Wednesday, July 29, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಉದ್ಯೋಗಕ್ಕೆ ಇಸ್ರೇಲ್‌ಗೆ ತೆರಳಬೇಕಿದ್ದ ಯುವಕ ನೇಣಿಗೆ ಶರಣು -ಕಹಳೆ ನ್ಯೂಸ್

ಮಂಗಳೂರು : ಉದ್ಯೋಗ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ. ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42) ಮೃತಪಟ್ಟವರು. ಕಳೆದ ಒಂದು ವರ್ಷದಿಂದ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ ಇವರು, ಸಹೋದರನ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಮೇ 17ರಂದು ಅವರು ಮತ್ತೆ ಇಸ್ರೇಲ್‌ಗೆ ಮರಳಬೇಕಿತ್ತು. ಸೋಮವಾರ ನಸುಕಿನ ಜಾವ ಸೂರ್ಯಪ್ರಕಾಶ್‌ ತಮ್ಮ...
ಕಾಸರಗೋಡುದಕ್ಷಿಣ ಕನ್ನಡಮಂಗಳೂರುಶುಭಾಶಯಸುದ್ದಿ

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ. ಮೇ 16ರಂದು ಕಾಸರಗೋಡು ಜಿಲ್ಲೆಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಯಕ್ಷಗಾನ ಕಲಾವಿದರಿಗೆ ಅವಮಾನ ; ಮಹೇಶ್ ಶೆಟ್ಟಿ ತಿಮರೋಡಿ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ...
ಉಡುಪಿದಕ್ಷಿಣ ಕನ್ನಡಮಂಗಳೂರುಮುಂಬೈಶುಭಾಶಯಸುದ್ದಿ

ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ – ಕಹಳೆ ನ್ಯೂಸ್

ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ  ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.   ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲ್ಯಾಕ್ಸ್ – ಕಹಳೆ ನ್ಯೂಸ್

ಮಂಗಳೂರು : ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳಿಗ್ಗೆ 8ಗಂಟೆಗೆ ಸುಮಾರಿಗೆ ಶುರುವಾದ ಮಳೆಯು ಕೆಲಹೊತ್ತುಗಳ ಕಾಲ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಳಿಕ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ..!! – ಕಹಳೆ ನ್ಯೂಸ್

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮೇ 28 ರಂದು ಅಮ್ಮ ಮಂಗಳೂರಿಗೆ ಆಗಮನ ; ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಮೇ.06: ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28 ರಂದು ಆಗಮಿಸುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಕಾರ್ಯಕ್ರಮ” ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ 2026″ದ ಪ್ರಯುಕ್ತ ಚಪ್ಪರ ಮುಹೂರ್ತ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ರವರ ಉಪಸ್ಥಿತಿಯಲ್ಲಿ ನಡೆದ ಈ‌ ಕಾರ್ಯಕ್ರಮದಲ್ಲಿ ನಿಕಟಪೂರ್ವ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ” ಮಾನವ ಮಹಾದೇವತ್ವಕ್ಕೆ ಏರುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಪಘಾತಕ್ಕೆ ಕಾರಣವಾಗಿರುವ ಅಪೂರ್ಣ ಚತುಷ್ಪಥ ರಸ್ತೆ ಕಾಮಗಾರಿ, ದುರಸ್ತಿಗೆ ಒತ್ತಾಯಿಸಿ ರಸ್ತೆ ತಡೆ – ಪ್ರತಿಭಟನೆ -ಕಹಳೆ ನ್ಯೂಸ್

ಸುರತ್ಕಲ್ : ಕಾನ -MRPL ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಇಂದು ರಸ್ತೆ ತಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ ನಾಗರಿಕರ ಸುಧೀರ್ಘ ಹೋರಾಟದ ಬಳಿಕ...
1 4 5 6 7 8 114
Page 6 of 114