ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ-ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿಯವರನ್ನು ಬದಲಾಯಿಸಿ ಬಿಜೆಪಿ ನಾಯಕರಾದ ಎ.ಬಿ.ಮನೋಹರ ರೈಯವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರು ಅಧ್ಯಕ್ಷರಾಗಿದ್ದು, ಇದೀಗ ರಾಜಕೀಯ ಪಕ್ಷದ ಪದಾಧಿಕಾರಿಗಳಾಗಿರುವವರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರಬಾರದೆಂಬ ನಿಯಮದಿಂದ ಅವರನ್ನು ಬದಲಾಯಿಸಿ, ಎ.ಬಿ. ಮನೋಹರ ರೈ ಯವರನ್ನು ಇಂದು ಶಾಸಕರ...





