Friday, March 6, 2026

ಸಂತಾಪ

ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಸಂತಾಪಸುದ್ದಿಸುಳ್ಯ

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ-ಮಗು ಬೆಳಗಾಗುವಷ್ಟರಲ್ಲಿ ಕೆರೆಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಸುಳ್ಯ : ರಾತ್ರಿ ಮನೆಯಲ್ಲಿ ನಿದ್ದೆಗೆ ಜಾರಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಇಂದು ಬೆಳಗಾಗುವಷ್ಟರಲ್ಲಿ ಮನೆಯ ಬಳಿಯ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೋಡಿಯಾಲ ಗ್ರಾಮದ ಅರ್ವಾರ ಹರೀಶ್ ಎಂಬುವವರ ಪತ್ನಿ ಮಧುಶ್ರೀ (34) ಹಾಗು ಮದು ಧನ್ವಿ (3) ಮೃತರು. ಹರೀಶ್ ತನ್ನ ಪತ್ನಿ, ಮಗು ಹಾಗೂ ತಾಯಿ ಜೊತೆ ಅರ್ವಾರ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಎಲ್ಲಾ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರಿನ ಕೈಗಾರಿಕಾ ಕ್ರಾಂತಿಯ ಹರಿಕಾರ ನಿಟ್ಟೆ ವಿನಯ ಹೆಗ್ಡೆ ಇನ್ನಿಲ್ಲ : ಹತ್ತು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದ ಕಾಯಕ ಯೋಗಿ ವಿನಯಣ್ಣ !-ಕಹಳೆ ನ್ಯೂಸ್

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಶಿಕ್ಷಣ ತಜ್ಞ, ಐವತ್ತು ವರ್ಷಗಳ ಹಿಂದೆಯೇ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಉದ್ಯಮ ಕಟ್ಟಿ ಬೆಳೆಸಿದ್ದ ಡಾ.ಎನ್. ವಿನಯ ಹೆಗ್ಡೆ (86) ಇನ್ನಿಲ್ಲ. ಜನವರಿ ಒಂದರ ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಲೋಕಸಭಾ ಸ್ಪೀಕ‌ರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ಅವರು 1939, ಎಪ್ರಿಲ್ 3ರಂದು ಜನಿಸಿದ್ದರು....
ರಾಷ್ಟ್ರೀಯಸಂತಾಪಸುದ್ದಿ

ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಪುಣೆ: ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿರುವ ಘೋರ ಘಟನೆ ಮಾಹಾರಾಷ್ಟ್ರದ ಲಾತೂರ್ ನಲ್ಲಿ ನಡೆದಿದೆ. ಔಷಾ ತಾಂಡಾ ನಿವಾಸಿ ಗಣೇಶ್ ಚೌವ್ಹಾಣ್ ಎಂಬಾತನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿದ್ದು ಬಳಿಕ ಕಾರಿನಲ್ಲಿಟ್ಟು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಗಣೇಶ್ ಚೌವ್ಹಾಣ್ ಐಸಿಐಸಿಐ ಬ್ಯಾಂಕ್ ನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಕಾರಿನಲ್ಲಿದ್ದ ಮೃತದೇಹ ತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದು,...
ಸಂತಾಪಸಿನಿಮಾಸುದ್ದಿ

ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ಯುವ ನಟ ಅಖಿಲ್ ವಿಶ್ವನಾಥ್ : ಆತ್ಮಹತ್ಯೆ ಶಂಕೆ

ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಅಖಿಲ್ ವಿಶ್ವನಾಥ್  ಅವರು ತ್ರಿಶೂರ್‌ನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ವಿಶ್ವನಾಥ್‌ (30) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವು ಮಲಯಾಳಂ ಚಲನಚಿತ್ರೋದ್ಯಮ ಮತ್ತು ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ. ಅಖಿಲ್ ಮನೆಯಲ್ಲಿ ಬಿದ್ದಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸಾವಿಗೆ ಕಾರಣವೇನೆಂದು ಇನ್ನೂ ಅಧಿಕೃತ ಮಾಹಿತಿ ಇಲ್ಲ. ಆದರೂ, ಆರಂಭಿಕ...
ದೆಹಲಿಬೆಳಗಾವಿರಾಜಕೀಯಸಂತಾಪಸಿನಿಮಾಸುದ್ದಿ

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ- ಕಹಳೆ ನ್ಯೂಸ್

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿಯವರು ಅಗಲಿದ ಗಣ್ಯರಿಗೆ ಗೌರವ ಸೂಚಿಸುವ ಸಂತಾಪ ನಿರ್ಣಯವನ್ನು ಮಂಡಿಸಿದರು. ಸಂತಾಪ ನಿರ್ಣಯದ ಮೇಲೆ ಆಡಳಿತ ಪಕ್ಷದ ನಾಯಕ ಎನ್‌.ಎಸ್‌‍.ಬೋಸರಾಜ್‌, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ...
ಉಡುಪಿಯಕ್ಷಗಾನ / ಕಲೆಸಂತಾಪಸುದ್ದಿ

ಮಹಿಷಾಸುರ ಪಾತ್ರ ನಿರ್ವಹಿಸಿದ್ದ ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನ

ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಬಣ್ಣದ ಮನೆಯಲ್ಲೇ ಹೃದಯಾಘಾತದಿಂದ ಕುಸಿದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ. 2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದರು. ದೇವಿ ಮಾಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ...
ಜಿಲ್ಲೆಸಂತಾಪಸುದ್ದಿ

ಕಾರು ಬೈಕ್ ಡಿಕ್ಕಿ: ಬೆಂಕಿಯಲ್ಲಿ ಬೆಂದ ಇಬ್ಬರು ಸಾವು – ಕಹಳೆ ನ್ಯೂಸ್

ಕಮಲಾಪುರ (ಕಲಬುರಗಿ ಜಿಲ್ಲೆ): ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶನಿವಾರ ರಾತ್ರಿ ತಾಲ್ಲೂಕಿನ ಮಹಾಗಾಂವ ಕ್ರಾಸ್ ರಾಜ ಧಾಬಾ ಬಳಿ ನಡೆದಿದೆ. ಕಮಲಾಪುರ ತಾಲ್ಲೂಕಿನ ಸಿರಗಾಪುರ ಗ್ರಾಮದ ಆಕಾಶ ಚಂದ್ರಕಾಂತ ಧನವಂತ (19), ಭೂಸಣಗಿ ಗ್ರಾಮದ ಸುಶೀಲ್ ಮಲ್ಲಿಕಾರ್ಜುನ (28) ಮೃತ ಯುವಕರಾಗಿದ್ದಾರೆ. ಡಿಕ್ಕಿ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದ್ದು ಈ ಇಬ್ಬರು ಬೆಂಕಿಯಲ್ಲಿ ಬೆಂದಿದ್ದಾರೆ. ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದು, ಸುಶೀಲ್...
ಉಡುಪಿಕಾರ್ಕಳಜಿಲ್ಲೆಸಂತಾಪಸುದ್ದಿ

ಕಾರ್ಕಳ: ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ !-ಕಹಳೆ ನ್ಯೂಸ್

ಕಾರ್ಕಳ : ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ನಿಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಂತ್‌ನ ಮೊಬೈಲ್‌ ಅನ್ನು ದುರಸ್ತಿಗೆ ನೀಡಲಾಗಿದ್ದು, ಹೊಸ ಮೊಬೈಲ್ ಕೊಡಿಸುವಂತೆ ಅಮ್ಮನಲ್ಲಿ ಹಠ ಹಿಡಿದಿದ್ದ. ಕೆಲ ತಿಂಗಳು ಕಳೆದ ಬಳಿಕ ಹೊಸ ಮೊಬೈಲ್ ಕೊಡಿಸುವುದಾಗಿ ಅಮ್ಮ ಸುರೇಖಾ ಭರವಸೆ ನೀಡಿದ್ದಾಗ್ಯೂ ಆತ ಮನೆಬಿಟ್ಟು ತೆರಳಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
1 2 3 4 36
Page 2 of 36