ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್
ಬಡಗನ್ನೂರು: ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ವಹಿಸಿ ಸುಸಂಸ್ಕೃತ ಸಮಾಜಕ್ಕೆ ತಮ್ಮ ಮಕ್ಕಳನ್ನು ರೂಪಿಸುವುದರಲ್ಲಿ ಪೋಷಕರ ಪಾತ್ರ,ಮತ್ತು ನಮ್ಮ ಜೀವನ ಶೈಲಿಯನ್ನು ಹೇಗೆ ಬದಲಾಯಿಸಿಕೊಳ್ಳಬೇಕೇಂದು ತಿಳಿಸಿದರು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ...







