Recent Posts

Saturday, April 25, 2026

ಸುಳ್ಯ

ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಲವ್ ಜಿಹಾದ್ ಗೆ ಒಳಗಾಗಿ ಮತಾಂತರಗೊಳ್ಳಲು ಸಜ್ಜಾದ ಹಿಂದೂ ಯುವತಿಯೊಂದಿಗೆ ಇಬ್ಬರು ಮುಸ್ಲಿಮ್ ಯುವಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ತೆರಳುತ್ತಿದ್ದಾಗ ಸುಳ್ಯದಲ್ಲಿ ಪೋಲೀಸ್ ತಡೆ : ಠಾಣೆಯಲ್ಲಿ ವಿಚಾರಣೆ – ಕಹಳೆ ನ್ಯೂಸ್

ಸುಳ್ಯ : ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಲವ್ ಜಿಹಾದ್ ಗೆ ಒಳಗಾಗಿ ಮತಾಂತರಗೊಳ್ಳಲು ಸಜ್ಜಾದ ಹಿಂದೂ ಯುವತಿಯೊಂದಿಗೆ ಇಬ್ಬರು ಮುಸ್ಲಿಮ್ ಯುವಕರು ಹೋಗುತ್ತಿದ್ದಾರೆಂಬ ಮಾಹಿತಿಯನ್ನು ಭಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯವರು ನೀಡಿದ ಮಾಹಿತಿ ಮೇರೆಗೆ ಪೋಲೀಸರು ಕಾರನ್ನು ಸುಳ್ಯದಲ್ಲಿ ತಡೆದ ಘಟನೆ ವರದಿಯಾಗಿದೆ. ಮುಳ್ಳೇರಿಯಾ ಕಡೆಯಿಂದ ಈ ಕಾರು ಬರುತಿತ್ತೆಂದೂ, ಅದರಲ್ಲಿ ಇಬ್ಬರು ಹುಡುಗರು ಹಾಗೂ ಒಬ್ಬಳು ಹುಡುಗಿ ಇದ್ದಳು. ಕಾರನ್ನು ಸುಳ್ಯದಲ್ಲಿ ನಿಲ್ಲಿಸಿದ ಪೋಲೀಸರು ಠಾಣೆಗೆ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ-ಕಹಳೆ ನ್ಯೂಸ್

ಎನ್ನೆಂಸಿ, : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ್ ಪೇರಾಲ್ ಮಾತನಾಡಿ, ಸಕಾರಾತ್ಮಕ ಮನೋಭಾವದೊಂದಿಗೆ ಜೀವನ ರೂಪಿಸಿಕೊಳ್ಳಿ. ಯಾವುದೇ ವೃತ್ತಿಯ ಬಗ್ಗೆ ಕೀಳರಿಮೆ ಬೇಡ. ಪಡೆದ ಪದವಿ ವಿದ್ಯಾಭ್ಯಾಸದ ನೆರವಿನಿಂದ ಉತ್ತಮ ಜೀವನ ರೂಪಿಸಿಕೊಳ್ಳುವುದು ಪ್ರಮುಖವಾದುದು ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ರುದ್ರ ಕುಮಾರ್ ಎಂ ಎಂ ವಿದ್ಯಾರ್ಥಿಗಳಿಗೆ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ :ಎನ್ನೆಂಸಿ; ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕ-ಕಹಳೆ ನ್ಯೂಸ್

ಸುಳ್ಯ :ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಇಂದು ಮೇ.28 ಮಂಗಳವಾರದAದು ಜವಾಬ್ದಾರಿ ವಹಿಸಿಕೊಂಡರು. ಇವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು....
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಮಹಿಳೆಯ ಮೈಮೇಲೆ ಮರಬಿದ್ದು ಮಹಿಳೆ ದಾರುಣ ಸಾವು-ಕಹಳೆ ನ್ಯೂಸ್

ಸುಳ್ಯ: ತೋಟಕ್ಕೆ ಹೋಗಿದ್ದ ವೇಳೆ ಮೈಮೇಲೆ ಮರಬಿದ್ದು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಳಿಯಲ್ಲಿ ನಡೆದಿದೆ. ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತ ದುರ್ದೈವಿ. ಮೀನಾಕ್ಷಿಯವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ ತರಲು ಸಂಜೆ ತೆರಳಿದ್ದರು. ಈ ವೇಳೆ ಜೋರಾಗಿ ಗಾಳಿ - ಮಳೆ ಬಂದಿದೆ. ಆಗ ಬೃಹತ್ ಗಾತ್ರದ ಮರವೊಂದು ಮೀನಾಕ್ಷಿಯವರ ಮೇಲೆಯೇ ಬಿದ್ದಿದೆ. ಪರಿಣಾಮ ಅವರು...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ; “ಸ್ವಾವಲಂಬನೆಯಡೆಗೆ ಒಂದು ಹೆಜ್ಜೆ” ಕೌಶಲ್ಯ ತರಬೇತಿ ಶಿಬಿರ– ಕಹಳೆ ನ್ಯೂಸ್

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜ ಕಾರ್ಯ ವಿಭಾಗ ಗ್ರಾಮ ಪಂಚಾಯತ್ ಪೆರಾಜೆ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕುಂಬಳಚೇರಿ ಇವರ ಜಂಟಿ ಆಶ್ರಯದಲ್ಲಿ ಸಮುದಾಯ ತರಬೇತಿ ಶಿಬಿರ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ" ಭಾಗ- 2 ಕೌಶಲ್ಯ ತರಬೇತಿ ಶಿಬಿರವು ಮೇ 7 ಮಂಗಳವಾರದಿಂದ ಮೂರು ದಿನಗಳವರೆಗೆ ಎರಡು ವಿಭಾಗದಲ್ಲಿ ನಡೆಯಿತು. ಇದರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಕಸಿ ಕಟ್ಟುವಿಕೆ ಹಾಗೂ ಫ್ಯಾಶನ್ ಡಿಸೈನ್ ಮತ್ತು...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ. ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್ (22) ಆತ್ಮಹತ್ಯೆಗೆ ಶರಣಾದ ಯುವಕ. ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಚರಣ್ ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿ ಪ್ರಕರಣ ದಾಖಲಾಸಿದ್ದಾರೆ....
ಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ– ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ವಿಚಾರವಾಗಿ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ  ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ಪ್ರತಿಭಾನ್ವಿತ ಯೂ ಟ್ಯೂಬರ್ ಹಾಗೂ ಪೋಸ್ಟರ್ ಡಿಸೈನರ್ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಮುರಳಿ ಕೃಷ್ಣ ವೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾಲೇಜಿನ ಜೀವವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಗ್ರಾಫಿಕ್ ಡಿಸೈನಿಂಗ್ ಮತ್ತು...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ ;ಎನ್ನೆಂಸಿ; ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ವಿಜ್ಞಾನ ಉತ್ಸವದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ-ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಮೇ 03 ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ರಸಾಯನ ಶಾಸ್ತ್ರ ಸ್ನಾತಕೋತ್ತರ ವಿಭಾಗ ಆಯೋಜಿಸಿದ "ವರ್ಟೆಕ್ಸ್ 6.0" ರಾಷ್ಟ್ರ ಮಟ್ಟದ ಅಂತರ ಕಾಲೇಜು ವಿಜ್ಞಾನ ಉತ್ಸವದಲ್ಲಿ ಭಾಗವಹಿಸಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳನ್ನು ಒಳಗೊಂಡ 10 ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದು, ವೀಡಿಯೋಗ್ರಫಿ ಸ್ಪರ್ಧೆಯಲ್ಲಿ ಸುಕನ್ಯಾ...
1 8 9 10 11 12 28
Page 10 of 28