Friday, March 6, 2026

ಸಂತಾಪ

ಬೆಂಗಳೂರುರಾಜ್ಯಸಂತಾಪಸುದ್ದಿ

ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ಪೆಗೆ ತಿಮ್ಮಕ್ಕ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಬಳಿ ಸಾಲುಮರಗಳನ್ನು ಬೆಳೆಸಿದ್ದರು. ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ಪೆಗೆ ತಿಮ್ಮಕ್ಕ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು...
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಕಾರುಗಳ ಮುಖಾಮುಖಿ ಡಿಕ್ಕಿ; ಇಬ್ಬರು ಮೃತ್ಯು, ಓರ್ವ ಗಂಭೀರ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನ.9ರ ರವಿವಾರ ತಾಲೂಕಿನ ಹಿರೇಗೌಜ‌ ಗ್ರಾಮದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದ ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ. ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಸಖರಾಯಪಟ್ಟಣ...
ಉಡುಪಿಸಂತಾಪಸಿನಿಮಾಸುದ್ದಿ

ಉಡುಪಿಯಲ್ಲಿ ಮಾಧ್ವ ಬ್ರಾಹ್ಮಣ ಸಾಂಪ್ರದಾಯದಂತೆ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ಅಂತ್ಯಕ್ರಿಯೆ- ಕಹಳೆ ನ್ಯೂಸ್

ಉಡುಪಿ : ಸ್ಯಾಂಡಲ್ವುಡ್ ಖಳನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ರಾಯ್ (55) ನಿಧಾನರಾದರು. ಇದೀಗ ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್ ರಾಯ್ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಹರೀಶ್ ಆಚಾರ್ಯ ಆಪ್ತರು, ಕುಟುಂಬದವರು ಭಾಗಿಯಾಗಿದ್ದರು. ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇತ್ತು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಕಳೆದ ಕೆಲ ದಿನಗಳ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗದಲ್ಲಿ ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ! -ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿ ವನಿಷಾ ನೇಣು ಬಿಗಿದುಕೊಂಡು...
ಸಂತಾಪಸುದ್ದಿ

ಹಿಂದೂಜಾ ಗ್ರೂಪ್‌ ಅಧ್ಯಕ್ಷ‌, ಬಿಲಿಯನೇರ್ ಗೋಪಿಚಂದ್‌ ಪಿ ಹಿಂದುಜಾ ವಿಧಿವಶ-ಕಹಳೆ ನ್ಯೂಸ್

ಲಂಡನ್‌ : ಹಿಂದುಜಾ ಗ್ರೂಪ್‌ ನ ಅಧ್ಯಕ್ಷ ಗೋಪಿಚಂದ್‌ ಪಿ. ಹಿಂದುಜಾ (85ವರ್ಷ) ಲಂಡನ್‌ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ನಾಲ್ವರು ಹಿಂದುಜಾ ಸಹೋದರರಲ್ಲಿ ಗೋಪಿಚಂದ್‌ ಅವರು ಎರಡನೇಯವರಾಗಿದ್ದಾರೆ. ಹಿರಿಯ ಸೋದರ ಶ್ರೀಚಂದ್‌ ಹಿಂದುಜಾ 2023ರಲ್ಲಿ ನಿಧನರಾಗಿದ್ದರು. ಇನ್ನಿಬ್ಬರು ಸಹೋದರರು ಪ್ರಕಾಶ್‌ ಹಿಂದುಜಾ ಮತ್ತು ಅಶೋಕ್‌ ಹಿಂದುಜಾ. ಉದ್ಯಮ ವಲಯದಲ್ಲಿ "ಜಿಪಿ" ಎಂದೇ ಖ್ಯಾತರಾಗಿದ್ದ ಗೋಪಿಚಂದ್‌ ಹಿಂದುಜಾ ಅವರು 1950ರಲ್ಲಿ ತಮ್ಮ ಕುಟುಂಬದ ಉದ್ಯಮಕ್ಕೆ ಪದಾರ್ಪಣೆಗೈದಿದ್ದರು. ಗೋಪಿಚಂದ್‌...
ಬೆಂಗಳೂರುರಾಜ್ಯಸಂತಾಪಸುದ್ದಿ

ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ : CM ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೆಚ್.ವೈ.ಮೇಟಿಯವರ ಪಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ....
ಬೆಂಗಳೂರುರಾಜ್ಯಸಂತಾಪಸುದ್ದಿ

ಸಾವು ತಂದ ಹೊಸ ಕಾರು, ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಡ್ಯಾನ್ಸರ್‌ ಸುಧೀಂದ್ರ -ಕಹಳೆ ನ್ಯೂಸ್

ನೆಲಮಂಗಲ - ನಿನ್ನೆಯಷ್ಟೇ ಖರೀದಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪೆಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಮೃತಪಟ್ಟ ಡ್ಯಾನ್ಸರ್‌. ಇವರು ನಿನ್ನೆಯಷ್ಟೇ ಹೊಸ ಕಾರನ್ನು ಖರೀದಿಸಿ ತ್ಯಾಮಗೊಂಡ್ಲುಗೆ ಹೋಗುತ್ತಿದ್ದಾಗ ರಸ್ತೆಯಲ್ಲಿ ಏಕಾಏಕಿ ಕಾರಿನ ಇಂಜಿನ್‌ ಆಫ್‌ ಆಗಿದೆ. ಕೂಡಲೇ ಕೆಳಗಿಳಿದು ಪರೀಕ್ಷಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಧೀಂದ್ರ ವಿವಿಧ ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್...
1 2 3 4 5 36
Page 3 of 36