Saturday, March 7, 2026

ಸುಳ್ಯ

ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಯೋಗ ಸ್ಪರ್ಧೆಯಲ್ಲಿ ವಿದ್ಯೋದಯ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಸುಳ್ಯ : CISCE ರಾಷ್ಟ್ರೀಯ ಕ್ರೀಡೆ ಮತ್ತು ಕ್ರೀಡಾಕೂಟ 2025–2026 ವಲಯ ಮಟ್ಟದ ಯೋಗ ಸ್ಪರ್ಧೆ (Z1) - ದಕ್ಷಿಣ ಕನ್ನಡ ಜಿಲ್ಲೆ ಪ್ರಾಯೋಜಿತ ಸುಳ್ಯದ ಮಾರುತಿ ಅಂತರರಾಷ್ಟ್ರೀಯ ಶಾಲೆಯಲ್ಲಿ ವಲಯ ಮಟ್ಟದ ಯೋಗ ಸ್ಪರ್ಧೆಯನ್ನು ಜೂನ್ 11, 2025 ರಂದು ನಡೆಸಲಾಗಿತ್ತು. ಉಡುಪಿಯ ವಿದ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು‌.ಇದರಲ್ಲಿ 14 ವರ್ಷದೊಳಗಿನ ಯೋಗಪಟುಗಳ ವಿಭಾಗದಲ್ಲಿ‌ ಶಾಲಾವಿದ್ಯಾರ್ಥಿನಿಯರಾದ ಶಿವಾನಿ ಶೆಟ್ಟಿ ಲಯಬದ್ಧ ಯೋಗ ಮತ್ತು ಸಾಂಪ್ರದಾಯಿಕ ಯೋಗ ಎರಡರಲ್ಲೂ...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಸುದ್ದಿಸುಳ್ಯ

ಬಸ್ ನಲ್ಲಿ ಬಾಲಕಿಯೊಂದಿಗೆ ಅನುಚಿತ ವರ್ತನೆ : ಆರೋಪಿ ಕಾಮುಕ ಅಬ್ದುಲ್ ಕುಂಞ ನನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್*

ಪುತ್ತೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಅನುಚಿತವಾಗಿ ವರ್ತಿಸಿದ ಹಾಗೂ ಬಸ್‌ ನಲ್ಲಿದ್ದವರು ಆರೋಪಿಯನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಸೋಮವಾರಪೇಟೆಯ ಕುಟುಂಬವೊಂದು ಪುತ್ತೂರು ಬಸ್ ನಲ್ಲಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಪುತ್ತೂರಿನಲ್ಲಿ ಬಸ್ ಏರಿದ ಪಾಣಾಜೆಯ ಅಬ್ದುಲ್ ಕುಂಞ ಎಂಬವರು ಬಸ್ ನಲ್ಲಿದ್ದ ಸೋಮವಾರಪೇಟೆಯ ಬಾಲಕಿಯ ಮೈ ಮುಟ್ಟಿದನೆನ್ನಲಾಗಿದೆ.   ಇದನ್ನುಬಾಲಕಿ ಆಕ್ಷೇಪಿಸಿ ಬಸ್ ನಲ್ಲಿದ್ದ ತನ್ನ ಮನೆಯವರಿಗೆ ತಿಳಿಸಿದರು. ಆ ವ್ಯಕ್ತಿ ಬಾಲಕಿಯೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ-ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆ ಅಗಲೀಕರಣ ಮತ್ತು ಕಾಂಕ್ರೀಟೀಕರಣಕ್ಕೆ ಗುದ್ದಲಿಪೂಜೆ-ಕಹಳೆ ನ್ಯೂಸ್

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆಗೆ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟಾರವರು ಒದಗಿಸಿದ ರೂ. 5 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಮತ್ತು ಸುಳ್ಯ ನಗರ ಪಂಚಾಯತ್ ಅನುದಾನ ಮೂಲಕ ಯೋಜಿಸಿದ ರಸ್ತೆ ಅಗಲೀಕರಣ ಕಾರ್ಯಕ್ರಮವನ್ನು ದಿನಾಂಕ 29 ಮಂಗಳವಾರದಂದು ಕಾನತ್ತಿಲ ಉಳ್ಳಾಕುಳು ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಹೇಮನಾಥ ಕುರುಂಜಿಯವರು ಶ್ರೀ ಮಹಾಗಣಪತಿ ದೇವರನ್ನು ಪ್ರಾರ್ಥಿಸಿ ದೀಪ ಬೆಳಗಿ, ಮಾನ್ಯ ಶಾಸಕರಾದ ಭಾಗೀರಥಿ...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ-ಕಹಳೆ ನ್ಯೂಸ್

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ "ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್" ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ತಮ್ಮ ಕಲಾ ಕ್ಷೇತ್ರದ ಗುರುವಿನೊಂದಿಗಿದ್ದು ಅಭ್ಯಾಸ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ-ಕಹಳೆ ನ್ಯೂಸ್

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಮನಸ್ಸು - ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 25-04-2025 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ...
ಜಿಲ್ಲೆಶಿಕ್ಷಣಸುದ್ದಿಸುಳ್ಯ

ಎನ್.ಎಂ.ಸಿ; ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಸಮಾರಂಭ ; ವಿದ್ಯೆಯೆಂಬುದು ಶಾಶ್ವತ, ಪುಸ್ತಕವು ನಮ್ಮ ಆಸ್ತಿ: ಡಾ. ಸುರೇಶ್ ಎಂ ಆಲೆಟ್ಟಿ -ಕಹಳೆ ನ್ಯೂಸ್

ಸುಳ್ಯ: ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಾಗಿರುವ ಡಾ. ಸುರೇಶ್ ಎಂ ಆಲೆಟ್ಟಿ ಹೇಳಿದರು. ಇವರು ಏಪ್ರಿಲ್ 17ರಂದು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಸಂಖ್ಯೆ 27ಕ್ಕೆ ಏರಿಕೆ-ಕಹಳೆ ನ್ಯೂಸ್

ಸುಳ್ಯ : ಬಿಜೆಪಿ ನಾಯಕ, ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ನೂ ನಾಲ್ವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಇವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಇದು ಈ ಪ್ರಕರಣದಲ್ಲಿ ಎನ್‌ಐಎ ಸಲ್ಲಿಸಿರುವ ದ್ವಿತೀಯ ಪೂರಕ ಆರೋಪ ಪಟ್ಟಿ ಆಗಿದ್ದು, ಇದರಲ್ಲಿ ಅಬ್ದುಲ್‌ ನಾಸಿರ್‌, ನೌಶಾದ್‌, ಅಬ್ದುಲ್‌ ರಹಮಾನ್‌ ಮತ್ತು ಅತೀಕ್‌ ಅಹ್ಮದ್‌ ಎಂಬವರನ್ನು ಹೆಸರಿಸಲಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ...
1 2 3 4 5 6 27
Page 4 of 27