Thursday, March 19, 2026

ರಾಜ್ಯ

ರಾಜ್ಯಸಂತಾಪಸುದ್ದಿಹುಬ್ಬಳ್ಳಿ

ಹುಬ್ಬಳ್ಳಿ ಕಲ್ಯಾಣ ನಗರದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರ ಕಲ್ಯಾಣ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರು (60 ವ) ಸೋಮವಾರ (ಸೆ.23) ಬೆಳಗ್ಗೆ 10 ಗಂಟೆಗೆ ಸುಮಾರಿಗೆ ರಾಮಕೃಷ್ಣ ಚರಣದಲ್ಲಿ ಲೀನರಾದರು. ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರ ಪಾರ್ಥಿವ ಶರೀರವನ್ನು ಭಕ್ತರ ದರ್ಶನಕ್ಕೆಂದು ಆಶ್ರಮದ ಆವರಣದಲ್ಲಿ ಇಡಲಾಗಿದೆ. ಈ ಸಂದರ್ಭದಲ್ಲಿ ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪರಮಪೂಜ್ಯ ವಿಜಯಾನಂದ ಸರಸ್ವತಿ, ಹುಬ್ಬಳ್ಳಿಯ ಸ್ವಾಮಿ ಬುದ್ಧಿಯೋಗಾನಂದಜಿ ಮಹಾರಾಜ, ತೇಜಸಾನಂದಜಿ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ – ಕಹಳೆ ನ್ಯೂಸ್

– ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಗೆ ಸ್ವಾಮೀಜಿ ಖಂಡನೆ ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರವಾಗಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆ, ಕಾರ್ಯಚಟುವಟಿಕೆ ನಡೆಯುತ್ತಿತ್ತು....
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸೆ.23 ರಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ; ಹವಾಮಾನ ಇಲಾಖೆ ವರದಿ ಏನು..?- ಕಹಳೆ ನ್ಯೂಸ್

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆ ಗಳಲ್ಲಿ ಪ್ರತ್ಯೇಕ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆ ಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆ...
ಉಡುಪಿಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ತಿರುಪತಿ ಲಡ್ಡು ವಿವಾದ ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ ; ಪೇಜಾವರ ಶ್ರೀ ಮಹತ್ವದ ಘೋಷಣೆ – ಕಹಳೆ ನ್ಯೂಸ್

– ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಅಯೋಧ್ಯೆ/ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕಲಬೆರಕೆ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಅಯೋಧ್ಯೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ  ಹೇಳಿದ್ದಾರೆ. ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡಕ್ಕೆ ಪಿಎಂಎಬಿಎ ಚ್‌ಐಎಂಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ ; ಸಂಸದ ಕ್ಯಾ. ಬ್ರಿಜೇಶ್‌ ಚೌಟ – ಕಹಳೆ ನ್ಯೂಸ್

ಮಂಗಳೂರು, .22 : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ದೇಸಿತನ ಛಿದ್ರಗೊಳಿಸಲು ದೊಡ್ಡಮಟ್ಟದ ಸಂಚು : ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪ – ಕಹಳೆ ನ್ಯೂಸ್

ಮಂಗಳೂರು: 'ವೈಯಕ್ತಿಕ ಸ್ವಾತಂತ್ರ್ಯ, ಭಾಷೆ, ದಲಿತ, ಬುಡಕಟ್ಟು ಸಮುದಾಯಗಳ ಹೆಸರಿನಲ್ಲಿ ಸಣ್ಣ ಪುಟ್ಟ ಚರ್ಚೆಗಳನ್ನು ಏರ್ಪಡಿಸಿ, ದೇಶ, ಸಂಸ್ಕೃತಿ, ಜೀವನ‌ ಪದ್ದತಿಗಳ ಕುರಿತು ದೊಡ್ಡ ಮಟ್ಟದ ನಕಾರಾತ್ಮಕ ಪ್ರಚಾರ ನಡೆಸಿ ದೇಸಿತನ ಛಿದ್ರಗೊಳಿಸಲು ಸಂಚು ರೂಪಿಸಲಾಗಿದೆ' ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪಿಸಿದರು.   ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯನ್ನು ಇಲ್ಲಿ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. 'ಕಮ್ಯುನಿಸ್ಟ್‌...
ಮೈಸೂರುರಾಜ್ಯಸುದ್ದಿ

ಮೈಸೂರು ದಸರಾ : ಅರಮನೆಯಲ್ಲಿ ಕಿತ್ತಾಡಿಕೊಂಡ ಆನೆಗಳು, ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು..! – ಕಹಳೆ ನ್ಯೂಸ್

ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ದಸರಾ ಆನೆಗಳು ಕೆಲ ಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು ಗಜಪಡೆಯ ಆನೆಗಳ ಕಿತ್ತಾಟದಿಂದ (Elephants Fight) ಪ್ರವಾಸಿಗರು ಆತಂಕಕ್ಕೆ ಒಳಗಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಒಂದಕೊಂದು ಕಿತ್ತಾಡಿಕೊಂಡು ಆನೆಗಳು ಚೆಲ್ಲಾಪಿಲ್ಲಿಯಾಗಿ ಓಡಾಡಿವೆ. ಅರಮನೆ ಅಂಗಳ ಬಿಟ್ಟು ಎರಡು ಆನೆಗಳು ರಸ್ತೆಗೆ ನುಗ್ಗಿವೆ. ಹೀಗಾಗಿ ಆನೆ ನಿಯಂತ್ರಿಸಲು ಸ್ವತಃ ಮಾವುತನೇ ವಿಫಲನಾಗಿ ಆನೆ ಬಿಟ್ಟು ಕೆಳಗೆ ಇಳಿದಿದ್ದಾನೆ. ಆಹಾರ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು – ಕಹಳೆ ನ್ಯೂಸ್

ಕರ್ನಾಟಕದಲ್ಲಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಣ ಜಟಾಪಟಿ ಜೋರಾಗಿದೆ. ಮುಡಾ ಹಗರಣದ ಪ್ರಾಸಿಕ್ಯೂಷನ್​​ ಅನುಮತಿಯಿಂದ ಆರಂಭವಾದ ಜಿದ್ದಾಜಿದ್ದಿ ಹಲವು ಆಯಾಮಗಳಿಗೆ ಹೊರಳಿದೆ. ಇದೀಗ ಮುಡಾ ಸಂಬಂಧ ಸಲ್ಲಿಕೆಯಾಗಿರುವ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರ ಕೋರಿದ್ದಾರೆ. ಬೆಂಗಳೂರು, ಸೆಪ್ಟೆಂಬರ್ 19: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ...
1 122 123 124 125 126 274
Page 124 of 274