅನುಗ್ರಹಿಸುವಂತೆ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ಈ ಸಂಧರ್ಭದಲ್ಲಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಸಾಮಾಜಿಕ ಜಾಲತಾಣ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ, ಬನ್ನೂರು ವಲಯಾಧ್ಯಕ್ಷ ರೋಶನ್ ರೈ ಬನ್ನೂರು,ನವೀನ್ ಕರ್ಕೇರ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯ

ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” :  ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ-ಕಹಳೆ ನ್ಯೂಸ್

ಬೆಂಗಳೂರು: ಮಣಿಪಾಲ್ ಸೆಂಟರ್‌ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. “Widest Range, Endless Wows!” ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಅವಕಾಶಗಳನ್ನು ಒದಗಿಸುತ್ತಿದೆ. ಉತ್ಸವದ ಅಂಗವಾಗಿ ಪ್ರತಿಯೊಂದು ಖರೀದಿಗೂ ಸೀರೆ, ಸ್ಕ್ರಾಚ್ ಕಾರ್ಡ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ಗೆಲ್ಲುವ ಅವಕಾಶ ನೀಡಲಾಗುತ್ತದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ...
1 2 3 355
Page 1 of 355