Tuesday, March 17, 2026

ರಾಜ್ಯ

ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು. ದೇವಳದ ಸಮಿತಿಯವರು, ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು. ಬಳಿಕ ನಟ ಶಿವರಾಜ್ ಕುಮಾರ್ ಸಂಪುಟ ಶ್ರೀ ನರಸಿಂಹ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿ ಮಾಡಿದ ಡಾ| ಡಿ. ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಿದ ಹೆಗ್ಗಡೆ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ – 12 ಎಕ್ರೆ ಪ್ರದೇಶದಲ್ಲಿ ಕೃಷಿ ಮೇಳ ; ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಡಿ. 21ರಿಂದ 27ರ ವರೆಗೆ ನಡೆಯಲಿರುವ “ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ’ ವೇಳೆ 12 ಎಕ್ರೆ ಜಾಗದಲ್ಲಿ ಕೃಷಿ ಮೇಳ ನಡೆಸಲು ಸಕಲ ಸಿದ್ಧತೆಗಳಾಗುತ್ತಿದೆ ಎಂದು ಜಾಂಬೂರಿ ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಸ್ಕೌಟ್ಸ್‌ ಗೈಡ್ಸ್‌ ಮುಖ್ಯ ಆಯುಕ್ತ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹೆಸರಿನ ಆವರಣದಲ್ಲಿ 4 ಎಕರೆ ಜಾಗದಲ್ಲಿ 100 ಬಗೆಯ...
ದಕ್ಷಿಣ ಕನ್ನಡರಾಜ್ಯಸುದ್ದಿ

ಟಿಪ್ಪು ಆಳ್ವಿಕೆ ಸಂದರ್ಭ ಜಾರಿಗೆ ತಂದಿದ್ದ “ದೀವಟಿಗೆ ಸಲಾಂ’, “ಸಲಾಂ ಆರತಿ’, “ಸಲಾಂ ಮಂಗಳಾರತಿ’ ಕೈಬಿಡಲು ಇಲಾಖೆ ತೀರ್ಮಾನ – “ಮುಜರಾಯಿ’ ಪದ ಬಳಕೆಯೂ ಬೇಡ ; ಧಾರ್ಮಿಕ ಪರಿಷತ್‌ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್‌ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇಗುಲ ಗಳಲ್ಲಿ ಟಿಪ್ಪು ಆಳ್ವಿಕೆ ಸಂದರ್ಭ ಜಾರಿಗೆ ತಂದಿದ್ದ “ದೀವಟಿಗೆ ಸಲಾಂ’ ಎಂಬ ಪದವನ್ನು ಕೈಬಿಡಲು ಇಲಾಖೆ ತೀರ್ಮಾನಿಸಿದೆ. ಈ ಕುರಿತು ಈಗಾಗಲೇ ಧಾರ್ಮಿಕ ಪರಿಷತ್‌ ಅಂತಿಮ ನಿರ್ಣಯ ಕೈಗೊಂಡಿದ್ದು, “ಸಲಾಂ ಆರತಿ’ ಪದದ ಬದಲಾಗಿ “ಆರತಿ ನಮಸ್ಕಾರ’ ಹಾಗೂ “ಸಲಾಂ ಮಂಗಳಾ ರತಿ’ ಬದಲು “ಮಂಗಳಾರತಿ ನಮಸ್ಕಾರ’ ಎಂದು ಹೆಸರು ಬದಲಾಯಿಸಿ, ಸೇವೆಗಳನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ತೀರ್ಮಾನಿಸಿದೆ. ಈ ಬಗ್ಗೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪಿಜಿಯಲ್ಲಿರೋ ಹುಡುಗಿಯರೇ ಎಚ್ಚರ! ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್ ಮಾಡ್ತಿದ್ದ ಕಾಮುಕ ಅಂದರ್​ – ಕಹಳೆ ನ್ಯೂಸ್

ಬೆಂಗಳೂರು: ಪಿಜಿಯಲ್ಲಿ ವಾಸವಿರುವ ಹುಡುಗಿಯರೇ ಎಚ್ಚರ ಎಚ್ಚರ! ಸ್ನಾನಕ್ಕೆ ಹೋಗುವಾಗ ಒಮ್ಮೆ ಬಾತ್​ರೂಮ್ ಕಿಟಕಿ ಮುಚ್ಚಿದೆಯಾ ಅಂತಾ ಪರಿಶೀಲಿಸಿಕೊಳ್ಳಿ. ಕೊಂಚ ಎಚ್ಚರ ತಪ್ಪಿದರೂ ನಿಮ್ಮ ಖಾಸಗಿ ವಿಡಿಯೋಗಳು ರೆಕಾರ್ಡ್ ಆಗಿ, ಬ್ಲಾಕ್​ಮೇಲ್​ಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಬಹುದು. ಹೌದು, ಪಿಜಿಯ ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್​ ಮಾಡಿ, ಬೆದರಿಸಿ, ಲೈಂಗಿಕ ಬಯಕೆ ಪೂರೈಸುವಂತೆ ಬೇಡಿಕೆ ಇಡುತ್ತಿದ್ದ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿ, ಕಂಬಿ ಹಿಂದೆ...
ಆರೋಗ್ಯದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

2022- 23ನೇ ಸಾಲಿನಲ್ಲಿ ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಪಾರಂಪರಿಕ ವೈದ್ಯರ ಮಕ್ಕಳಿಗೆ ವಿಶೇಷ ಕೋಟಾದಲ್ಲಿ ಸರಕಾರಿ ಸೀಟು – ಕಹಳೆ ನ್ಯೂಸ್

ಮಂಗಳೂರು : 2022- 23ನೇ ಸಾಲಿನಲ್ಲಿ ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಪಾರಂಪರಿಕ ವೈದ್ಯರ ಮಕ್ಕಳಿಗೆ ವಿಶೇಷ ಪ್ರಕರಣದಡಿ ಸರಕಾರಿ ಕೋಟಾದಲ್ಲಿ 2 ಸೀಟುಗಳು ಲಭ್ಯವಿವೆ. ಅರ್ಹರು ಅರ್ಜಿ ಸಲ್ಲಿಸಬಹುದು. ಬಳ್ಳಾರಿಯ ತಾರಾನಾಥ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮೈಸೂರಿನ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗಳಲ್ಲಿ ಸರಕಾರಿ ಕೋಟಾದಡಿ ಸೀಟು ಮೀಸಲಿರಿಸಲಾಗಿದೆ. ಅರ್ಹರು ಡಿ. 17ರ ಸಂಜೆ 5.30 ರೊಳಗೆ ಬೆಂಗಳೂರಿನ ಧನ್ವಂತರಿ ರಸ್ತೆಯಲ್ಲಿರುವ...
ದಕ್ಷಿಣ ಕನ್ನಡರಾಜ್ಯಸುದ್ದಿ

ಪಂಪ್‌ವೆಲ್ ವೃತ್ತದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ; ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಆಕ್ಷೇಪ – ಕಹಳೆ ನ್ಯೂಸ್

ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್‌ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ (ಪಂಪ್‌ವೆಲ್ ವೃತ್ತ) ಶಿವಾಜಿ ಪ್ರತಿಮೆ ಸ್ಥಾಪಿಸುವ ಕಾರ್ಯಸೂಚಿಗೆ ಅನುಮೋದನೆ ನೀಡಿತ್ತು. ಮಂಗಳೂರು: ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ (Chhatrapati Shivaji statue) ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ...
ದಕ್ಷಿಣ ಕನ್ನಡರಾಜ್ಯಸುದ್ದಿ

ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ 9 “ಪಶು ಸಂಜೀವಿನಿ ತುರ್ತು ಚಿಕಿತ್ಸಾ ವಾಹನ’- ಕಹಳೆ ನ್ಯೂಸ್

ಮಂಗಳೂರು: ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರವು ಪ್ರತೀ ತಾಲೂಕುಗಳಿಗೆ “ಪಶು ಸಂಜೀವಿನಿ ತುರ್ತು ಚಿಕಿತ್ಸಾ ವಾಹನ’ವನ್ನು ನೀಡಲು ಯೋಜಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಈಗಾಗಲೇ 9 ವಾಹನಗಳು ಆಗಮಿಸಿವೆ. ಉಡುಪಿ ಜಿಲ್ಲೆಗೆ ಇನ್ನಷ್ಟೇ ಆಗಮಿಸಬೇಕಿವೆ. 108 ಆಯಂಬುಲೆನ್ಸ್‌ ಮಾದರಿಯಲ್ಲೇ ಈ ವಾಹನಗಳು ಕಾರ್ಯನಿರ್ವಹಿಸಲಿದ್ದು, 1962 ಸಂಖ್ಯೆಗೆ ಕರೆ ಮಾಡಿದಾಗ ತಾಲೂಕಿನ ವ್ಯಾಪ್ತಿಯಲ್ಲಿ ರೈತರ ಮನೆ ಬಾಗಿಲಿಗೇ ತೆರಳಿ ಚಿಕಿತ್ಸೆ ನೀಡಲಿವೆ. ಕೇಂದ್ರ ಪುರಸ್ಕೃತ ಯೋಜನೆ ಇದಾ ಗಿದ್ದು, ರಾಜ್ಯ ಪಶುಪಾಲನ ಮತ್ತು...
1 197 198 199 200 201 273
Page 199 of 273