Friday, April 24, 2026

ರಾಜ್ಯ

ದೆಹಲಿರಾಜ್ಯಸುದ್ದಿ

ಯುದ್ಧದ ಎಫೆಕ್ಟ್‌ : ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು -ಕಹಳೆ ನ್ಯೂಸ್

ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನ ರದ್ದುಗೊಳಿಸಿರುವುದಾಗಿ ಹೇಳಿದೆ. ಪ್ರಕಟಣೆಯಲ್ಲಿ ಏನಿದೆ? ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು 19 ಕೆಜಿ ಮತ್ತು 47.5 ಕೆಜಿ...
ದೆಹಲಿರಾಜ್ಯಸುದ್ದಿ

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್‌ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್‌ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್...
ಬೆಂಗಳೂರುರಾಜ್ಯಸುದ್ದಿ

ಮಾ.3ಕ್ಕೆ ರಕ್ತಚಂದ್ರಗ್ರಹಣ : ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ – ಕಹಳೆ ನ್ಯೂಸ್

ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ. ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಆರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ...
ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಜಿಲ್ಲೆರಾಜ್ಯಸುದ್ದಿ

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ -ಕಹಳೆ ನ್ಯೂಸ್

ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ....
ಬೆಂಗಳೂರುರಾಜ್ಯಸುದ್ದಿ

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ : ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ – ಕಹಳೆ ನ್ಯೂಸ್

ಬೆಂಗಳೂರು: ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ಸಂಬಂಧ ಕನ್ನಡಿಗ ಚಂದನ್ ಮೃತದೇಹ ಸ್ವಗ್ರಾಮ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಆಗಮಿಸಿದ್ದು, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಕೊಲೆಯಾಗಿ ಒಂದು ವಾರದ ಬಳಿಕ ಸ್ವಗ್ರಾಮಕ್ಕೆ ಚಂದನ್ ಮೃತದೇಹ ಆಗಮಿಸಿದೆ. ಭಾನುವಾರ ರಾತ್ರಿ 11:49ರ ಸುಮಾರಿಗೆ ಚಂದನ್ ಮೃತದೇಹವನ್ನು ತ್ಯಾಮಗೊಂಡ್ಲುಗೆ ತರಲಾಗಿದ್ದು, ಮನೆ ಮುಂದೆ ಅಂತಿಮ ವಿಧಿವಿಧಾನದ ನಂತರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ತ್ಯಾಮಗೊಂಡ್ಲುವಿನ ಗ್ರಾಮೀಣ ಬ್ಯಾಂಕ್ ಹತ್ತಿರ ಅಂತಿಮ ದರ್ಶನಕ್ಕೆ ಸಿದ್ಧತೆ...
ದೆಹಲಿರಾಜ್ಯಸುದ್ದಿ

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ : ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ-ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ (ಫೆ.16) 5 ದಿನಗಳ ಕಾಲ ಎಐ ಇಂಪ್ಯಾಕ್ಟ್ ಶೃಂಗಸಭೆ ನಡೆಯಲಿದೆ. ವಿಶ್ವದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಯುಗದಲ್ಲಿ ಐಐ ಕುರಿತ ಮೊದಲ ಶೃಂಗ ಸಮ್ಮೇಳನ ಇದಾಗಿದೆ. ಎಐ ಕುರಿತು ಅರಿವು ಮೂಡಿಸುವ ಜೊತೆಗೆ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನ ಪ್ರಚುರಪಡಿಸುವ ಕಾರ್ಯ ಈ ಸಮ್ಮೇಳನದಲ್ಲಿ ಆಗಲಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ....
ಜಿಲ್ಲೆಮುಂಬೈರಾಜ್ಯಸುದ್ದಿ

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ :ಆಟೋ, ಕಾರು ಅಪ್ಪಚ್ಚಿ -ಕಹಳೆ ನ್ಯೂಸ್

ಮುಂಬೈ: ಮುಲುಂಡ್‌ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ನ ಒಂದು ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಶನಿವಾರ (ಇಂದು) ಮಧ್ಯಾಹ್ನ ಮುಲುಂಡ್‌ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಘಟನೆ ನಡೆದಿದೆ. ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬದ ಸಿಮೆಂಟ್ ಭಾಗವು ಏಕಾಏಕಿ ಕುಸಿದು ಕೆಳಗೆ ಹಾದುಹೋಗುತ್ತಿದ್ದ ಆಟೋರೀಕ್ಷಾ ಹಾಗೂ ಕಾರಿನ ಮೇಲೆ ಬಿದ್ದಿದೆ....
1 9 10 11 12 13 280
Page 11 of 280