Saturday, May 4, 2024

ಸುಬ್ರಹ್ಮಣ್ಯ

ದಕ್ಷಿಣ ಕನ್ನಡಸಂತಾಪಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ : ಸಿಡಿಲು ಸಹಿತ ಭಾರಿ ಮಳೆ : ಅಂಗಳದಲ್ಲಿ ಹರಡಿದ್ದ ಅಡಿಕೆ ಹೆಕ್ಕುವ ವೇಳೆ ಸಿಡಿಲು ಬಡಿದು ನವ ವಿವಾಹಿತ ಯುವಕ ಮೃತ್ಯು -ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಸಿಡಿಲಿನ ಆಘಾತಕ್ಕೆ ಸಿಲುಕಿ ನವ ವಿವಾಹಿತ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಹೊಸೊಳಿಕೆ ಎಂಬಲ್ಲಿ ನಡೆದಿದೆ.  ಮೃತಪಟ್ಟವರನ್ನು ಇಲ್ಲಿನ ನಿವಾಸಿ ದಿ. ಬೀರಣ್ಣ ಗೌಡ ಎಂಬವರ ಮಗ ಸೋಮಸುಂದರ (32) ಎಂದು ಗುರುತಿಸಲಾಗಿದೆ. ಇಂದು ಸಂಜೆ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಿಡಿಲು ಸಹಿತ ಮಳೆ ಸುರಿದಿತ್ತು. ಪರ್ವತ ಮುಖಿ ಬಳಿ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದ ಸೋಮಸುಂದರ್ ಮಳೆ ಬರುವ ಹಿನ್ನಲೆಯಲ್ಲಿ ಅಂಗಳದಲ್ಲಿ ಹರಡಿದ್ದ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಯೇಸುರಾಜ್ ನೇಮಕ – ಕಹಳೆ ನ್ಯೂಸ್

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಯೇಸುರಾಜ್ ಅವರನ್ನು ನೇಮಿಸಿರುವ ಬಗ್ಗೆ ಅಪಸ್ವರ ಕೇಳಿಬಂದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಯೇಸುರಾಜ್ ನೇಮಕವಾಗಿದ್ದು, ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದೂ ದೇವಾಲಯದ ಆಡಳಿತಾಧಿಕಾರ ಹಿಂದುಗಳ ಕೈಯಲ್ಲಿರಬೇಕೇ ಹೊರತು ಅನ್ಯಧರ್ಮೀಯರ ಕೈಯಲ್ಲಿ ಅಲ್ಲ. ಹಿಂದೂ ಧಾರ್ಮಿಕ ದತ್ತಿ ಕಾಯ್ದೆಯ ಪ್ರಕಾರ ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳಿಗೆ ಹಿಂದೂಗಳು, ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರನ್ನು ಅಥವಾ ಹಿಂದೂ ಧರ್ಮವನ್ನು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಸುಬ್ರಹ್ಮಣ್ಯ

ಕುಲ್ಕುಂದದ ’ಬಸವನಮೂಲ’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ : ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ –ಕಹಳೆ ನ್ಯೂಸ್

ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದ ‘’ಬಸವನಮೂಲ’’ ಎಂದೇ ಪ್ರಸಿದ್ಧಿಯಾಗಿರುವ ಬಸವೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಅತಿ ಪ್ರಿಯ ಎನ್ನಲಾದ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಬ್ರಹ್ಮಣ್ಯ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ-ಕಹಳೆ ನ್ಯೂಸ್

ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇಂದು ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ಒಳಗೆ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ .ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ .ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ,...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ : ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆಯಾಗಿದೆ. ಶನಿವಾರ ಸಂಜೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿ ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಕಳೆದ ವಾರ ನಕ್ಸಲರು ಕಾಣಿಸಿಕೊಂಡ ಕೂಜಿಮಲೆ ಮತ್ತು ಶನಿವಾರ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಸಮೀಪ ಶಂಕಿತ ನಕ್ಸಲರು ಪತ್ತೆ..! ಮನೆಗೆ ಭೇಟಿ ನೀಡಿ ಮೊಬೈಲ್ ಚಾರ್ಚ್ ಮಾಡಿರುವ ತಂಡ – ಕಹಳೆ ನ್ಯೂಸ್

ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಗ್ರಾಮದ ಕೋಟೆ ತೋಟದ ಮಜಲು ಎಂಬಲ್ಲಿಗೆ ನಿನ್ನೆ ಸಂಜೆ ನಾಲ್ಕೈದು ಜನ ಅಪರಿಚಿತರು ಬಂದು ಹೋಗಿದ್ದು, ನಕ್ಸಲರಿರಬಹುದೇ ಎಂಬ ಗುಮಾನಿ ಈ ಪ್ರದೇಶದಲ್ಲಿ ಹಬ್ಬಿದೆ. ಗ್ರಾಮಸ್ಥರೊಬ್ಬರ ಮನೆಗೆ ಬಂದಿದ್ದ ಅಪರಿಚಿತರು ಸುಮಾರು ಒಂದು ಗಂಟೆಗಳ ಕಾಲ ಇದ್ದು ಹಲವು ವಿಚಾರಗಳನ್ನು ವಿಚಾರಿಸಿರುವುದಾಗಿ ತಿಳಿದು ಬಂದಿದೆ. ಜೊತೆಗೆ ಮೊಬೈಲ್ ಚಾರ್ಚ್ ಮಾಡಿಕೊಂಡು ತೆರಳಿದ್ಧಾರೆ ಎನ್ನಲಾಗಿದೆ. ಶನಿವಾರ ಸಂಜೆ 6 ಗಂಟೆ...
ದಕ್ಷಿಣ ಕನ್ನಡಸುಬ್ರಹ್ಮಣ್ಯ

ಮಾ.24 ರಂದು (ನಾಳೆ) ಸುಬ್ರಹ್ಮಣ್ಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ…-ಕಹಳೆ ನ್ಯೂಸ್

 ಸುಬ್ರಹ್ಮಣ್ಯ: ಜಸ್ಟಿಸ್ ಹೆಗಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ಮತ್ತು ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್, ಲಯನ್ಸ್ ಕ್ಲಬ್, ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಇವರ ಉಪಸ್ಥಿತಿಯಲ್ಲಿ ಕಣ್ಣು ಕಿವಿ, ಮೂಗು, ಗಂಟಲು, ಚರ್ಮರೋಗ ತಜ್ಞರು ಮಧುಮೇಹ ಮತ್ತು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಶಿವರಾತ್ರಿಯಂದು ಕುಕ್ಕೆಯಲ್ಲಿ ಭಕ್ತಸಂದಣಿ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಮಹಾಶಿವರಾತ್ರಿ ಹಾಗೂ ಮರುದಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಂದಣಿ ಅಧಿಕವಾಗಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರು ಕೂಡ ಅಧಿಕ ಬಸ್ಸುಗಳನ್ನು ರಾಜ್ಯದ ವಿವಿಧ ಕ್ಷೇತ್ರಗಳಿಗೆ ಕಲ್ಪಿಸಿದ್ದರು. ಅದರಿಂದಾಗಿ ಬೇರೆ ಕ್ಷೇತ್ರಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೂಡ ಉತ್ತರ ಕರ್ನಾಟಕ ಹಾಗೂ ವಿವಿಧ ಭಾಗಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿರುವರು .ಶ್ರೀ ದೇವಳದ ವತಿಯಿಂದ ಭಕ್ತರಿಗೆ ಅನುಕೂಲವಾಗುವ ಹಾಗೆ ದೇವರ ದರುಶನ ಸಾಲು, ಪ್ರಸಾದ ವಿತರಣೆ, ಹಾಗೂ ವಿಶೇಷವಾಗಿ ಆದಿ...
1 2 3 11
Page 1 of 11