ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಹಲೋಕ ತ್ಯಜಿಸಿದ ಮಂಗಳೂರು ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷರು ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ – ಕಹಳೆ ನ್ಯೂಸ್
ಮಂಗಳೂರು: ಇಲ್ಲಿನ ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷ ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ (81) ಗುರುವಾರ(ಡಿ.15) ಬೆಳಗ್ಗೆ ಮಹಾಸಮಾಧಿ ಹೊಂದಿದರು. 81 ವರ್ಷ ವಯಸ್ಸಾಗಿದ್ದ ಸ್ವಾಮೀಜಿಯ ಹುಟ್ಟೂರು ಬಾಗಲಕೋಟೆ. ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದೇ ಇಂದು ಬೆಳಗ್ಗೆ 6.15 ಕ್ಕೆ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದರು. ಶ್ರೀ ರಾಮಕೃಷ್ಣ- ವಿವೇಕಾನಂದರ ತತ್ವಾದರ್ಶಗಳಿಂದ ಪ್ರಭಾವಿತರಾದ ಸ್ವಾಮಿಜಿ 1969 ರಲ್ಲಿ ಭಾರತೀಯ ನೌಕಾ ಸೇನೆಯಿಂದ ನಿವೃತ್ತಿ ಪಡೆದು ಮುಂಬೈ ರಾಮಕೃಷ್ಣ ಮಠಕ್ಕೆ ಬ್ರಹ್ಮಚಾರಿಯಾಗಿ ಸೇರಿದರು. ರಾಮಕೃಷ್ಣ...







