Friday, July 24, 2026

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್ ಕರಿಮಣಿ ಮೇಳ : ಇನ್ನು ಕೇವಲ 4 ದಿನ ಮಾತ್ರ : ಇನ್ಯಾಕೆ ತಡ ಇಂದೇ ಭೇಟಿ ನೀಡಿ

ಪುತ್ತೂರು: ಅನಾದಿಕಾಲದಿಂದಲೂ ‘ಕರಿಮಣಿ’ ಹೆಣ್ಣಿನ ಮನಸಿಗೂ–ಘನತೆಗೂ ಹಾಗೂ ಗಂಡನ ಆಯಸ್ಸು–ಶ್ರೇಯಸ್ಸು–ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ. ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಕರಿಮಣಿಯನ್ನು ಸುಮಂಗಲಿಯರು ಬದಲಾಯಿಸಲು ಅಥವಾ ಹೊಸ ಕರಿಮಣಿ ಸರ ಖರೀದಿಸಲು ಬಯಸುತ್ತಿದ್ದರೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ‍್ಸ್‌ಗೆ ಭೇಟಿ ನೀಡಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ‍್ಸ್‌...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ಮಂಗಳೂರು : ಕಂಬಳ, ಯಕ್ಷಗಾನ, ಜಾತ್ರೆಗಿಲ್ಲ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ : ಜಿಲ್ಲಾಡಳಿತ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. 'ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯರ 101ನೇ ಜನ್ಮದಿನಾಚರಣೆ : ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ ಕೊಡುಗೆ-ಕಹಳೆ ನ್ಯೂಸ್

ಪುತ್ತೂರು: ಪ್ರಮುಖ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು, ಇದರಿಂದ ಒಟ್ಟು 20 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ ಆಚಾರ್ಯ, ಆಶ್ರಮದ ಕಾರ್ಯದರ್ಶಿ ಗುಣಪಾಲ್ ಜೈನ್, ಸದಸ್ಯ ಹರೇಕೃಷ್ಣ ಕಡಂಬಳಿತ್ತಾಯ ಮತ್ತು ಜಂಟಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಗಳ ಮಾದರಿ ಯೋಜನೆ “ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ“ ಗಂಗಾಪೂಜೆ ಮತ್ತು ತೀರ್ಥಧಾರಾ ಕಾರ್ಯಕ್ರಮ – ಕಹಳೆ ನ್ಯೂಸ್

ಗಂಗಾಪೂಜೆ ಮತ್ತು ತೀರ್ಥಧಾರಾ ಕಾರ್ಯಕ್ರಮ “ನೀರಿಲ್ಲದೆ ಜೀವನವಿಲ್ಲ. ನೀರಿದ್ದರೆ ಭವಿಷ್ಯವೂ ಇರುತ್ತದೆ. ನೀರು ಮನುಷ್ಯರಿಗೆ ಮಾತ್ರವಲ್ಲದೆ ಇಡೀ ಪರಿಸರ ವ್ಯವಸ್ಥೆಗೆ ಮುಖ್ಯವಾಗಿದೆ. ಸಾಕಷ್ಟು ನೀರಿಲ್ಲದೆ, ಮಾನವರ ಹಾಗೂ ಪ್ರಾಣಿಗಳ ಅಸ್ತಿತ್ವವು ಅಸಾಧ್ಯದ ಪಕ್ಕದಲ್ಲಿದೆ. ಜಲ ಸಂರಕ್ಷಣೆಯ ಮಹತ್ವವು ಇದು ಜೀವ ಉಳಿಸಲು, ಆರ್ಥಿಕತೆಯನ್ನು ಬಲಪಡಿಸಲು ಮತ್ತು ಪರಿಸರವನ್ನು ರಕ್ಷಿಸಲು ಅತ್ಯಗತ್ಯವಾಗಿದೆ. ಶುದ್ಧ ನೀರು ಸೀಮಿತ ಸಂಪನ್ಮೂಲವಾಗಿರುವುದರಿ0ದ, ಅನಗತ್ಯ ಬಳಕೆಯನ್ನು ತಡೆಯುವುದು, ಮಿತವ್ಯಯದಿಂದ ಬಳಸುವುದು ಮತ್ತು ನೀರನ್ನು ಮರುಬಳಕೆ ಮಾಡುವುದು ಮುಖ್ಯವಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆಯ ಫಲಿತಾಂಶ – ಕಹಳೆ ನ್ಯೂಸ್

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮಂಡ್ ಪೆಂಡೆಂಟ್ ವಿಜೇತರಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ- ಕಹಳೆ ನ್ಯೂಸ್

ಪುತ್ತೂರು : ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಬಹುಭಾಷಾ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಕ್ಷಿಣಭಾರತದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆಯನ್ನು ನಯನತಾರಾ ದಂಪತಿ ನೆರವೇರಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025 – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು:- ದಿನಾಂಕ:- ನ. 08  ರಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ಜರಗಿತು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ದೀಪ ಪ್ರಜ್ಜಲನೆ ಮಾಡುವ ಮೂಲಕ ಸುಸಂಸ್ಕೃತವಾದಂತಹ ವಿದ್ಯೆಯನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾರು ಮತ್ತು ಆಟೋ ನಡುವೆ ಅಪಘಾತ ; ಮೂವರಿಗೆ ಗಾಯ – ಕಹಳೆ ನ್ಯೂಸ್

ಪುತ್ತೂರು: ಕಾರು ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ. ಟೋ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಪಜೀರ್ ನಿವಾಸಿ, ಸುನಿಲ್ ಪಿಂಟೋ(37), ಪಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಗಾಯಾಳುಗಳು. ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವ್ರ ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ ಗಾ*ಯವಾಗಿದೆ. ಮೂವರಿಗೂ ಪುತ್ತೂರಿನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ...
1 16 17 18 19 20 359
Page 18 of 359