Sunday, March 8, 2026

ಪುತ್ತೂರು

ಪುತ್ತೂರುಸುದ್ದಿ

21 ದಿನಗಳ ” ರೋಟರಿ ಮಿಷನ್ ಫಿಟ್ ” ಕಾರ್ಯಕ್ರಮಕ್ಕೆ ನಾಳೆ ಚಾಲನೆ ; ರೋಟರಿ ಪುತ್ತೂರು ಯುವಾ ನೇತೃತ್ವದಲ್ಲಿ ” ಫಿಟ್ ಇಂಡಿಯಾ ” ಅಭಿಯಾನಕ್ಕೆ ಸಾಥ್..! – ಕಹಳೆ ನ್ಯೂಸ್

ಪುತ್ತೂರು: ಭಾರತದಾದ್ಯಂತ ನಡೆಯುತ್ತಿರುವ “ಫಿಟ್ ಇಂಡಿಯಾ” ಕಾರ್ಯಕ್ರಮದ ಅಂಗವಾಗಿ ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಸಂತ ಫಿಲೋಮಿನಾ ಕಾಲೇಜಿನ ಸಹಯೋಗದೊಂದಿಗೆ 21 ದಿನಗಳ ರೋಟರಿ ಮಿಷನ್ ಫಿಟ್ ಪುತ್ತೂರು ಕಾರ್ಯಕ್ರಮವನ್ನು ನ 1 ರಿಂದ 21 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಚೇರ್ ಮೆನ್ ಪಶುಪತಿ ಶರ್ಮ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.   ಕಾರ್ಯಕ್ರಮದ ಮುಖ್ಯ ಉದ್ದೇಶ ಪುತ್ತೂರಿನ ನಾಗರೀಕರಿಗೆ ಸರಳ ವ್ಯಾಯಮದ ಮೂಲಕ ತಮ್ಮ ದೇಹದ ಫಿಟ್‌ನೆಸ್ ಕಾಪಾಡಿಕೊಳ್ಳುವುದು...
ಪುತ್ತೂರು

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ ;‌ ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನೂತನ ಸಮಿತಿಗೆ..! – ಕಹಳೆ ನ್ಯೂಸ್

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಒಂಬತ್ತು ಸದಸ್ಯ ಸ್ಥಾನಗಳ ಪೈಕಿ ಏಳು ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ ‘ಸಾಮಾನ್ಯ’ ಕ್ಕೆ ನಿಗದಿಯಾಗಿರುವ ಎರಡು ಸ್ಥಾನಕ್ಕೆ ಯಾರನ್ನೂ ಪರಿಗಣನೆ ಮಾಡಲಾಗಿಲ್ಲ. ಜಿಲ್ಲಾ ಧಾರ್ಮಿಕ‌ ಪರಿಷತ್ ನ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಗಳ ಸಹಾಯಕ ಆಯುಕ್ತರು ಮುಜರಾಯಿ ಇಲಾಖೆಯಡಿಯ ‘ಸಿ’ ಪ್ರವರ್ಗದಲ್ಲಿರುವ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ...
ಪುತ್ತೂರು

ಪುತ್ತೂರು : ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿರುವ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಗತಕಾರಿಣಿಯಾಗಿದ್ದ ಮಧುಶ್ರೀ(26) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅವಿವಾಹಿತ ಯುವತಿ. ನಿನ್ನೆ ಮಧ್ಯಾಹ್ನ ತನ್ನ ಅಜ್ಜಿ ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತ ಹಾಗೂ ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಡೈರಿಯಲ್ಲಿ...
ಪುತ್ತೂರು

ಆಕಾಶ್ ಜೊತೆ ಸಹಯೋಗದೊಂದಿಗೆ ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ತರಗತಿ-ಕಹಳೆ ನ್ಯೂಸ್

ಈ ವರ್ಷದ ನೀಟ್ ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಯನ್ನು ಮಾಡಿರುತ್ತಾರೆ. ಪ್ರತಿ ವರ್ಷವೂ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅತ್ಯುನ್ನತ ಸಾಧನೆಯನ್ನು ಮಾಡಿರುವಂತಹದು ಹೆಮ್ಮೆಯ ಸಂಗತಿ. ಈ ವಿಶೇಷ ಸಾಧನೆಯನ್ನು ಪರಿಗಣಿಸಿ ಅಂಬಿಕಾ ವಿದ್ಯಾಲಯದಲ್ಲಿ ಈ ವರ್ಷದಿಂದ ನೀಟ್ ರಿಪೀಟರ್ಸ್ ತರಗತಿಗಳನ್ನು ನಡೆಸುವುದೆಂದು ತೀರ್ಮಾನಿಸಲಾಗಿದೆ. ಹಲವು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಉತ್ತಮ ಅಂಕಗಳನ್ನು ಪಡೆಯುವುದು ಕಷ್ಟಸಾಧ್ಯವಾಗಿದೆ. ಅಂತಹ ವಿದ್ಯಾರ್ಥಿಗಳಿಗೆ ಈ ರಿಪೀಟರ್ಸ್ ತರಗತಿಗಳಿಂದಾಗಿ...
ಪುತ್ತೂರು

ಪುತ್ತೂರಿನ ಪ್ರತಿಷ್ಠಿತ ಕ್ಲಬ್‍ಗೆ ಖಾಕಿ ದಾಳಿ, ಜೂಜಾಟದಲ್ಲಿ ನಿರತರಾಗಿದ್ದ 15 ಜನರ ಅಂದರ್-ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಠಿತ ಕ್ಲಬ್ ಒಂದರಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ನಡೆಸಿ, 15 ಜನರನ್ನು ಬಂಧಿಸಿದ್ದಾರೆ. ಪುತ್ತೂರಿನ ಮಾರ್ಕೆಟ್ ರಸ್ತೆಯ ಮೀನು ಮಾರುಕಟ್ಟೆ ಸಮೀಪದ ಯೂನಿಯನ್ ಕ್ಲಬ್, ನೊಂದಾಯಿತ ಕ್ಲಬ್ ಆಗಿದ್ದರೂ, ಹಣವನ್ನು ಪಣವಾಗಿಟ್ಟುಕೊಂಡು ಕಾನೂನು ಬಾಹಿರವಾಗಿ 15 ಮಂದಿ ಇಸ್ಪಿಟ್ ಆಡುತ್ತಿದ್ದರು. ಈ ವೇಳೆ ಪುತ್ತೂರು ಎ.ಎಸ್.ಐಯವರ ನಿರ್ದೇಶನದಂತೆ, ಪುತ್ತೂರು ನಗರ ಠಾಣೆ ಇನ್ಸ್‍ಪೆಕ್ಟರ್ ಗೋಪಾಲ...
ಪುತ್ತೂರು

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಮತ್ತು ಪ್ರಸಾದ್ ನೇತ್ರಾಲಯ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ 10ದಿನಗಳ ಕಾಲ ಉಚಿತ ನೇತ್ರ ತಪಾಸಣಾ ಶಿಬಿರವು ಕಳೆದ ಜನವರಿ ತಿಂಗಳಿನಲ್ಲಿ ಜರಗಿತ್ತು. ನೇತ್ರ ತಪಾಸಣಾ ಸಂದರ್ಭದಲ್ಲಿ ಕನ್ನಡಕದ ಅವಶ್ಯಕತೆಯನ್ನು ತಿಳಿಸಿರುವವರಿಗೆ ದಿನಾಂಕ 22.10.2020ರಂದು ಶ್ರೀರಾಮ ಪ್ರಾಥಮಿಕ ಶಾಲಾ ವಿಭಾಗದ ವೇದವ್ಯಾಸ ಧ್ಯಾನ ಮಂದಿರದಲ್ಲಿ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು. ಪ್ರಸಾದ್ ನೇತ್ರಾಲಯ ಮಂಗಳೂರು ಇದರ ಸಂಸ್ಥಾಪಕರಾದ ಡಾ| ಕೃಷ್ಣಪ್ರಸಾದ್ ಇವರು ಮಾತನಾಡಿ “ನಾವು ಈಗ ಉತ್ತಮ...
ಪುತ್ತೂರು

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ-ಕಹಳೆ ನ್ಯೂಸ್

ಪುತ್ತೂರಿನ ಹೃದಯ ಭಾಗದಲ್ಲಿರುವ ಕಳೆದ 13 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.) ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿರುವ ಧರ್ಮಸ್ಥಳ ಬಿಲ್ಡಿಂಗ್‍ನ ಪ್ರಗತಿ ಸೆಂಟರ್‌ನ ಮುಖ್ಯ ಶಾಖೆ ಹಾಗೂ ಪೋಳ್ಯದಲ್ಲಿ ನೂತನವಾಗಿ ನಿರ್ಮಿತಗೊಂಡಿರುವ ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್‌ನಲ್ಲಿ ಅ. 21 ರಂದು ನವರಾತ್ರಿಯ ಮೂರು ದಿನಗಳ ಶಾರದೋತ್ಸವದ ಅಂಗವಾಗಿ ವೇದಮೂರ್ತಿ ಸುಬ್ರಹ್ಮಣ್ಯ ಹೊಳ್ಳರವರ ಸಹಕಾರದೊಂದಿಗೆ ಶಾರದಾಮಾತೆಯನ್ನು ಪೀಠಲಂಕೃತಳನ್ನಾಗಿಸಿ, 13ನೇ ವರ್ಷದ ಶಾರದ...
ಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ಗೌರವಾಧ್ಯಕ್ಷರಾಗಿ ವಿ.ಬಿ.ಅರ್ತಿಕಜೆ, ಕಾನೂನು ಸಲಹೆಗಾರರಾಗಿ ಮಹೇಶ್ ಕಜೆ, ಗೌರವ ಸಲಹೆಗಾರರಾಗಿ ರಾಕೇಶ್ ಕಮ್ಮಾಜೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರೊ. ವಿ.ಬಿ.ಅರ್ತಿಕಜೆ ಮತ್ತು ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿ ಮಹೇಶ್‌ ಕಜೆರವರನ್ನು ನೇಮಕ‌ ಮಾಡಲಾಗಿದೆ. ಹಿರಿಯ ಪತ್ರಕರ್ತರಾಗಿ, ಹಿರಿಯ ಸಾಹಿತಿಗಳಾಗಿ, ವಿಶ್ರಾಂತ ಪ್ರಾಧ್ಯಾಪಕರಾಗಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸೇರಿದಂತೆ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿರುವ ಪ್ರೊ.ವಿ.ಬಿ.ಅರ್ತಿಕಜೆಯವರನ್ನು ಗೌರವಾಧ್ಯಕ್ಷರಾಗಿ ಮತ್ತು ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ...
1 335 336 337 338 339 350
Page 337 of 350