Saturday, March 7, 2026

ಯಕ್ಷಗಾನ / ಕಲೆ

ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಶ್ರೀವತ್ಸ ದೇವರ ಸ್ತುತಿಯನ್ನು ಹಾಡಿದನು. ಈ ಕಾರ್ಯಕ್ರಮದ ಅಧ್ಯಕ್ಷರಾದ ಸುಜಿತ್ ಕುಮಾರ್ (ಮಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಮಾ ವಿಕಾಸ ಸಂಯೋಜಕರು) ಶ್ರೀರಾಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶ್ರೀರಾಮ ವಿದ್ಯಾ ಕೇಂದ್ರದ ಟ್ರಸ್ಟಿ ಇವರ ಮಾತಿನಲ್ಲಿ "ಯಕ್ಷಗಾನವು ಶಿಕ್ಷಣದ ಜೊತೆ ಇರುವಂತಹ ಒಂದು ಕಲೆ ಈ ಕಲೆಯನ್ನು...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ: ಮಥುರಾ ಹೋಟೆಲ್‌‌ನ ಜಯಕೃಷ್ಣ ಸಭಾಂಗಣದಲ್ಲಿ ನಡೆದ ಬೆಂಕಿ ರಹಿತ ಅಡುಗೆ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ– ಕಹಳೆ ನ್ಯೂಸ್

ಉಡುಪಿ: ಮಥುರಾ ಹೋಟೆಲ್‌‌ನ ಜಯಕೃಷ್ಣ ಸಭಾಂಗಣದಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ಮತ್ತು ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಉದ್ಯಮಿ ವಿಶ್ವನಾಥ್ ಶೆಣೈ ಉದ್ಘಾಟಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಡಗಬೆಟ್ಟು ಕ್ರೆಡಿಟ್ ಕೋ.ಅ. ಸೊಸೈಟಿಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ಮಾತನಾಡಿ ಇಂದಿನ ಕಾಲದಲ್ಲಿ ಆರೋಗ್ಯವೇ ಬಹುದೊಡ್ಡ ಸಂಪತ್ತು. ನಾವು ಹಿತಮಿತ ಆಹಾರ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ. ಅಡುಗೆ ಕೊಣೆಯಲ್ಲಿ ಬೆಂಕಿ ಇಲ್ಲದೆ ಆಹಾರ ತಯಾರಿಸಿ ಉತ್ತಮ ಆರೋಗ್ಯವಂತರಾಗಿ ಇರುವಂತೆ...
ಅಂಕಣದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಸೂಜಿ ಕಂಗಳ ಕುಡ್ಲದ ಕುವರಿ-ಸಾಧನೆಗೆ ಜೈ ಎನ್ನುತ್ತಿದ್ದಾರೆ ಎಲ್ಲರು ಶುಭಕೋರಿ : ಸಕಲಕಲಾವಲ್ಲಬೆ ತ್ರಿಶಾ ಶೆಟ್ಟಿ – ಕಹಳೆ ನ್ಯೂಸ್

ಬಂಟ್ವಾಳ : ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಶ್ರೀಮತಿ ಚಂಚಲಾ ಶೆಟ್ಟಿಯವರ ಏಕೈಕ ಪುತ್ರಿ ತ್ರಿಶಾ ಶೆಟ್ಟಿ. ತಮ್ಮ ಆರಂಭಿಕ ಶಾಲಾ ಶಿಕ್ಷಣವನ್ನು ಬಂಟ್ವಾಳದ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಮಾಡಿದ ತ್ರಿಶಾ ಪ್ರಸ್ತುತ ಪದವಿ ಶಿಕ್ಷಣವನ್ನು ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ (ಸ್ವಾಯತ್ತ) ಪಡೆಯುತ್ತಿದ್ದಾರೆ.  ಬಾಲ್ಯದಿಂದಲೇ ಭರತನಾಟ್ಯ, ಸಂಗೀತ ಹೀಗೆ ಕಲಾ ಸರಸ್ವತಿಯನ್ನು ಆರಾಧಿಸಿಕೊಂಡು ಬಂದಿರುವ ತ್ರಿಶಾ ಭರತನಾಟ್ಯ ,...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆದ “ಆಳ್ವಾಸ್ ಸಾಂಪ್ರದಾಯಿಕ ದಿನ- 2024” ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಓರ್ವ ಉತ್ತಮ ಶಿಕ್ಷಕ, ಎಂಜಿನಿಯರ್ ಅಥವಾ ಕಲಾವಿದನಾಗಿ ರೂಪುಗೊಳ್ಳುವಂತೆ ಆಳ್ವಾಸ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತಿರುವುದಲ್ಲದೆ ಓರ್ವ ಮನುಷ್ಯನಿಗೆ ಮನುಷ್ಯತ್ವದ ಗುಣವನ್ನು ಕಲಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ನಟ, ಕಲಾ ನಿರ್ದೇಶಕ ಅರುಣ್ ಸಾಗರ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕೃಷಿಸಿರಿ ವೇದಿಕೆಯಲ್ಲಿ ನಡೆದ "ಆಳ್ವಾಸ್ ಸಾಂಪ್ರದಾಯಿಕ ದಿನ- 2024" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಪಾಸ್ ಫೈಲ್...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವಾಮಂಜೂರಿನ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದ ದಶಮಾನ ಸಂಭ್ರಮದ ಪ್ರಯುಕ್ತ ನಡೆದ ಹವ್ಯಾಸಿ ಯಕ್ಷಗಾನ ಬಯಲಾಟ ಸ್ಪರ್ಧೆಯಲ್ಲಿ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದ ಉಡುಪಿಯ ನಾದೋನ್ಮಯ ಕ್ರಿಯೇಶನ್ಸ್ – ಕಹಳೆ ನ್ಯೂಸ್

ಮಂಗಳೂರು: ವಾಮಂಜೂರಿನ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದವರು ದಶಮಾನ ಸಂಭ್ರಮದ ಪ್ರಯುಕ್ತ ನಡೆದ ಹವ್ಯಾಸಿ ಯಕ್ಷಗಾನ ಬಯಲಾಟ ಸ್ಪರ್ಧೆಯು ಮೇ 12 ರಂದು ನಡೆಯಿತು. ಸ್ಪರ್ಧೆಯಲ್ಲಿ ಉಡುಪಿಯ ನಾದೋನ್ಮಯ ಕ್ರಿಯೇಶನ್ಸ್ ತಂಡವು ಖಳಕುಲೋದ್ಭವ ಮೇಘನಾದ ಪ್ರಸಂಗವನ್ನು ಪ್ರದರ್ಶಿಸಿ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪೋಷಕಪಾತ್ರದಲ್ಲಿ ಹನುಮಂತ (ಸುನಿಲ್ ಪಲ್ಲಮಜಲು )ಪ್ರಥಮ, ರಾಜವೇಷ -ಇಂದ್ರಜಿತು( ಪ್ರಜ್ವಲ್ ಶೆಟ್ಟಿ) ಪ್ರಥಮ, ಪುಂಡು ವೇಷ - ಲಕ್ಷ್ಮಣ (ಕೃ ತಿಕ್ ಶೆಟ್ಟಿ) ದ್ವಿತೀಯ,ಬಣ್ಣದ ವೇಷ...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸಿನಿಮಾಸುದ್ದಿ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ – ಕಹಳೆ ನ್ಯೂಸ್

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ ಸುಮಾರಿಗೆ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎನ್ನಲಾಗಿದೆ.   ನಾರಾಯಣ ಮಯ್ಯ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ -ಕಹಳೆ ನ್ಯೂಸ್

ಯಕ್ಷ ಶಾಂತಲಾ ಎಂದೇ ಜನಪ್ರಿಯರಾಗಿದ್ದ ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ ಪ್ರದಾನ ಎ.26ರಂದು ಉಪ್ಪಿನಂಗಡಿಯ ಪಾತಾಳದ ದುರ್ಗಾಗಿರಿ ಭಜನ ಮಂದಿರದಲ್ಲಿ ಸುಂಕದಕಟ್ಟೆ ಮೇಳದ ವೇದಿಕೆಯಲ್ಲಿ ನಡೆಯಲಿದೆ ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇದರ ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ. 91ರ ಹರಯದ ಪಾತಾಳ ವೆಂಕಟರಮಣ ಭಟ್ಟರು ಕಾಂಚನ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಯಕ್ಷಗಾನ / ಕಲೆರಾಜ್ಯಸುದ್ದಿ

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ...
1 4 5 6 7 8 14
Page 6 of 14