ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ – ಕಹಳೆ ನ್ಯೂಸ್
ಶ್ರೀದೇವಿ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ಕೆ.ಎಂ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅಂತೆಯೇ ಪ್ರಥಮ ಪಿಯುಸಿಯ ಕಲಾವಿಭಾಗದ ಪ್ರೀತೇಶ್, ವಾಣಿಜ್ಯ ವಿಭಾಗದ ಅಭಯ್ ಎಸ್. ರಾವ್ , ದ್ವಿತೀಯ ವಿಜ್ಞಾನ ವಿಭಾಗದ ಯಜ್ಞ ಇವರು ಬೆಳ್ಳಿ ಪದಕ ಹಾಗೂ ಪ್ರಥಮ ವಾಣಿಜ್ಯ...







