ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್ -ಕಹಳೆ ನ್ಯೂಸ್
ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು...







