ಕದ್ರಿ ದೇವಸ್ಥಾನಕ್ಕೆ ಮುಸ್ಲಿಂ ಜಿಹಾದಿಗಳ ಅಕ್ರಮ ಪ್ರವೇಶ ; ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಸಂಶಯ – ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ – ಕಹಳೆ ನ್ಯೂಸ್
ಮಂಗಳೂರು: ಮಂಗಳೂರಿನ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಜಿಹಾದಿಗಳು ಬಂದುದಲ್ಲದೆ ಸಂಶಯಾಸ್ಪದವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ...







