ಬಜರಂಗದಳ ಜಿಲ್ಲಾ ಸಹ ಸಂಚಾಲಕ್ ಲತೀಶ್ ಗುಂಡ್ಯ ರವರ ಮೇಲೆ ಸುಳ್ಳು ಆರೋಪದ ವಿರುದ್ಧ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆ ಖಂಡನೆ-ಕಹಳೆ ನ್ಯೂಸ್
ಬಜರಂಗದಳದ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ ಇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಮೆಸೇಜ್ ಗಳು ಹರಿದಾಡುತಿದ್ದು ಸದ್ರಿ ವಿಷಯಕ್ಕೆ ಸಂಬಂಧಪಟ್ಟಂತೆ ಸುಳ್ಯದ ಪ್ರಗತಿ ಆಂಬುಲೆನ್ಸ್ ನ ಅಭಿಲಾಷ್ ಎಂಬವರು ಇಲ್ಲ ಸಲ್ಲದ ಆರೋಪದೊಂದಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ ಮುಖಾಂತರ ಸುಳ್ಳು ಕೇಸ್ ನೀಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದೆ. ಲತೀಶ್ ಗುಂಡ್ಯ ಮೇಲೆ ಕೊಲೆ ಬೆದರಿಕೆ.ಕೋಮು ವಿಚಾರಕ್ಕೆ ಸಂಬಂಧಪಟ್ಟಂತೆ ಸುಳ್ಳು ಆರೋಪ ಮಾಡಿರುವುದನ್ನು ವಿಶ್ವಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ....







