Saturday, April 25, 2026

ಸಂತಾಪ

ಕಾರ್ಕಳಜಿಲ್ಲೆಸಂತಾಪಸುದ್ದಿ

ಪಡುಬಿದ್ರೆ -ಕಾರ್ಕಳ ಹೆದ್ದಾರಿಯಲ್ಲಿ ರಿಕ್ಷಾ- ಬಸ್ ಅಪಘಾತ: ಓರ್ವ ಸಾವು -ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ-ಪಡುಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ (ಜೂನ್ 12)ದಂದು ಬೆಳಿಗ್ಗೆ ನಡೆದಿದೆ. ಅಡ್ವೆ – ಕಣಜಾರ್ ಕಟ್ಟೆ ಜಂಕ್ಷನ್ ಬಳಿ ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ರಿಕ್ಷಾದಲ್ಲಿದ್ದ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಭಾರತ ಮೂಲದ ಕಾರ್ಮಿಕ ಪ್ರತಾಪ್ ಸ್ಥಳದಲ್ಲೇ...
ಅಂತಾರಾಷ್ಟ್ರೀಯರಾಜ್ಯಸಂತಾಪಸುದ್ದಿ

ಮಿನಿವ್ಯಾನ್ ಗೆ ಬಸ್ ಡಿಕ್ಕಿಯಾಗಿ 15 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಮಲೇಷ್ಯಾ : ಮಲೇಷ್ಯಾದಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಮಲೇಷ್ಯಾದ ಕ್ಯಾಂಪಸ್‌ಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ಸಂಚಲನ ಮೂಡಿಸಿದೆ. ಇತರ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಮಲೇಷ್ಯಾದ ಸುಲ್ತಾನ್ ಇದ್ರಿಸ್ ಶಿಕ್ಷಣ ವಿಶ್ವವಿದ್ಯಾಲಯದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಬಸ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಬಸ್ ಉರುಳಿಬಿದ್ದು 13 ವಿದ್ಯಾರ್ಥಿಗಳು ಸ್ಥಳದಲ್ಲೇ...
ಸಂತಾಪಸುದ್ದಿ

ತೆಂಕು ತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ನಿಧನ 

ಮುಂಡಾಜೆ: ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವರ್ಷ ) ಜೂ. 7ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷ ಗಳಿಂದ ವೇಷ ಧಾರಿ ಯಾಗಿ, 3ನೇ ಮೇಳದ ಪ್ರಬಂಧಕ ರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು. ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತ: ಅಭಿಮಾನಿ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಶಿವಮೊಗ್ಗ : ಆರ್​ಸಿಬಿ ತಂಡ ಐಪಿಎಲ್​​​​ನಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಮಂಗಳವಾರ ರಾತ್ರಿ (ಜೂ.3) ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಬೈಕ್​​ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೆಂಕಟೇಶ್ ನಗರದ ನಿವಾಸಿ ಅಭಿನಂದನ್​​ (21) ಮೃತಪಟ್ಟಿದ್ದಾನೆ. ಆರ್​ಸಿಬಿ ವಿಜಯೋತ್ಸವಕ್ಕಾಗಿ ಯುವಕರ ಗುಂಪು ಬೈಕ್​​ ರ್ಯಾಲಿಯನ್ನು ಏರ್ಪಡಿಸಿತ್ತು. ಈ ಮೆರವಣಿಗೆಯ ವೇಳೆ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ತೀವು ಗಾಯಗೊಂಡ ಯುವಕ...
ಸಂತಾಪಸಿನಿಮಾಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ಇನ್ನಿಲ್ಲ –ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡದ 'ಪಾರು'‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಅಂತಹ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಕಿರುತೆರೆ ತಾರೆಯರು ಹಾಗೂ ಜನರು ಇವರ ಪರಿಸ್ಥಿತಿಯನ್ನು ನೋಡಿ ನೆರವನ್ನು ನೀಡಿದ್ದರು. ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಶ್ರೀಧರ್ ನಾಯಕ್ ಚಿಕಿತ್ಸೆಯನ್ನು ಪಡೆಯುತ್ತಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಚಾಲಕ ಮೃ*ತ್ಯು-ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡು- ಕೈಕಂಬ ಮಧ್ಯೆ ‌ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತಪಟ್ಟ ವ್ಯಕ್ತಿ. ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಮುಂಜಾನೆ 4.30ರ ಸುಮಾರಿಗೆ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸಂತಾಪಸುದ್ದಿ

`ಮಹಾಮಳೆ’ಗೆ ಬೆಳಗಾವಿಯಲ್ಲಿ ಘೋರ ದುರಂತ ಮನೆ ಗೋಡೆ ಕುಸಿದುಬಿದ್ದು 3 ವರ್ಷದ ಮಗು ಸಾವು.! – ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲಗಿದ್ದಾಗ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಕೀರ್ತಿಲಾ ನಾಗೇಶ್ ಪೂಜಾರಿ (3) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು-ಕಹಳೆ ನ್ಯೂಸ್

ವಿಟ್ಲ : ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಪತ್ನಿಯ ಸೀಮಂತದ ದಿನದಂದೆ ಸಾವನ್ನಪ್ಪಿದ ಪತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ತಿಳಿದುಬಂದಿದೆ. ನಿನ್ನೆ ಅವರ ಪತ್ನಿಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ...
1 8 9 10 11 12 37
Page 10 of 37