Tuesday, March 17, 2026

ರಾಜ್ಯ

ಕ್ರೈಮ್ರಾಜ್ಯರಾಷ್ಟ್ರೀಯಸುದ್ದಿ

ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ – ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ! ; ಜಿಹಾದಿ ಅಫ್ತಾಬ್ ಅಮೀನ್ ಕರಾಳ ಮುಖ ಬಯಲು – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ತನ್ನ ಗೆಳೆಯನಿಂದ ಭೀಕರವಾಗಿ ಕೊಲೆಯಾಗಿದ್ದ ಶ್ರದ್ಧಾ ವಾಕರ್‌ಳ ಪರಿಸ್ಥಿತಿ ಬಗ್ಗೆ ಆಕೆಯ ಸ್ನೇಹಿತ (Friend) ತಿಳಿಸಿದ್ದಾನೆ. ಹೌದು.. ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನ ಕ್ರೂರತೆಯನ್ನು ಮೊದಲೇ ಶ್ರದ್ಧಾ(27) ತನ್ನ ಸ್ನೇಹಿತ ಲಕ್ಷ್ಮಣ್ ನಾಡಾರ್ ಜೊತೆ ಹೇಳಿಕೊಂಡಿದ್ದಳಂತೆ. ಈ ಬಗ್ಗೆ ಮಾತನಾಡಿರುವ ಲಕ್ಷ್ಮಣ್, ಶ್ರದ್ಧಾ ಹಾಗೂ ಅಫ್ತಾಬ್ ನಡುವೆ ಆಗಾಗ ಅನೇಕ ಜಗಳಗಳು ಹಾಗೂ ವಾದಗಳು ನಡೆಯುತ್ತಿದ್ದವು. ಒಮ್ಮೆ ಆಕೆ ನನ್ನನ್ನು ವಾಟ್ಸಪ್ ಮೂಲಕ ಸಂಪರ್ಕಿಸಿದ್ದಳು. ಅಷ್ಟೇ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ನಂದಿನಿ ಹಾಲು – ಮೊಸರಿನ ದರ ಏರಿಕೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​ ಹೇಳಿತ್ತು. ಆದರೆ ಈಗ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಕೆಎಂಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ತೀರ್ಮಾನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ದರ ಏರಿಕೆ ಬಗ್ಗೆ ಇಂದು ಸೇಡಂ ನಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ 'ಹಾಲು ದರ...
ದಕ್ಷಿಣ ಕನ್ನಡರಾಜ್ಯಸುದ್ದಿ

ನ.19 ರಂದು ಮಂಗಳೂರಿನಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ ; ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು: ಬ್ರಿಟಿಷರ ವಿರುದ್ಧ ರೈತ ಸೇನೆ ಕಟ್ಟಿ, ಸ್ಮರಣೀಯ ಹೋರಾಟ ನಡೆಸಿದ ಕೆದಂಬಾಡಿ ರಾಮಯ್ಯ ಗೌಡರ(Kedambadi Ramaiah Gowda) ಕಂಚಿನ ಪ್ರತಿಮೆ ನ.19ರ ಶನಿವಾರ ಮುಖ್ಯಮಂತ್ರಿಗಳಿಂದ ಅದ್ದೂರಿಯಾಗಿ ಲೋಕಾರ್ಪಣೆಯಾಗಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್(Vedavyas Kamath) ಅವರು ತಿಳಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ವೇದವ್ಯಾಸ ಕಾಮತ್ ಮಾತನಾಡಿದರು.  ಜನಸಾಮಾನ್ಯರ ಮತ್ತು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; NIAಯಿಂದ ಮತ್ತೊಬ್ಬ ಜಿಹಾದಿಯ ಬಂಧನ – SDPI ಮುಖಂಡ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ ಅಂದರ್ ಆದ ಕೊಲೆಪಾತಕಿ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ (NIA) ಬಂಧಿಸಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ಎನ್‌ಐಎ ತಂಡ ಬೆಂಗಳೂರಿಗೆ...
ರಾಜ್ಯಸುದ್ದಿ

ಕೇದಾರನಾಥದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಡೆಹ್ರಾಡೂನ್: ಉತ್ತರಾಖಂಡ (Uttarakhand) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಕೇದಾರನಾಥಕ್ಕೆ (Kedarnath) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥಕ್ಕೆ ಭೇಟಿ ನೀಡಿದ ಮೋದಿ ಕೆಲಕಾಲ ಪೂಜೆ ಸಲ್ಲಿಸಿದರು. ಬಳಿಕ ಬದರಿನಾಥಕ್ಕೆ (Badrinath) ತೆರಳಿದರು. ಮೋದಿ ಭೇಟಿ ಹಿನ್ನೆಲೆ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. ದೇವಸ್ಥಾನಗಳ ಭೇಟಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್‍ವೇ (Ropeway) ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ ಭೇಟಿ...
ರಾಜಕೀಯರಾಜ್ಯರಾಮನಗರಸುದ್ದಿ

ಕ್ರೈಸ್ತ ಧರ್ಮ ಪ್ರಚಾರ – ಡಿಕೆಶಿ ಸ್ವಕ್ಷೇತ್ರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ; ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಿಂದ ದೂರು ದಾಖಲು – ಕಹಳೆ ನ್ಯೂಸ್

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ಶರುವಾಗಿದ್ದು, ಧರ್ಮ ವಿವಾದದ ಬೆಂಕಿಗೆ ಪುನಃ ತುಪ್ಪ ಸುರಿದಂತಾಗಿದೆ. ಕಾಪಾಲ ಬೆಟ್ಟದದ ಏಸು ಕ್ರಿಸ್ತನ ಶಿಲಭೆ ವಿಚಾರದಲ್ಲಿ ಈ ಹಿಂದೆ ಧರ್ಮ ದಂಗಲ್​ ಏರ್ಪಟ್ಟಿತ್ತು. ಇದೀಗ ರೇಷನ್ ಕಾರ್ಡ್ ಹಿಂದೆ ಏಸುಕ್ರಿಸ್ತನ ಫೋಟೋ ಮುದ್ರಣ ಮೂಲಕ ಮತ್ತೆ ಧರ್ಮ ವಿವಾದ ಮುನ್ನೆಲೆಗೆ ಬಂದಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಏಸುಕ್ರಿಸ್ತನ ಫೋಟೋ ಇರುವ...
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ನಿಷೇಧಿತ ಪಿಎಫ್‍ಐ (PFI) ಸಂಘಟನೆಯಿಂದ ಅಯೋಧ್ಯೆ ರಾಮಮಂದಿರ ಧ್ವಂಸಕ್ಕೆ PFI ಸ್ಕೆಚ್ – 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಹುನ್ನಾರ ; ಭಯೋತ್ಪಾದಕ ನಿಗ್ರಹ ದಳದಿಂದ ಸ್ಫೋಟಕ ವಿಚಾರಗಳು ಬಯಲು – ಕಹಳೆ ನ್ಯೂಸ್

ಮುಂಬೈ: ನಿಷೇಧಿತ ಪಿಎಫ್‍ಐ (PFI) ಸಂಘಟನೆ ಕುರಿತಂತೆ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ. ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು (Ram Mandir) ಧ್ವಂಸ ಮಾಡಲು ಪಿಎಫ್‍ಐ ಷಡ್ಯಂತ್ರ ರೂಪಿಸಿತ್ತು ಎಂಬುದನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಬಹಿರಂಗಪಡಿಸಿದೆ. ರಾಮಮಂದಿರ ಧ್ವಂಸ ಮಾಡಿ ಅದರ ಜಾಗದಲ್ಲಿ ಬಾಬ್ರಿ ಮಸೀದಿ (Babri Masjid) ನಿರ್ಮಿಸಲು ಪಿಎಫ್‍ಐ ಪ್ಲಾನ್ ಮಾಡಿತ್ತು. ಅಷ್ಟೇ ಅಲ್ಲದೇ 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಅವರು...
ದಕ್ಷಿಣ ಕನ್ನಡರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಪ್ರಯತ್ನದ ಫಲ ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿ ಲೋಕಮಾನ್ಯ ತಿಲಕ್‌ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿ ಲೋಕಮಾನ್ಯ ತಿಲಕ್‌ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. ನಂ. 01185 ಲೋಕಮಾನ್ಯ ತಿಲಕ್‌ ಮುಂಬಯಿ-ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್‌ನಿಂದ ಅ.21 ಮತ್ತು 28 ಹಾಗೂ ನ. 4 ಮತ್ತು 11ರಂದು (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ. 01186 ಮಂಗಳೂರು ಜಂಕ್ಷನ್‌- ಲೋಕಮಾನ್ಯ ತಿಲಕ್‌ ಸಾಪ್ತಾಹಿಕ ವಿಶೇಷ ರೈಲು...
1 205 206 207 208 209 273
Page 207 of 273