Recent Posts

Monday, June 8, 2026

ಸುಬ್ರಹ್ಮಣ್ಯ

ಸುಬ್ರಹ್ಮಣ್ಯ

ದುರ್ಗಾ ಸೇವಾ ಸಂಘದ ವತಿಯಿಂದ ಕೇನ್ಯ ವಿಷ್ಣುನಗರದ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕೇನ್ಯ : ದುರ್ಗಾ ಸೇವಾ ಸಂಘ ಕೇನ್ಯ ಇದರ ವತಿಯಿಂದ ಕೇನ್ಯ ವಿಷ್ಣುನಗರದ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ದುರ್ಗಾ ಸೇವಾ ಸಂಘದ ಅಧ್ಯಕ್ಷರಾದ ಪದ್ಮನಾಭ ರೈ, ಕಾರ್ಯದರ್ಶಿ ದೇವಿಪ್ರಸಾದ್ ರೈ ಗೆಜ್ಜೆ, ಉಪಾಧ್ಯಕ್ಷರಾದ ಬಾಲಕೃಷ್ಣ ರೈ ಬಿರ್ಕಿ, ಸಂಘದ ನಿರ್ದೇಶಕರಾದ ಹರ್ಷಿತ್ ರೈ, ಸೃಜನ್ ರೈ, ನೆಹರು ಯುವ ಕೇಂದ್ರದ ಸಂಚಾಲಕರಾದ ಜಸ್ವಂತ್, ರಕ್ಷಿತ್ ಬೀದಿಗುಡ್ಡೆ ಮೊದಲದವರು ಪಾಲ್ಗೊಂಡಿದ್ದರು...
ಕಡಬಸುಬ್ರಹ್ಮಣ್ಯ

ಗಾಂಧಿ ಜಯಂತಿ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಸುಬ್ರಹ್ಮಣ್ಯ ಗ್ರಾ.ಪಂ ವಿಶೇಷ ಗ್ರಾಮ ಸಭೆ ಹಾಗೂ ಸ್ವಚ್ಚತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಗಾಂಧಿ ಜಯಂತಿ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಗ್ರಾಮ ಸಭೆ ಹಾಗೂ ಸ್ವಚ್ಚತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‍ನಲ್ಲಿ ನಡೆಯಿತು. ಬಳಿಕ ಕಡಬ ತಾಲೂಕು ಸೋಕ್ ಪಿಟ್ ಅಭಿಯಾನಕ್ಕೆ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ,...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಹ್ಮಣ್ಯ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದ, 2021-22 ನೇ ಸಾಲಿನ ಪ್ರಥಮ ವರ್ಷದ ಬಿಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಪ್ರಾಚಾರ್ಯರಾದ ಆಡಿ ಗೋವಿಂದ ಎನ್. ಎಸ್. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿಗಳು ವಿವಿಧ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾಕ್ಟರ್ ಪ್ರಸಾದ್ ಎನ್...
ಸುಬ್ರಹ್ಮಣ್ಯ

ಪಂಜದಲ್ಲಿ ಕೊರೊನ ನಿಯಂತ್ರಣ ಜನಜಾಗೃತಿ ಅಭಿಯಾನ – ಕಹಳೆ ನ್ಯೂಸ್

ಪಂಜ: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಗ್ರಾಮ ಪಂಚಾಯತ್ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಯುವಜನ ಒಕ್ಕೂಟ ಸುಳ್ಯ ತಾಲೂಕು, ಪಂಚ ಶ್ರೀ ಪಂಜ ಸ್ಪೋಟ್ರ್ಸ್ ಕ್ಲಬ್ (ರಿ), ಇದರ ಜಂಟಿ ಆಶ್ರಯದಲ್ಲಿ ಕೋವಿಡ್-19 ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕೋವಿಡ್-19 ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ಲಸಿಕಾ ಉಪಯೋಗ ಇದೆಲ್ಲದರ ಬಗ್ಗೆ ವಿವರವಾಗಿ ಶುಶ್ರೂಷಕಿ ಶ್ರೀಮತಿ ವಿಜಯಲಕ್ಷ್ಮಿ ತಿಳಿಸಿಕೊಟ್ಟರು. ಕಾರ್ಯಕ್ರಮದ ಅದ್ಯಕ್ಷತೆಯನ್ನು...
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಐಕ್ಯೂಎಸಿ ಹಾಗೂ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ’ ಆಚರಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಐಕ್ಯೂಎಸಿ ಹಾಗೂ ಹಿಂದಿ ವಿಭಾಗದ ವತಿಯಿಂದ 'ಹಿಂದಿ ದಿವಸ'ವನ್ನು ಆಚರಿಸಲಾಯಿತು. ನೆಲ್ಯಾಡಿ ಬೆಥನಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ಪೂರ್ಣಿಮಾ ಬಿ. ಶೆಣೈ ಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಐಕ್ಯೂಎಸಿ ಸಂಯೋಜಕರು ಡಾ. ಪ್ರಸಾದ ಎನ್. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಹಿಂದಿ ವಿಭಾಗದ ವಿದ್ಯಾರ್ಥಿಗಳಿಗೆ 'ಸ್ವಾಭಿಮಾನ...
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಗಳಿಗೆ ಪುಸ್ತಕ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ನೆರವೇರಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್.ಅಧ್ಯಕ್ಷ ಸ್ಥಾನವನ್ನು ವಹಿಸಿ ಪ್ರಾಸ್ತಾವಿಕ ಮಾತುಗಳನ್ನು ನುಡಿದು ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಪಠ್ಯ ಪಠ್ಯೇತರ ಚಟುವಟಿಕೆಗಳ ಕುರಿತು ವಿವಿಧ ವಿಭಾಗದ ಉಪನ್ಯಾಸಕರುಗಳು ಮಾಹಿತಿಯನ್ನು ನೀಡಿದರು. ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಧನ್ಯವಾದ ಸಮರ್ಪಿಸಿದರು . ನಂತರ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕೆ.ಎಸ್.ಎಸ್ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ ಸಹಯೋಗದೊಂದಿಗೆ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ಸಮಾಜಶಾಸ್ತ್ರ ವಿಭಾಗ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ ನಡೆಯಿತು. ಅಭಿಯಾನದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ, ಉಪನ್ಯಾಸಕಿ ಆರತಿ ಏ. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯರಾದ ಎಚ್.ಎಲ್ ವೆಂಕಟೇಶ್, ಭಾರತಿ ಗಣೇಶ್ ಹಾಗೂ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡರು....
ಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ಹೆಸರಾಂತ ವೈದ್ಯ ಡಾ.ಬಿ ಕೆ ಭಟ್ ನಿಧನ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಳೆದ 30 ವರ್ಷಗಳಿಂದ ನಿಟ್ಟೆ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯದ ಹೆಸರಾಂತ ವೈದ್ಯರಾದ ಡಾ. ಬಿ ಕೆ ಭಟ್‍ರವರು ನಿನ್ನೆ ತಡ ರಾತ್ರಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಡಾ. ಬಿ ಕೆ ಭಟ್‍ರವರು ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಕೊರೋನಾ ಪಾಸಿಟಿವ್ ಬಂದಿತ್ತೆನ್ನಲಾಗಿದೆ. ಮೃತರು ಪತ್ನಿ, ಒರ್ವ ಪುತ್ರ ಹಾಗೂ ಬಂಧುಗಳನ್ನು ಅಗಲಿರುವುದಾಗಿ ತಿಳಿದು ಬಂದಿದೆ....
1 9 10 11 12 13 16
Page 11 of 16