ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕರುಣಾಕರ ಸುವರ್ಣ ಆಯ್ಕೆ – ಕಹಳೆ ನ್ಯೂಸ್
ಉಪ್ಪಿನಂಗಡಿ: ದ.ಕ ಜಿಲ್ಲೆಯ ಎ’ ಶ್ರೇಣಿಯ ದೇವಾಲಯಗಳಲ್ಲಿ ಒಂದಾಗಿರುವ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಕರುಣಾಕರ ಸುವರ್ಣ ಆಯ್ಕೆಯಾಗಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಟಂದೂರು., ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ತಾಪಂ ಸದಸ್ಯ ಮುಕುಂದ ಗೌಡ ರವರ ಉಪಸ್ಥಿತಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಕರುಣಾಕರ ಸುವರ್ಣರವರ ಹೆಸರನ್ನು ಸದಸ್ಯರಾದ ಜಯಂತ ಪೊರೋಳಿ ಸೂಚಿಸಿ, ಹರಿರಾಮಚಂದ್ರ ಅನುಮೋದಿಸುವ ಮೂಲಕ ಸರ್ವಾನುಮತದಿಂದ ಆಯ್ಕೆ ನಡೆಸಲಾಯಿತು....







