ಮೇ 3ರಂದು ಕರಾವಳಿಗೆ ಪ್ರಧಾನಿ, ಹೊಸ ಇತಿಹಾಸ ಸೃಷ್ಟಿಯಾಗಲಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ – ಕಹಳೆ ನ್ಯೂಸ್
ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇ ೩ರಂದು ಕರಾವಳಿಗೆ ಆಗಮಿಸಲಿದ್ದು, ಈ ಬಾರಿ ಅವರು ಪ್ರಧಾನ ಮಂತ್ರಿಯಾಗಿ ಮಾತ್ರವಲ್ಲ; ವಿಶ್ವದ ನಂ.1 ನಾಯಕರಾಗಿ ಬರುತ್ತಿದ್ದಾರೆ. ಹಿಂದಿನ ಅವರ ಭೇಟಿ ಸಂದರ್ಭದ ಎಲ್ಲ ದಾಖಲೆಗಳನ್ನು ಮೀರಿ ಸಮಾವೇಶ ಯಶಸ್ವಿಯಾಗಲಿದ್ದು, ಹೊಸ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದರು. ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ- ಉಡುಪಿ...







