Thursday, March 19, 2026

ರಾಜ್ಯ

ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ : ರಾಜ್ಯ ಸರಕಾರಕ್ಕೆ ಶರಣ್‌ ಪಂಪ್‌ವೆಲ್‌ – ಕಹಳೆ ನ್ಯೂಸ್

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ; ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ.   25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು....
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಕೇರಳದಲ್ಲಿ ನಿಫಾ ಆತಂಕ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾಕ್ಕೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ನಿಫಾ ವೈರಸ್‌ ಸೋಂಕಿಗೆ ಒಳಗಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಕ್ಕೆ ಅನೇಕ ಮಂದಿ ಆಗಮಿಸುತ್ತಿದ್ದು, ಅವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಸೂಚನೆ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಪುಂಜಾಲಕಟ್ಟೆಯಲ್ಲಿ ದೈವಗಳ ಕಾರಣಿಕದಿಂದ ತಪ್ಪಿದ ಅನಾಹುತ, ಉಳಿಯಿತು ನೂರಾರು ಜನರ ಪ್ರಾಣ ; ಕೆಸರು ಗದ್ದೆ ಕೂಟದ ಗದ್ದೆಗೆ ಬಿದ್ದ ವಿದ್ಯುತ್‌ಕಂಬ – ಕಹಳೆ ನ್ಯೂಸ್

ಪುಂಜಾಲಕಟ್ಟೆ, ಜು 24 : ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು...
ಉತ್ತರಕನ್ನಡರಾಜ್ಯಸುದ್ದಿ

ಶಿರೂರು ಗುಡ್ಡ ಕುಸಿತ : ನಾಪತ್ತೆಯಾದ ಅರ್ಜುನ್​ಗಾಗಿ ತೀವ್ರ ಶೋಧ! ಹುಡುಕಾಟಕ್ಕೆ ಮತ್ತೊಂದು ತಂಡ ಆಗಮನ – ಕಹಳೆ ನ್ಯೂಸ್

ಶಿರೂರು: ಹೆದ್ದಾರಿಯಲ್ಲಿ ಬದಿ ಲಾರಿಯನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಯುವಕ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿತ್ತು. ಕೇರಳ ಕೋಝಿಕ್ಕೋಡ್ ಮೂಲದ ಯುವಕ ಅರ್ಜುನ್ ​(30) ಲಾರಿ ಚಾಲಕನಾಗಿದ್ದು, ಜುಲೈ 16ರಂದು ಬೆಳಗಾವಿಯಿಂದ ಟ್ರಕ್‌ನಲ್ಲಿ ಸುಮಾರು 40 ಟನ್‌ಗಳಷ್ಟು ಮರ ತುಂಬಿಕೊಂಡು ಕೋಝಿಕ್ಕೋಡ್‌ ಮಾರ್ಗ ತೆರಳುತ್ತಿದ್ದರು. ಈ ದುರ್ಘಟನೆ ಸಂಭವಿಸಿದಾಗ ಆತ ಶಿರೂರು ಬಳಿ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಭೂಕುಸಿತವು ಹೆದ್ದಾರಿಯ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಕರುನಾಡಿನಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಅಲ್ಲದೇ ಮಹಾಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....
1 128 129 130 131 132 274
Page 130 of 274