Monday, March 9, 2026

ಸುಬ್ರಹ್ಮಣ್ಯ

ಜಿಲ್ಲೆದಕ್ಷಿಣ ಕನ್ನಡಸಿನಿಮಾಸುದ್ದಿಸುಬ್ರಹ್ಮಣ್ಯ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ : ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನಾಂಕ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದ್ದು, ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಮಾ.24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ನೆರವೇರುವ ವೃಷಭ ಲಗ್ನ ಸುಮುಹೂರ್ತದಲ್ಲಿ ವಿವಾಹ ನೆರವೇರಲಿದ್ದು, ವಧು-ವರರು ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನಾಂಕವಾಗಿದೆ. ಫೆ.24ರಂದು ನೋಂದಾಯಿತ ವಧು-ವರರ ವಿವರಗಳನ್ನು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ:ನಡುಗಲ್ಲು ಸಮೀಪ ಹಗಲಿನಲ್ಲೇ ಕಾಣಿಸಿಕೊಂಡ ಕಾಡಾನೆ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಪ್ರದೇಶದಲ್ಲಿ ಹಗಲಿನಲ್ಲೇ ಕಾಡಾನೆ ಸಂಚರಿಸಿದೆ. ಕಲ್ಲಾಜೆ ಭಾಗದಿಂದ ಅಲ್ಲಿನ ಹೊಳೆಗೆ ಇಳಿದ ಕಾಡಾನೆ ಮರಕತ ದೇವಸ್ಥಾನದ ಮುಂಭಾಗದ ರಸ್ತೆಯ ಮೂಲಕ ಯೇನೆಕಲ್ಲು ಗ್ರಾಮದ ಅರಂಪಾಡಿ ಭಾಗದಲ್ಲಿ ಸಂಚರಿಸಿದೆ. ಬಳಿಕ ರಾತ್ರಿ ವೇಳೆ ಯೇನೆಕಲ್ಲು ಶಾಲಾ ಮೈದಾನದಲ್ಲಿ ಸಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಕಾಡಾನೆ ಅರಣ್ಯದತ್ತ ತೆರಳಿದೆ. ಕಾಡಾನೆ ಯಾವುದೇ ಹಾನಿ ಮಾಡಿಲ್ಲ. ಹೊಳೆಯಿಂದ ಮೇಲೆ ರಸ್ತೆಗೆ ಬಂದು ರಸ್ತೆಯಲ್ಲೇ ಸಂಚರಿಸಿದೆ ಎಂದು ಸ್ಥಳೀಯರು...
ಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ರಾಜ್ಯ ಹೊರತುಪಡಿಸಿ ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ : ಸಚಿವೆ ಶೋಭಾ ಕರಂದ್ಲಾಜೆ -ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಫಿಸಿಕಲ್ ಸರ್ವೆ ನಡೆಸಿದಾಗ ಮಾತ್ರ ಯಥಾಸ್ಥಿತಿ ತಿಳಿಯಲಿದೆ. ಆದರೆ ಕೇರಳ ರಾಜ್ಯ ಹೊರತುಪಡಿಸಿ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ ಎಂದು ಕೇಂದ್ರ ಅತಿ ಸಣ್ಣ, ಸಣ್ಣ, ಮಾಧ್ಯಮ ಕೈಗಾರಿಕಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲೂಕಿನ ಕೇರ್ಪಡದಲ್ಲಿ ಮಾತನಾಡಿದ ಅವರು ಇದು ಹಿಂದಿನವರು ಮಾಡಿರುವ ತಪ್ಪು. ಏರಿಯಲ್ ಸರ್ವೆ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯದ ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲ್‌ ವಿಕ್ರಂ ಗೌಡ ಮತ್ತು ತಂಡ-ಕಹಳೆ ನ್ಯೂಸ್

ಉಡುಪಿ: ಕಾಡಿನಲ್ಲಿಯೇ ಸುತ್ತಾಡುವ ನಕ್ಸಲರು ಕೆಲವು ಸಮಯದ ಹಿಂದೆ ರೈಲಿನ ಮೂಲಕ ಪ್ರಯಾಣಿಸಿದ್ದರು ಎಂಬ ಮಾಹಿತಿ ಈಗ ಹೊರಗೆ ಬಿದ್ದಿದೆ. ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್‌ ವಿಕ್ರಂ ಗೌಡ ಮತ್ತು ತಂಡ ಸುಬ್ರಹ್ಮಣ್ಯದಿಂದ ಮುರ್ಡೇಶ್ವರ ವರೆಗೆ ರೈಲಿನಲ್ಲಿ ಹೋಗಿ ಅನಂತರ ಕಾಡು ಹಾದಿ ಹಿಡಿದಿದ್ದರು ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಲೋಕಸಭೆ ಚುನಾವಣೆ ಸನಿಹದಲ್ಲಿ ಎಲ್ಲೆಡೆ ಹೆಚ್ಚುವರಿ ಭದ್ರತೆ ಇದ್ದುದರಿಂದ ದಕ್ಷಿಣ ಕನ್ನಡ, ಕೊಡಗು ಗಡಿಭಾಗ ಕೂಜುಮಲೆ, ಕಡಮಕಲ್ಲು ,...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆಗೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ–ಕಹಳೆ ನ್ಯೂಸ್

ಸುಬ್ರಹ್ಮಣ್ಯ:ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಾರತ ತಂಡದ ನಾಯಕ,ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಕುಟುಂಬ ಸಮೇತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಇವರನ್ನು ದೇವಲದ ಆಡಳಿತ ಕಚೇರಿಯಲ್ಲಿ ಗೌರವಿಸಲಾಗಿದೆ....
ಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯಾಹ್ನ ಸುರಿದ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಅಂಗಡಿಗಳಿಗೆ ನುಗ್ಗಿದ ನೀರು.!!– ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗಿದ್ದು, ಕೇವಲ ಅರ್ಧ ತಾಸು ಸುರಿದ ಮಳೆಗೆ ಧರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯದ ಕೆಲ ಅಂಗಡಿಗೆ ನೀರು ನುಗ್ಗಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಧ್ಯಾಹ್ನ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯಿತು. ಕೇವಲ ಅರ್ಧ ತಾಸು ಸುರಿದ ಮಳೆಗೆ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣ ಪ್ರವೇಶಿಸಿತು, ಅಲ್ಲದೆ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ರಾಜ್ಯ ಹೆದ್ದಾರಿಯಲ್ಲಿ ಅಗಲಕ್ಕೆ ಹನ್ನೆರಡು  ಫೀಟ್  ಆಳಕ್ಕೆ ಮೂರು ಫೀಟ್ ಹೊಂಡ : ವಾಹನ ಸವಾರರೇ ಟೇಪ್ ಹಿಡಿದು ಅಳತೆ – ಕಹಳೆ ನ್ಯೂಸ್

ಕುಕ್ಕೆಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಾಜ್ಯ ರಸ್ತೆ ಕುಮಾರಧಾರ ಸೇತುವೆಯಿಂದ ಕೈಕಂಬವರೆಗೆ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಎಂತ ಪರಿಣತಿ ಪಡೆದ ಚಾಲಕನಿಗೂ ಈ ಹೊಂಡ ತಪ್ಪಿಸಲು ಸಾಧ್ಯವೇ ಇಲ್ಲ ಅಂತ ಹೊಂಡಗಳು ಸೃಷ್ಟಿಯಾಗಿದೆ. ಬೆಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ ಕಡೆಯಿಂದ ಕುಕ್ಕೆಗೆ ಬರುವ ಭಕ್ತರು,ಸಾರ್ವಜನಿಕರು,ಇದೆ ರಸ್ತೆಯಲ್ಲಿ ತಮ್ಮ ವಾಹನಗಳನ್ನು ಹರಿಸಿ ಕೊಂಡೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಅಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚಾರಿಸುತ್ತಾರೆ,ಪಾಪ ಹೊಂಡ ಇದೆ ವಾಹನ ಸವಾರರಿಗೆ...
1 2 3 4 15
Page 2 of 15