Sunday, March 8, 2026

ಸಂತಾಪ

ದಕ್ಷಿಣ ಕನ್ನಡಸಂತಾಪಸುದ್ದಿ

ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಹಲೋಕ ತ್ಯಜಿಸಿದ ಮಂಗಳೂರು ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷರು ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷ ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ (81) ಗುರುವಾರ(ಡಿ.15) ಬೆಳಗ್ಗೆ ಮಹಾಸಮಾಧಿ ಹೊಂದಿದರು. 81 ವರ್ಷ ವಯಸ್ಸಾಗಿದ್ದ ಸ್ವಾಮೀಜಿಯ ಹುಟ್ಟೂರು ಬಾಗಲಕೋಟೆ. ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಂದು ಬೆಳಗ್ಗೆ 6.15 ಕ್ಕೆ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದರು. ಶ್ರೀ ರಾಮಕೃಷ್ಣ- ವಿವೇಕಾನಂದರ ತತ್ವಾದರ್ಶಗಳಿಂದ ಪ್ರಭಾವಿತರಾದ ಸ್ವಾಮಿಜಿ 1969 ರಲ್ಲಿ ಭಾರತೀಯ ನೌಕಾ ಸೇನೆಯಿಂದ ನಿವೃತ್ತಿ ಪಡೆದು ಮುಂಬೈ ರಾಮಕೃಷ್ಣ ಮಠಕ್ಕೆ ಬ್ರಹ್ಮಚಾರಿಯಾಗಿ ಸೇರಿದರು. ರಾಮಕೃಷ್ಣ...
ಉಡುಪಿಸಂತಾಪ

‘ಕಲಾಕ್ಷೇತ್ರದ ಅಮೂಲ್ಯ ಕೊಂಡಿ ಕಳಚಿದೆ’ : ಶ್ರೀ ಕುಂಬ್ಳೆ ಸುಂದರ ರಾಯರ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – ಕಹಳೆ ನ್ಯೂಸ್

ಶ್ರೀ ಕುಂಬ್ಳೆ ಸುಂದರ ರಾಯರ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ಸೂಚಿಸಿದ್ದಾರೆ. ಅದ್ಭುತ ವಾಗ್ಮಿಗಳೂ, ಯಕ್ಷಗಾನ ಅರ್ಥಧಾರಿ, ಪಾತ್ರಧಾರಿಗಳಾಗಿ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದ ಕುಂಬ್ಳೆ ಸುಂದರ ರಾಯರ ನಿಧನದ ವಾರ್ತೆ ತಿಳಿದು ತೀರಾ ವಿಷಾದವಾಗಿದೆ. ರಾಮಾಯಣ ಮಹಾಭಾರತ ಪುರಾಣಗಳ ಬಗ್ಗೆ ಅಧ್ಯಯನಾತ್ಮಕ ವಿದ್ವತ್ತನ್ನು ಸಂಪಾದಿಸಿದ್ದ ಅವರು ಅದನ್ನು ಕಲೆಯ ಮೂಲಕ ಜನರಿಗೆ ತಲುಪಿಸಿದ್ದರು. ಇಂದು ಕಲಾಕ್ಷೇತ್ರದ ಅಮೂಲ್ಯ ಕೊಂಡಿಯೊಂದು ಕಳಚಿದಂತಾಗಿದೆ. ಶ್ರೀಮಠದೊಂದಿಗೆ ವಿಶೇಷ ಬಾಂಧವ್ಯ ಒಡನಾಟ ಹೊಂದಿದ್ದರು. ಶ್ರೀ ಕೃಷ್ಣಮಠದ...
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು, ನ 30 : ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ಅವರು ಅ. 30 ರ ಬುಧವಾರ ನಿಧನರಾಗಿದ್ದಾರೆ.ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದ ಇವರು, ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು.ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಂತಾಪಸುದ್ದಿ

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ – ಕಹಳೆ ನ್ಯೂಸ್

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇಹಲೋಕ ತ್ಯಜಿಸಿದ್ದಾರೆ. ಅವರ ಕೋಣಗಳು ಕಂಬಳದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಂಡು ಜನಪ್ರಿಯತೆ ಗಳಿಸಿತ್ತು....
ರಾಜಕೀಯರಾಷ್ಟ್ರೀಯಸಂತಾಪಸುದ್ದಿ

ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ನಿಧನ – ಕಹಳೆ ನ್ಯೂಸ್

ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ (Mulayam Singh Yadav) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ 82 ವರ್ಷದ ಮುಲಾಯಂ ಸಿಂಗ್‌ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. “ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್‌ ಅವರ ಆರೋಗ್ಯ ಇಂದು ಕ್ಷೀಣಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ...
ಕಾಸರಗೋಡುಮಂಜೇಶ್ವರಸಂತಾಪಸುದ್ದಿ

ಸರೋವರ ಕ್ಷೇತ್ರ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ – ಕಹಳೆ ನ್ಯೂಸ್

ಕಾಸರಗೋಡು : ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ "ದೇವರ ಮೊಸಳೆ" ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು...
ರಾಷ್ಟ್ರೀಯಸಂತಾಪಸುದ್ದಿ

ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯರು ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನಿಧನ – ಕಹಳೆ ನ್ಯೂಸ್

ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ(99) ಭಾನುವಾರ ನಿಧನರಾಗಿದ್ದಾರೆ. ಭೋಪಾಲ್: ಮಧ್ಯಪ್ರದೇಶದ ನರಸಿಂಗ್ಪುರದಲ್ಲಿ ದ್ವಾರಕಾ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ(99) ಭಾನುವಾರ ನಿಧನರಾಗಿದ್ದಾರೆ. ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಯೋಧ್ಯೆ ಭೂ ವಿವಾದ ಮತ್ತು ರಾಮ ಮಂದಿರಕ್ಕೆ ಸಂಬಂಧಿಸಿದಂತೆ 2 ದಿನದಲ್ಲಿ 2 ಹಿರಿಯ ಜೀವಿಗಳು ಮೃತಪಟ್ಟಿದ್ದಾರೆ. ಶತಾಯುಷಿ ಬಿಬಿ ಲಾಲ್ ಬಳಿಕ, 99 ವರ್ಷದ ಶಂಕರಾಚಾರ್ಯ ಸ್ವರೂಪಾನಂದ ಶ್ರೀ ಇಂದು...
ಅಂತಾರಾಷ್ಟ್ರೀಯಸಂತಾಪಸುದ್ದಿ

ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನ – ಕಹಳೆ ನ್ಯೂಸ್

ಲಂಡನ್‌: ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಅವರು ಬಳಲುತ್ತಿದ್ದರು, ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅಂತ ತಿಳಿದು ಬಂದಿದೆ. ರಾಣಿ ಇಂದು ಮಧ್ಯಾಹ್ನ ಬಾಲ್ಮೋರಲ್ನಲ್ಲಿ ನಿಧನರಾದರು ಅಂತ ಬಕಿಂಗ್ಹ್ಯಾಮ್ ಅರಮನೆ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ....
1 27 28 29 30 31 36
Page 29 of 36