Saturday, March 7, 2026

ಯಕ್ಷಗಾನ / ಕಲೆ

ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಫೆ.06ರಂದು (ನಾಳೆ) ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡಬಿದಿರೆ ಸಹಯೋಗದೊಂದಿಗೆ ಫೆ.06ರಂದು ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯ ಕೃಷಿಸಿರಿ ವೇದಿಕೆ ಆವರಣದಲ್ಲಿ ಪ್ರಾಥಮಿಕ ಮತ್ತು ಪೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಧ್ರುವ - ಯಕ್ಷಶಿಕ್ಷಣ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಯಕ್ಷಗಾನ ಕಲೆಯಾಧಾರಿತ ರಾಜ್ಯ ಮಟ್ಟದ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ಚೌಕಿ ಪೂಜೆಯೊಂದಿಗೆ ಕಾರ್ಯಕ್ರಮ ಮೊದಲ್ಗೊಂಡು 9.00ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ....
ಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಯಕ್ಷಾಶ್ರಯ ಯೋಜನೆಯಡಿ ನಿರ್ಮಾಣಗೊಂಡ ನೂತನ ಮನೆ ಹಸ್ತಾಂತರ – ಕಹಳೆ ನ್ಯೂಸ್

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರ ಮಾಡಿದೆ . ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ...
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಶಿಕ್ಷಣಸುದ್ದಿ

ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಟಾ ವಿಭಾಗದಲ್ಲಿ ಕೌಶಿಕ್ ಗೆ ದ್ವೀತಿಯ ಸ್ಥಾನ – ಕಹಳೆ ನ್ಯೂಸ್

ಯಾಮೊಟೋ ಶೊಟೋಕಾನ್ ಕರಾಟೆ ಎಸೋಸಿಯೇಶನ್ ಟ್ರಸ್ಟ್ (ರಿ.) ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್, ರೋಟರಿ ಕ್ಲಬ್ ಬಂಟ್ವಾಳ ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ರೋಟರಿ ಕ್ಲಬ್ ಬಿಸಿರೋಡು ಸಿಟಿ ಬಿಸಿರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಆಯೋಜಿಸಿದ್ದ ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ ನ ಕಟಾ ವಿಭಾಗದಲ್ಲಿ ಕೌಶಿಕ್ ಜೆ.ಅವರು ದ್ವೀತಿಯ ಸ್ಥಾನವನ್ನು ಪಡೆದು ವಿಜೇತರಾಗಿದ್ದಾರೆ....
ಅಂತಾರಾಷ್ಟ್ರೀಯಯಕ್ಷಗಾನ / ಕಲೆಸುದ್ದಿ

ದುಬಾಯಿಯಲ್ಲಿ ತ್ರಿ-ರಂಗ ಮೋಹನ ಸುವರ್ಣ ಸಂಭ್ರಮ ; ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ; ಪಟ್ಲ, ನಿಹಾರಿಕಾ ಭಟ್, ವಿಂದ್ಯಾ ಆಚಾರ್ಯ ತಂಡಕ್ಕೆ ವಿಮಾನ ನಿಲ್ದಾಣದಲ್ಲಿ ಸ್ವಾಗತ – ಕಹಳೆ ನ್ಯೂಸ್

ದುಬಾಯಿ : ತ್ರಿರಂಗ ಸಂಗಮ ಮುಂಬಯಿ ಸಂಯೋಜನೆಯಲ್ಲಿ ದುಬಾಯಿ ಎಮಿರೇಟ್ಸ್ ಇಂಟರ್ ನ್ಯಾಷನಲ್ ಸ್ಕೂಲ್ ಥಿಯೇಟರ್ ನಲ್ಲಿ ಕರ್ನೂರು ಮೋಹನ್ ರೈ ಅವರ ಸಂಘಟನೆಯ ಗಲ್ಫ್ ರಾಷ್ಟ್ರದ 50ನೇ ಕಾರ್ಯಕ್ರಮ ತ್ರಿ-ರಂಗ ಮೋಹನ ಸುವರ್ಣ ಸಂಭ್ರಮ ಯಕ್ಷಗಾನ ನೃತ್ಯ ಹಾಸ್ಯ ಗಾಯನಗಳ ಅಪೂರ್ವ ಸಮ್ಮಿಲನ ಮನೋರಂಜನೆಯ ರಸದೌತಣ ಅ.08 ರಂದು ನಡೆಯಲಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಚೆಂಡೆ ಮದ್ದಳೆ...
ಉಡುಪಿಯಕ್ಷಗಾನ / ಕಲೆಸುದ್ದಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ “ಪೆÇಣ್ಣು ಪಿಲಿನಲಿಕೆ ಸ್ಪರ್ಧೆ” : ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ – ಕಹಳೆ ನ್ಯೂಸ್

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಂಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಉಚ್ಚಿಲದ ಅ.21ರಂದು ಶ್ರೀಮತಿ ಶಾಲಿನಿ ಡಾ| ಜಿ.ಶಂಕರ್ ಸಭಾಂಗಣದಲ್ಲಿ “ಪೆÇಣ್ಣು ಪಿಲಿ ನಲಿಕೆ ಸ್ಪರ್ಧೆ” ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹುಲಿ ಕುಣಿತದಲ್ಲಿ ಆಸಕ್ತಿ ತೋರುತ್ತಿದ್ದು, ತೆರೆಮರೆಯ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಈ...
ಯಕ್ಷಗಾನ / ಕಲೆಸುದ್ದಿ

ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆ.12ರಂದು 6ನೇ ವರ್ಷದ “ಭ್ರಾಮರೀ ಯಕ್ಷವೈಭವ-2023” – ಕಹಳೆ ನ್ಯೂಸ್

ಮಂಗಳೂರು : ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆ.12ರಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ - 2023 ನಡೆಯಲಿದೆ. ಹಿರಿಯ ಯಕ್ಷಗಾನ ವಿದ್ವಾಂಸ, ವಿಮರ್ಶಕ ಡಾ| ಎಂ ಪ್ರಭಾಕರ ಜೋಷಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಬರೋಡಾ ತುಳು ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‍ನ...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ರಂಗ ಸಂಗಮದಲ್ಲಿ ಆರು ನಾಟಕಗಳ ಯಶಸ್ವಿ ಪ್ರದರ್ಶನ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ರಂಗ ಸಂಗಮ ದಲ್ಲಿ ನಡೆದ ಆರು ನಾಟಕಗಳ ಆಯ್ದ ಭಾಗಗಳ ರಂಗ ದೃಶ್ಯಾವಳಿ ಯಶಸ್ವಿಯಾಗಿ ಪ್ರದರ್ಶನಗೊಂಡಿತು. ಎರಡು ಪಾಶ್ಚಾತ್ಯ ಒಂದು ಮಲೆಯಾಳಂ ಹಾಗೂ ಮೂರು ತುಳುನಾಟಕಗಳ ಆಯ್ದ ಭಾಗಗಳನ್ನು ಉಡುಪಿ ಜಿಲ್ಲೆಯ ವಿವಿಧ ತಂಡಗಳ ಕಲಾವಿದರು ಅಭಿನಯಿಸಿ ಪ್ರದರ್ಶಿಸಿದರು. ವಿಲಿಯಂ ಶೇಕ್ಸ್ಪಿಯರ್ ಬರೆದ “ಮ್ಯಾಕ್ ಬೆತ್” ನಾಟಕದಲ್ಲಿ ಪೂಜಾ ಪೂಜಾರಿ, ಪ್ರಥಮ್ ಶೆಟ್ಟಿ, ಶಶಿರಾಜ್ ಆಚಾರ್ಯ,...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ : ಲಿಂಗತ್ವ ಅಲ್ಪಸಂಖ್ಯಾತರ ಗೌರವ ಬದುಕಿಗೆ ಯಕ್ಷಗಾನದ ಕೌಶಲ್ಯ ತರಬೇತಿ – ಕಹಳೆ ನ್ಯೂಸ್

ಉಡುಪಿ : ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ, ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸಲು ಹಾಗೂ ಅತ್ಯುನ್ನತ ಸಾಧನೆ ಮಾಡಬಹುದಾಗಿದ್ದು, ಇದಕ್ಕೆ ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ...
1 6 7 8 9 10 14
Page 8 of 14