ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ಉಪನ್ಯಾಸ ಕಾರ್ಯಗಾರ ; ಜಗತ್ತು ಕಂಡ ಅಪ್ರತಿಮ ಮೇರು ವ್ಯಕ್ತಿ ಶಿವರಾಮ ಕಾರಂತ : ಡಾ. ನರಸಿಂಹಮೂರ್ತಿ. ಆರ್ -ಕಹಳೆ ನ್ಯೂಸ್
ಪುತ್ತೂರು: 20 ನೇ ಶತಮಾನದಲ್ಲಿ, ಜಗತ್ತು ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ ಪಟ್ಟಿ ಮಾಡಿದರೆ ಶಿವರಾಮಕಾರಂತರು ಅಗ್ರಗಣ್ಯರು . ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನನ್ನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಮಾದರಿ ಶಿರಾಮಕಾರಂತರು.ನಾಲ್ಕು ಗೋಡೆಯ ಮಧ್ಯೆ ಮಕ್ಕಳನ್ನು ಬೆಳೆಸುವ ಬದಲು ಮಕ್ಕಳು ಪರಿಸರದೊಂದಿಗೆ ಬೆರೆಯುವುದರ ಮೂಲಕ ಪರಿಸರದ ಒಂದು ಭಾಗವಾಗಬೇಕು ಎಂಬ ಕಾರಣದಿಂದ ಶಿಕ್ಷಣದಲ್ಲಿ ಹೊಸ ಆಲೋಚನೆಗಳನ್ನು ತಂದರು.ಕಾರಂತರ ಪುಸ್ತಕಗಳನ್ನು ಓದುದರ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬಹುದು...







