ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸಾಧ್ಯತೆ ; ಇಂದು, ನಾಳೆ ( ಎ.9,10 ) “ಎಲ್ಲೋ ಅಲರ್ಟ್ ” ಘೋಷಣೆ – ಕಹಳೆ ನ್ಯೂಸ್
ಮಂಗಳೂರು: ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ...







