Wednesday, March 11, 2026

ಸಂತಾಪ

ಸಂತಾಪಸುದ್ದಿ

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಸ್ಕೂಟರ್ : ಸವಾರ ಮೃತ್ಯು –ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲೆಯ ಕೋಟದ ರಸ್ತೆ ಬದಿಯಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿರುವ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಜು.4ರ ಮಧ್ಯರಾತ್ರಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ದಿವಾಕರ್ ಶೆಟ್ಟಿ (65) ಎಂದು ಗುರುತಿಸಲಾಗಿದೆ. ದಿವಾಕರ್ ಅವರು ರಾತ್ರಿ ವೇಳೆ ಸ್ಕೂಟರ್ ನಲ್ಲಿ ಮನೆಗೆ ಬರುತ್ತಿದ್ದಾಗ ಮನೆ ಸಮೀಪದ ರಸ್ತೆಯ ತಿರುವಿನಲ್ಲಿ ಮಳೆಯಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿ ಯಾವುದೇ...
ಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಆತ್ಮಹತ್ಯೆಗೆ ಯತ್ನಿಸಿದ ದಂಪತಿ : ಪತಿ ಸಾವು – ಪತ್ನಿ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆ ಗೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ ನಡೆದಿದೆ ‌. ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಗಳು. ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವೈದ್ಯರು ದೃಡಪಡಿಸಿದ ಬಗ್ಗೆ ಪೋಲೀಸರು...
ಸಂತಾಪಸುದ್ದಿ

ಡಿಶ್ ರಿಪೇರಿ ವೇಳೆ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು – ಕಹಳೆ ನ್ಯೂಸ್

ಬಂಟ್ವಾಳ : ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರು ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ಜೂನ್ 30 ರ ಮಧ್ಯಾಹ್ನದ ವೇಳೆ ನಡೆದಿದೆ. ಆಚಾರಿಪಲ್ಕೆ ನಿವಾಸಿ ಯತೀಶ್ (32) ಮೃತಪಟ್ಟ ದುರ್ದೈವಿ. ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ...
ಬಂಟ್ವಾಳಸಂತಾಪಸುದ್ದಿ

ಮಾಣಿಲ: ಆಟೋ ಪಲ್ಟಿ – ಚಾಲಕ ಮೃತ್ಯು – ಕಹಳೆ ನ್ಯೂಸ್

ವಿಟ್ಲ: ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಆಟೋ ಚಾಲಕನನ್ನು ಸುಬ್ರಹ್ಮಣ್ಯ, ಪಂಜ ನಿವಾಸಿ ಸುದರ್ಶನ್ (35 ವ.) ಮೃತಪಟ್ಟವರಾಗಿದ್ದಾರೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ.  ವಿಟ್ಲ...
ರಾಜ್ಯಸಂತಾಪಸುದ್ದಿ

ಎರಡು ರೈಲುಗಳ ನಡುವೆ ಡಿಕ್ಕಿ : ಹಳಿ ತಪ್ಪಿದ 12 ಬೋಗಿ –ಕಹಳೆ ನ್ಯೂಸ್

ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 12 ಬೋಗಿಗಳು ಹಳಿ ತಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಾಕುರದ ಓಂಡಾ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ನಡೆದಿದೆ. ಒಂದು ಗೂಡ್ಸ್ ರೈಲು ಮತ್ತೊಂದು ಗೂಡ್ಸ್ ರೈಲಿಗೆ ಹಿಂಬದಿಯಿAದ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ, ಆದರೆ ಗೂಡ್ಸ್ ರೈಲಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ...
ಸಂತಾಪಸುದ್ದಿ

ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಹೆಚ್. ನಾರಾಯಣ ಕಾಮತ್ ಇನ್ನಿಲ್ಲ – ಕಹಳೆ ನ್ಯೂಸ್

ಅಲ್ಪ ಕಾಲದ ಅಸೌಖ್ಯದಿಂದ ಎಚ್ ನಾರಾಯಣ ಕಾಮತ್ ಜೂ.19ರ ರಾತ್ರಿ 11 ಗಂಟೆಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಭಾರತೀಯ ವಾಯುಸೇನೆಯಲ್ಲಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಪತಂಜಲಿ ಯೋಗಸಮಿತಿ ಸಕ್ರಿಯ ಸದಸ್ಯರಾಗಿ ಹಲವಾರು ಯೋಗ ತರಭೇತಿ ನೀಡಿದ್ದರು. ಪಟ್ಲ ರೂರಲ್ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ, ಪ್ರಸ್ತುತ ಆಡಳಿತ ಮಂಡಳಿಯ ಸದಸ್ಯರಾಗಿದ್ದು ಶಾಲೆಗೆ ಉತ್ತಮ ಆಧಾರರಾಗಿ ಕೆಲಸ ಮಾಡುತ್ತಿದ್ದು,...
ಕ್ರೈಮ್ದಕ್ಷಿಣ ಕನ್ನಡಸಂತಾಪಸುದ್ದಿಸುಳ್ಯ

ಸುಳ್ಯ : ಬೈಕ್ – ಕಾರು ಭೀಕರ ಅಪಘಾತ ; ಕೆವಿಜೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಪಾಲಡ್ಕ ಬಳಿ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಮೇ 22 ರಂದು ವರದಿಯಾಗಿದೆ. ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ...
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಎಂದಿನಂತೆ ಕರ್ತವ್ಯಕ್ಕೆ‌ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್​ನಲ್ಲಿ ವ್ಯಾಯಾಮ ಮಾಡಿದ್ದರು. ಆಗ ಅವರು ಹೃದಯಾಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದರು. ತಕ್ಷಣ ಯಶವಂತಪುರದ ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆಸ್ಪತ್ರೆಗೆ ಕರೆತರುವ ವೇಳೆ ಹೃದಯ...
1 25 26 27 28 29 36
Page 27 of 36