Wednesday, May 22, 2024

ಸಂತಾಪ

ಸಂತಾಪಸುದ್ದಿ

ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಂತಾಪ – ಕಹಳೆ ನ್ಯೂಸ್

ನವದೆಹಲಿ: ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ‘ದೀನದಲಿತರ ಸಬಲೀಕರಣಕ್ಕಾಗಿ ಮತ್ತು ಸಮುದಾಯದ ಸೇವೆಗಾಗಿ ಪೂಜ್ಯ ಕೇಶವಾನಂದ ಭಾರತಿ ಸ್ವಾಮೀಜಿ ಅವರನ್ನು ನಾವು ಸದಾ ನೆನೆಯುತ್ತೇವೆ. ಅವರು ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಶ್ರೇಷ್ಠ ಸಂವಿಧಾನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಸ್ವಾಮೀಜಿ ಅವರು ಸದಾ ನಮ್ಮ ನೆನಪಿನಲ್ಲಿರುತ್ತಾರೆ.ಮುಂದಿನ ತಲೆಮಾರುಗಳಿಗೆ ಸ್ಫೂರ್ತಿಯಾಗಿರುತ್ತಾರೆ. ಓಂ...
ಸಂತಾಪಸುದ್ದಿ

ಎಡನೀರು ಮಠಾಧೀಶರು ಬಹುಮುಖ ಪ್ರತಿಭಾ ಸಂಪನ್ನರು: ಸಂತಾಪ ಸೂಚಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಧರ್ಮಸ್ಥಳ: ಪರಂಧಾಮ ಹೊಂದಿದ ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಉತ್ತಮ ವಾಗ್ಮಿ, ಭಾಷಾ ಪ್ರಭುತ್ವ ಹೊಂದಿದ ವಿದ್ವಾಂಸರಾಗಿದ್ದು, ಸಂಗೀತ, ಕಲೆ, ಶಿಕ್ಷಣ, ಸಾಹಿತ್ಯಕ್ಕೆ ವಿಶೇಷ ಪ್ರೋತ್ಸಾಹ, ಕೊಡುಗೆ ನೀಡಿದ್ದಾರೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಗೌರವ ನಮನ ಸಲ್ಲಿಸಿದ್ದಾರೆ. ಯಕ್ಷಗಾನ ಕಲೆಯಲ್ಲಿ ಶ್ರೀ ಗಳು ವಿಶೇಷ ಅಸಕ್ತಿ, ಪರಿಣತಿ ಹೊಂದಿದ್ದು, ತಮ್ಮ ಸುಮಧುರ ಕಂಠಸಿರಿಯ ಭಾಗವತಿಕೆಯಿಂದ ಅಪಾರ ಅಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು‌. ಮೂಲಭೂತ ಹಕ್ಕಿನ ವಿಚಾರವಾಗಿ...
ಸಂತಾಪಸುದ್ದಿ

Breaking News : ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮಿ ಶನಿವಾರ ಮಧ್ಯರಾತ್ರಿ 12.30ಕ್ಕೆ ದೈವಾದೀನರಾಗಿದ್ದಾರೆ. ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು....
ಸಂತಾಪಸುದ್ದಿ

ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ ಇನ್ನಿಲ್ಲ – ಕಹಳೆ ನ್ಯೂಸ್

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಮುಂಚೂಣಿಯಲ್ಲಿದ್ದರು. ತ್ಯಾಗ ಜೀವಿಯಾಗಿದ್ದ ಅವರು ೧೯೭೭ರಿಂದ ಇಲ್ಲಿಯ ತನಕ ಸುಮಾರು ೪೩ ವರ್ಷಗಳ ಕಾಲ ಟ್ರಸ್ಟ್...
ಸಂತಾಪಸುದ್ದಿ

ಯಕ್ಷಗಾನ ಪ್ರಸಂಗಕರ್ತ ಶಿಮಂತೂರು ಡಾ. ನಾರಾಯಣ ಶೆಟ್ಟಿ ವಿಧಿವಶ – ಕಹಳೆ ನ್ಯೂಸ್

ಮಂಗಳೂರು, ಆ 26 : ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ , ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ನಾರಾಯಣ ಶಿಮಂತೂರು ಶೆಟ್ಟಿ (86) ಅವರು ಇಂದು ವಿಧಿವಶರಾಗಿದ್ದಾರೆ. ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು,...
ಸಂತಾಪ

ವಿಟ್ಲ ಅರಮನೆಯ ಜನಾರ್ದನ ವರ್ಮ ಅರಸರು ವಿಧಿವಶ-ಕಹಳೆ ನ್ಯೂಸ್

ಆಗಸ್ಟ್ 2-ವಿಟ್ಲ ಅರಮನೆಯ ಅರಸು ವಿಟ್ಲದ ರಾಜಮನೆತನದ ಹಿರಿಯರು ಜನಾರ್ದನ ವರ್ಮ ಅರಸರು (84)ಹೃದಯ ಘಾತದಿಂದ ಇಂದು ನಿಧನರಾಗಿದ್ದಾರೆ. ಜನಾರ್ದನ ವರ್ಮ ಅರಸರು ಪತ್ನಿ ,ಮೂವರು ಪುತ್ರರನ್ನು ಅಗಲಿದ್ದಾರೆ. ಇಂದು ಅರಸು ಮನೆತನದ ವಿಧಿ ವಿಧಾನಗಳ ಮೂಲಕ ಬಾಕಿಮರು ಗದ್ದೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸೋಮವಾರ ಸಾಯಂಕಾಲ 4 ಗಂಟೆಯ ನಂತರ ವಿಟ್ಲ ವರ್ತಕರ ಸಂಘದ ವತಿಯಿಂದ ವಿಟ್ಲ ಪೇಟೆ ಬಂದ್ ನಡೆಯಲಿದ್ದು,ವಿಟ್ಲ ಸರ್ಕಾರಿ ಬಸ್ ನಿಲ್ದಾಣದ ಬಳಿಯಲ್ಲಿ 4.30 ಕ್ಕೆ...
ಕ್ರೈಮ್ಸಂತಾಪಸಿನಿಮಾ

ಸಿನಿ ರಂಗಕ್ಕೆ ಮತ್ತೊಂದು ಆಘಾತ ; ಸುಶಾಂತ್ ಬೆನ್ನಲ್ಲೇ ಮತ್ತೊಬ್ಬ ಯುವನಟ ಆತ್ಮಹತ್ಯೆ – ಕಹಳೆ ನ್ಯೂಸ್

ಮುಂಬಯಿ: ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್‌ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ  ಪೋಷಕರ ಪ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಇವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ವ್ಯಕ್ತಿಯೊಬ್ಬ ಯಾವ ಕಾರಣಕ್ಕೆ ಸಾಯುತ್ತಾನೆ ಎಂಬುದನ್ನು ವಿಶ್ಲೇಷಿಸಿದ್ದರು ಎನ್ನುತ್ತಿವೆ...
ಬಂಟ್ವಾಳರಾಜ್ಯಸಂತಾಪ

ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಗೆ ಪಿತೃವಿಯೋಗ – ಕಹಳೆ ನ್ಯೂಸ್

ಬಂಟ್ವಾಳ : ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ತಂದೆ ಕಶೆಕೋಡಿ ಗುರುವಾಯುರಪ್ಪನ್ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಪ್ರಮಾಣದ ಬಂಧುಮಿತ್ರರನ್ನು ಅಗಲಿದ್ದಾರೆ....
1 13 14 15 16
Page 15 of 16