Recent Posts

Monday, June 8, 2026

ಸುಬ್ರಹ್ಮಣ್ಯ

ಸುಬ್ರಹ್ಮಣ್ಯ

ಕಡಬ ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಮ್ಯಕ್ತ್ ಜೈನ್ ಆಯ್ಕೆ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕಡಬ ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವು ಫೆಬ್ರವರಿ 24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆದಿದ್ದು, ಈ ಸಮ್ಮೇಳನದ ಕವಿಗೋಷ್ಠಿಗಾಗಿ ನೂಜಿಬಾಳ್ತಿಲದ ಯುವ ಸಾಹಿತಿ ಸಮ್ಯಕ್ತ್ ಜೈನ್ ರವರು ಆಯ್ಕೆಯಾಗಿದ್ದರು. ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿರುವ ಇವರು ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾ ದಂಪತಿಯ ಪುತ್ರರಾಗಿದ್ದಾರೆ. ಎಳೆ ವಯಸ್ಸಿನಲ್ಲಿಯೇ ಮೂರು ಸಾಹಿತ್ಯ ಕೃತಿ ಬರೆದು ಬಿಡುಗಡೆಗೊಳಿಸಿ ಸಾಹಿತ್ಯ...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯದಲ್ಲಿ ನಾಳೆ ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕ.ಸಾ.ಪ. ಕಡಬ ತಾಲೂಕು ಅಧ್ಯಕ್ಷ ಜನಾರ್ಧನ ಗೌಡ ಪಣೆಮಜಲು ಅವರು ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ದಿ.ಪಟೇಲ್ ಕೂಜುಗೋಡು ನಾಗಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ, ಸಮ್ಮೇಳನಾಧ್ಯಕ್ಷ ಕೇಶವ ಭಟ್ ಎನ್. ರವರ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಎಸ್ ಅಂಗಾರ ದೀಪ...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ನಿವಾಸಿ ಜಾಜಿ ಮುಚ್ಚಿಂತ್ತಾಯ ರವರು ಹೃದಯಾಘಾತದಿಂದ ನಿಧನ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ನಿವಾಸಿ ಜಾಜಿ ಮುಚ್ಚಿಂತ್ತಾಯ ಎಂಬವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ನಿವಾಸಿಯಾಗಿದ್ದ ದಿ.ಸುಬ್ರಾಯ ಮುಚ್ಚಿಂತ್ತಾಯ ಅವರ ಪತ್ನಿ ಇಂದು ಬೆಳಿಗ್ಗೆ ಸ್ವಗ್ರಹದಲ್ಲಿ ಹ್ರದಯಾಘಾತದಿಂದ ನಿಧಾನ ಹೊಂದಿದ್ದಾರೆ. ಯುವ ಉದ್ಯಮಿ ಗುರುಪ್ರಸಾದ್ ಮುಚ್ಚಿಂತ್ತಾಯ, ಸೌಮ್ಯಾ ಪ್ರಸಾದ್ ಹಾಗು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ....
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ; ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡಿದ ಸುಬ್ರಹ್ಮಣ್ಯ ಶ್ರೀಗಳು- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಇಂದು ಗ್ರಾಮಪಂಚಾಯತ್ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಮತದಾನ ಮಾಡಿದರು....
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕುಲ್ಕುಂದ ಕುಮಾರಧಾರ ನದಿಯ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಪತ್ತೆ-ಕಹಳೆ ನ್ಯೂಸ್

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಪತ್ತೆಯಾದ ಘಟನೆ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕುಮಾರಧಾರ ನದಿಯ ಬಳಿ ನಡೆದಿದೆ. ಸುಳ್ಯ ತಾಲೂಕು ಗುತ್ತಿಗಾರು ಗ್ರಾಮ ಬಳ್ಳಕ ಪಿಂಡಿಬನ ನಿವಾಸಿ ಆನಂದ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಆನಂದ ನಾಯ್ಕ ಎಂಬಾತನು ಮಾನಸಿಕ ಅಸ್ವಸ್ಥ ಹಾಗೂ ಅಮಲು ಪದಾರ್ಥ ಸೇವಿಸುವವನಾಗಿದ್ದು ಸುಮಾರು ಒಂದು ತಿಂಗಳಿಂದ ಮನೆ ಬಿಟ್ಟು ಹೋಗಿದ್ದು, ಇನ್ನು ಮನೆಗೆ ಮರಳಿ ಬಾರದ ಕಾರಣ ಹುಡುಕಾಟ...
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನ – ಕಹಳೆ ನ್ಯೂಸ್

ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನಗೊಂಡಿತು. ಐತಿಹಾಸಿಕ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಭಾನುವಾರ ಬೆಳಗ್ಗೆ 7.25ರ ಧನುರ್ ಲಗ್ನದಲ್ಲಿ ರಥಾರೂಢನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ತುಂಬಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.ಕೋವಿಡ್ ಹಿನ್ನಲೆ ಅನ್ಯ ಜಿಲ್ಲೆ ಮತ್ತು ಅನ್ಯ ರಾಜ್ಯದ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಪಾಸ್ ಇದ್ದವರಿಗೆ ಮಾತ್ರ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಜಿಲ್ಲಾಡಳಿತ ನಿಯಮಕ್ಕೂ ಕ್ಯಾರೆ ಅನ್ನದೆ ಕುಕ್ಕೆ ದೇವಳದ...
ಸುಬ್ರಹ್ಮಣ್ಯ

ಚಂಪಾ ಷಷ್ಟಿ ಉತ್ಸವ : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಅಂತರ್ ರಾಜ್ಯ, ಅಂತರ್ ಜಿಲ್ಲಾ ಭಕ್ತರ ನಿರ್ಭಂಧ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಸುಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ಹಿನ್ನೆಲೆಯಲ್ಲಿ ಕೋವಿಡ್‌ 19 ಮುಂಜಾಗ್ರತಾ ಕ್ರಮವಾಗಿ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಡಿ.14ರಂದು ಆದೇಶ ಹೊರಡಿಸಿದ್ದಾರೆ. ದೇವಳದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಧಿಕಾರಿಗಳ ಉಲ್ಲೇಖದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೋವಿಡ್‌ ನಿಯಮ...
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಟ್ಟಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ. ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ‌ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....
1 12 13 14 15 16
Page 14 of 16