Thursday, March 12, 2026

ಸಂತಾಪ

ಅಂತಾರಾಷ್ಟ್ರೀಯಸಂತಾಪಸುದ್ದಿ

ಬ್ರೆಜಿಲ್‌:ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದ ಬಸ್ : ಸ್ಥಳದಲ್ಲೇ 38 ಪ್ರಯಾಣಿಕರು ಸಾವು- ಕಹಳೆ ನ್ಯೂಸ್

ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ಟ್ರಕ್​ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 38 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಗ್ನೇಯ ಬ್ರೆಜಿಲ್‌ನಲ್ಲಿ ನಡೆದಿದೆ. ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಬೆಳಗಿನ ಜಾವ 4:00ರ ಸುಮಾರಿಗೆ ಸಾವೊ ಪಾಲೊ ಪ್ರದೇಶದಿಂದ ವಿಟೋರಿಯಾ ಡ ಕಾನ್‌ಕ್ವಿಸ್ಟಾಗೆ ತೆರಳುತ್ತಿತ್ತು. ವೇಗವಾಗಿ ತೆರಳುತ್ತಿರುವಾಗ ಬಸ್​ನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಬಸ್​ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್​ಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ....
ಬೆಂಗಳೂರುರಾಜ್ಯಸಂತಾಪಸುದ್ದಿ

ಕಂಟೇನರ್ ದುರಂತ: ಒಂದೇ ಕುಟುಂಬದ ಆರು ಜನರ ಅಂತ್ಯಕ್ರಿಯೆ, ಕಂಬನಿ ಮಿಡಿದ ಗ್ರಾಮಸ್ಥರು- ಕಹಳೆ ನ್ಯೂಸ್

ಸಾಂಗ್ಲಿ: ವಿಜಯಪುರದ ಗಡಿಭಾಗದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತಾ ತಾಲೂಕಿನ ಮೊರಬಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಾಸ್ ಪೇಟೆಯ ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಒಂದೇ ಕುಟುಂಬದ ಆರು ಜನರ ಅಂತ್ಯಕ್ರಿಯೆ ಮೊರಬಗಿಯಲ್ಲಿ ನೆರವೇರಿಸಲಾಗಿದೆ. ಐಟಿ ಉದ್ಯಮಿ ಚಂದ್ರಮ್ ಏಗಪ್ಪಗೋಳ(48), ಪತ್ನಿ ಗೌರಾಬಾಯಿ(42), ಪುತ್ರ ಜಾನ್(16), ಪುತ್ರಿ ದೀಕ್ಷಾ(12), ಚಂದ್ರಶೇಖರ ಅವರ ಸಹೋದರನ ಪತ್ನಿ ವಿಜಯಲಕ್ಷ್ಮಿ(36),...
ಸಂತಾಪಸುದ್ದಿ

ಇಹಲೋಕ ತ್ಯಜಿಸಿದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ – ಕಹಳೆ ನ್ಯೂಸ್

ಅಂಕೋಲಾ: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (86) ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಇಂದು (ಡಿ.16) ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತುಳಸಿಗೌಡ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದರೂ...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸಂತಾಪಸುದ್ದಿ

ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ ನಿಧನ – ಕಹಳೆ ನ್ಯೂಸ್

ವಾಷಿಂಗ್ಟನ್‌: ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ನಿಧನರಾಗಿದ್ದಾರೆ. ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಜಾಕೀರ್ ಹುಸೇನ್ ಅಸ್ವಸ್ಥರಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರ ಸ್ನೇಹಿತ...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸಂತಾಪಸುದ್ದಿ

ಮೊದಲ ‘ಮಹಿಳಾ ಭಾಗವತ’ ರೆಂಬ ಖ್ಯಾತಿಯ ಲೀಲಾವತಿ ಬೈಪಾಡಿತ್ತಾಯ ಇ*ನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(78) ಶನಿವಾರ(ಡಿ14) ವಯೋಸಹಜ ಅ*ನಾರೋಗ್ಯದಿಂದ ಬಜಪೆ ತಲಕಳದ ಸ್ವಗೃಹದಲ್ಲಿ ನಿ*ಧನ ಹೊಂದಿದರು. ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಲೀಲಾವತಿ ಬೈಪಡಿತ್ತಾಯ ಜನಿಸಿದರು. ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಜನಮನ ಗೆದ್ದಿದ್ದರು. ಪತಿಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಅವರೊಂದಿಗೆ ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕುಂಬಳೆ, ಬಪ್ಪನಾಡು ಮೇಳ, ತಲಕಳ ಮುಂತಾದ...
ಬೆಂಗಳೂರುರಾಜ್ಯಸಂತಾಪಸುದ್ದಿ

” ಯಾರನ್ನೂ ದ್ವೇಷಿಸಲಿಲ್ಲ ” ಎಸ್.ಎಂ ಕೃಷ್ಣ ಅಗಲಿಕೆಯ‌ ಕುರಿತು ನೋವು ಹಂಚಿಕೊಂಡ ನಟಿ ರಮ್ಯಾ – ಕಹಳೆ ನ್ಯೂಸ್

ಬೆಂಗಳೂರು/ಮಂಡ್ಯ: ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್‌.ಎಂ‌ ಕೃಷ್ಣ (SM ಕೃಷ್ಣ) ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ನೋವಿನ ನುಡಿಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ʻʻಒಬ್ಬ Statesman ಎಲ್ಲಾ ಅರ್ಥಗಳಲ್ಲಿ ರಾಜಕಾರಣಿ ಎಂದಿಗೂ ಅಲ್ಲ. ಅವರು ಯಾರನ್ನೂ, ತಮ್ಮ ಪ್ರತಿಸ್ಪರ್ಧಿಗಳನ್ನು ಸಹ ದ್ವೇಷಿಸಿ...
ಸಂತಾಪ

ಎಸ್‌ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದ ಸರ್ಕಾರ..! – ಕಹಳೆ ನ್ಯೂಸ್

ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ 92ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್‌ಎಂ ಕೃಷ್ಣ ತಮ್ಮ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಇದರ ಹಿನ್ನಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ.   ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಎಸ್‌ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ...
ಬೆಂಗಳೂರುಮಂಡ್ಯಸಂತಾಪಸುದ್ದಿ

ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ ಇನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ (92) ಮಂಗಳವಾರ(ಡಿ .10)ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.   ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ...
1 16 17 18 19 20 36
Page 18 of 36