Thursday, July 23, 2026

ಪುತ್ತೂರು

ಪುತ್ತೂರುಸುದ್ದಿ

ಜೂ.21ಕ್ಕೆ ಖಂಡ ಗ್ರಾಸ ಸೂರ್ಯಗ್ರಹಣ ಹಿನ್ನಲೆ : ಹತ್ತೂರ ಒಡೆಯ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯ ಬದಲಾವಣೆ – ಕಹಳೆ ನ್ಯೂಸ್

ಪುತ್ತೂರು: ಜೂ.21ಕ್ಕೆ ಖಂಡ ಗ್ರಾಸ ಸೂರ್ಯಗ್ರಹಣ ನಡೆಯಲಿರುವುದರಿಂದ ದೇವಸ್ಥಾನದಲ್ಲಿ ಸಾರ್ವಜನಿಕ ದರುಶನಕ್ಕೆ ಸಮಯ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆಯೇ ಮಧ್ಯಾಹ್ನದ ಪೂಜೆ ನಡೆಯಲಿದ್ದು ಬಳಿಕ ಬಾಗಿಲು ಮುಚ್ಚಲಾಗುವುದು. ಬೆಳಿಗ್ಗೆ ಗಂಟೆ 7.30ಕ್ಕೆ ಪ್ರಾತಃ ಕಾಲ ಪೂಜೆ, ನಂತರ ಗಂಟೆ 9.15ಕ್ಕೆ ಮದ್ಯಾಹ್ನ ಪೂಜೆ ನಡೆಯಲಿದ್ದು, ಬಳಿಕ ಬಾಗಿಲು ಹಾಕಲಾವುದು. ಸಂಜೆ ಗಂಟೆ 4ಕ್ಕೆ ಬಾಗಿಲು ತೆರೆಯುವುದು. ರಾತ್ರಿ ಗಂಟೆ 7.30ರ ರಾತ್ರಿ ಪೂಜೆ ನಡೆಯಲಿದೆ. ಈ ನಡುವೆ ದೇವಳದಲ್ಲಿ ಗ್ರಹಣ ಶಾಂತಿ...
ಪುತ್ತೂರುಸುದ್ದಿ

ಕಬಕ ರೈಲ್ವೆ ಕ್ರಾಸಿಂಗ್ ಬಳಿ ಇರುವ ತಂತಿಯ ಬದಲಾವಣೆ: ನಾಳೆ ಕರೆಂಟ್ ಇಲ್ಲ ಎಂದ ಮೆಸ್ಕಾಂ- ಕಹಳೆ ನ್ಯೂಸ್

ಕ.ವಿ.ಪ್ರ.ನಿ.ನಿ ಬೃಹತ್ ಕಾಮಗಾರಿ ವಿಭಾಗ ಇವರ ವತಿಯಿಂದ ಕಬಕ ರೈಲ್ವೆ ಕ್ರಾಸಿಂಗ್ ಬಳಿ 110ಕೆವಿ ದ್ವಿಮಾರ್ಗದ ಹಾಲಿ ಇರುವ ತಂತಿಯ ಬದಲಾವಣೆ ಕಾರ್ಯಕ್ಕೆ ಸಂಬಂಧಪಟ್ಟಂತೆ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ 110/33/11ಕೆವಿ, ಪುತ್ತೂರು ಕರಾಯ ಮತ್ತು ಮಾಡಾವು ಉಪಕೇಂದ್ರಗಳ 110ಕೆವಿ ಮಾರ್ಗದ ವಿದ್ಯುತ್ ನಿಲುಗಡೆ ಮಾಡುವುದಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದೆ. ಇನ್ನೂ 110/33/11ಕೆವಿ ಪುತ್ತೂರು, ಕರಾಯ, ಮತ್ತು ಮಾಡಾವು...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಆಕ್ರೋಶ ; ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿದ ವಿದ್ಯಾರ್ಥಿ ಶಕ್ತಿ – ಕಹಳೆ ನ್ಯೂಸ್

ಪುತ್ತೂರು: ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಜತೆಗಿನ ಗಡಿ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ 20 ಯೋಧರು ಹುತಾತ್ಮರಾದ ಬಳಿಕ ದೇಶದಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಒತ್ತಡ ಹೆಚ್ಚುತ್ತಿದೆ. ಪುತ್ತೂರಿನಲ್ಲೂ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಜೊತೆಗೆ ಜೂ. 18ರಂದು ಮುಸ್ಸಂಜೆ ಇಲ್ಲಿನ ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಎಬಿವಿಪಿ ಕಾರ್ಯಕರ್ತರು ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಂಘಪರಿವಾರದ ಹಿರಿಯ ಕಾರ್ಯಕರ್ತ ಚಂದ್ರಶೇಖರ್ ಅವರು ಹುತಾತ್ಮ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹುತಾತ್ಮ ಯೋಧರಿಗೆ ನಮನ ; ಹಣತೆ ಹಚ್ಚಿ, ತಾಯಿ ಭಾರತಮಾತೆಗೆ ಪುಷ್ಪಾರ್ಚನೆ – ಕಹಳೆ ನ್ಯೂಸ್

ಪುತ್ತೂರು: ಲಾಡಕ್‌ನ ಗಡಿಯಲ್ಲಿ ಹುತಾತ್ಮರದ ಯೋಧರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಣತೆ ಹಚ್ಚಿ, ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜೂ. 18ರಂದು ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರ ಮಂಡಲದ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್...
ದಕ್ಷಿಣ ಕನ್ನಡಪುತ್ತೂರು

” ಚೀನಾ ನರಿ ಬುದ್ದಿಗೆ ಭಾರತ ತಕ್ಕ ಉತ್ತರ ಕೊಡಲಿದೆ ” – ಪುತ್ತೂರಿನಲ್ಲಿ ಹುತಾತ್ಮ ಭಾರತೀಯ ಯೋಧರಿಗೆ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಶ್ರದ್ಧಾಂಜಲಿ ; ಪ್ರಧಾನಿ ನಡೆ ಸಮರ್ಥನೆ, ಶ್ಲಾಘನೆ – ಕಹಳೆ ನ್ಯೂಸ್

ಪುತ್ತೂರು : ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿವರಿಗೆ ಬೆಂಬಲವಾಗಿ ನಾವು ಚೀನಾ ವಿರೋಧವನ್ನು ಕೇವಲ ಮಾತಿನಲ್ಲಿ ಹೇಳದೆ ಕೃತಿಯಲ್ಲೂ ಮಾಡಿ ತೋರಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂದು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು. ಜೂ.೧೬ರಂದು ಗಡಿಯಲ್ಲಿ ಚೀನಾದೊಂದಿಗೆ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಇಲ್ಲಿನ ಕಿಲ್ಲೆ ಮೈದಾನದ ಅಮರ್...
ಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸುಸೂತ್ರವಾಗಿ ನಡೆದ ದ್ವಿತೀಯ ಪಿಯುಸಿಯ ಆಂಗ್ಲಪರೀಕ್ಷೆ-ಕಹಳೆ ನ್ಯೂಸ್

ಪುತ್ತೂರು: ಕೋರೊನಾದಿಂದಾಗಿ ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾದ ಪರಿಣಾಮವಾಗಿ ಬಾಕಿ ಉಳಿದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯೂ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸುಸೂತ್ರವಾಗಿ ನಡೆಯಿತು. ಒಟ್ಟು 836 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು ಅದರಲ್ಲಿ 18 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಸುಮಾರು 104 ವಿದ್ಯಾರ್ಥಿಗಳು ಅವರವರ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಸುಮಾರು 39 ಕೊಠಡಿಗಳಲ್ಲಿ ಪರೀಕ್ಷೆಯು ನಡೆದಿತ್ತು. ಅಲ್ಲದೇ ಎಲ್ಲಾ ತರಗತಿ ಕೊಠಡಿಗಳಿಗೆ, ಹೊರಾಂಗಣಗಳಿಗೆ ಸ್ಯಾನಿಟೈಸರ್‌ನ್ನು ಯಂತ್ರದ ಮೂಲಕ ಸಿಂಪಡಿಸಿ...
ದಕ್ಷಿಣ ಕನ್ನಡಪುತ್ತೂರು

ಚೀನಾ ಆಕ್ರಮಣಕ್ಕೆ ಹುತಾತ್ಮರಾದ ಯೋಧರಿಗೆ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಅಮರ್ ಜವಾನ್ ಜ್ಯೋತಿ ಬಳಿ ಗೌರವ ಸಮರ್ಪಣೆ – ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ – ಕಹಳೆ ನ್ಯೂಸ್

ಪುತ್ತೂರು: ಭಾರತ ದೇಶದ ವೀರ ಸೈನಿಕರು ಸಾಯುವುದಿಲ್ಲ. ದೇಶದ ಗಡಿ ಭಾಗದಲ್ಲಿ ದೇಶಕ್ಕಾಗಿ ಹೋರಾಟ ಮಾಡುತ್ತಾರೆ. ಚೀನಾ ಪಡೆ ವಿರುದ್ಧ ನಡೆದ ಘರ್ಷಣೆಯಲ್ಲಿ ನಮ್ಮ ಸೈನಿಕರು ಬಲಿದಾನ ಆಗಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೂಡಾ ಚೀನಾದ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ದೇಶದ ಒಳಗಿನ ಯೋಧರಾಗಿ ಹೋರಾಟ ಮಾಡೋಣ ಎಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ ಅವರು ಹೇಳಿದರು. ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ...
ದಕ್ಷಿಣ ಕನ್ನಡಪುತ್ತೂರು

” ಚೀನಾದ ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ” – ವಿಶ್ವಹಿಂದೂ ಪರಿಷತ್ತು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಆಗ್ರಹ – ಕಹಳೆ ನ್ಯೂಸ್

ಪುತ್ತೂರು: ಭಾರತದ ಗಡಿಯಲ್ಲಿ ವಿನಃ ಕಾರಣ ತಗಾದೆ ತೆಗೆಯುತ್ತಿರುವ ಚೀನಾಕ್ಕೆ ನಮ್ಮ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ನಮ್ಮ 20 ಯೋಧರ ಬಲಿದಾನವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಚೀನಾದ ಸರಕು, ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ಹೇಳಿದರು. ಅವರು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾ ಸೇನಾಪಡೆ ವಿರುದ್ಧ ನಡೆದ ಸಂಘರ್ಷದ ವೇಳೆ...
1 356 357 358 359
Page 358 of 359