Wednesday, March 11, 2026

ರಾಜ್ಯ

ದೆಹಲಿರಾಜ್ಯಸುದ್ದಿ

ಮೋದಿ ಜಿ, ನನಗೂ ಆಧಾರ್ ಕಾರ್ಡ್​ ಬೇಕು, ಭಾರತದಿಂದ ಹೊರಡುವಾಗ ಭಾವುಕನಾದ ವಿದೇಶಿ ಪ್ರವಾಸಿಗ – ಕಹಳೆ ನ್ಯೂಸ್

ನವದೆಹಲಿ, ಡಿಸೆಂಬರ್ 31: ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ಪ್ರವಾಸಿಗ  ನೊಬ್ಬ ಇಲ್ಲಿಂದ ಹೊರಡುವ ಸಮಯದಲ್ಲಿ ಭಾವುಕನಾಗಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಮೋದಿ ಜಿ ನನಗೂ ಆಧಾರ್ ಕಾರ್ಡ್​ ಬೇಕು ಎಂದು ಮನವಿ ಮಾಡಿದ್ದಾರೆ. ಈ ಭಾವನಾತ್ಮಕ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  ಭಾರತದಿಂದ ಹೊರಡುವ ಮೊದಲು, ಅವರು ದ್ವಿಚಕ್ರ ವಾಹನದ ಹಿಂಭಾಗದಲ್ಲಿ ಕುಳಿತು ಈ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ. ಅವರು ಈ ವೀಡಿಯೊದಲ್ಲಿ ಭಾರತವನ್ನು ಕಳೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ವೈವಿಧ್ಯಮಯ...
ರಾಜ್ಯರಾಷ್ಟ್ರೀಯಸುದ್ದಿ

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ – ಕಹಳೆ ನ್ಯೂಸ್

ಕೋಲ್ಕತಾ: ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಇಂದಿನ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸೇರಿದಂತೆ ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ...
ಬೆಂಗಳೂರುರಾಜ್ಯ

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಚಾರಣಕ್ಕೂ ಬ್ರೇಕ್‌-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೆಂಗಳೂರಿಗರ ಸ್ವರ್ಗ ಎಂದು ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಹೊಸ ವರ್ಷದ ಹಿನ್ನೆಲೆ ಸಂಭ್ರಮಾಚರಣೆಗಾಗಿ ಕೆಲವರು ಡಿಸೆಂಬರ್‌ 31ರಂದು ನಂದಿ ಗಿರಿಧಾಮದತ್ತ ಬರಲು ಪ್ಲ್ಯಾನ್‌ ಮಾಡಿಕೊಳ್ಳುತ್ತಾರೆ. ಆದರೆ ಪ್ರತಿ ವರ್ಷದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳು ನಡೆದಂತೆ ಎಚ್ಚರಿಕೆ ವಹಿಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದೆ. ನಂದಿ ಬೆಟ್ಟಕ್ಕೆ...
ರಾಜ್ಯಸುದ್ದಿ

ಹೊಸ ವರ್ಷಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಯ 24 ನೇ ಕಂತಿನ ಹಣ ಖಾತೆಗೆ ಜಮಾ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ. ಹೌದು, ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ 2000 ರೂ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಖಾತೆಗೆ ಹಣ ಬಂದಿದ್ಯೋ ಎಂಬುದು ಗೊತ್ತಿಲ್ಲ. ಆದರೆ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಈ ಹಿನ್ನೆಲೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ...
ರಾಜ್ಯಸುದ್ದಿ

‘ಹಾಸ್ಟೆಲ್’ ನಲ್ಲಿ ವಿದ್ಯಾರ್ಥಿನಿ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ವಾರ್ಡನ್ -ಕಹಳೆ ನ್ಯೂಸ್

ತೆಲಂಗಾಣ : ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯ ಎಸ್ಸಿ ಹಾಸ್ಟೆಲ್ನಲ್ಲಿ ವಾರ್ಡನ್ ಭವಾನಿ ವಿದ್ಯಾರ್ಥಿನಿಯೊಬ್ಬಳನ್ನು ಮನಬಂದಂತೆ ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿ ಸಂಘಗಳು ಪ್ರತಿಭಟಿಸಿವೆ. ಎಸ್ಸಿ ಬಾಲಕಿಯರ ಹಾಸ್ಟೆಲ್ನ ವಿದ್ಯಾರ್ಥಿನಿಯೊಬ್ಬಳನ್ನು ವಾರ್ಡನ್ ಥಳಿಸಿದ ಘಟನೆಯ ವಿಡಿಯೋ ವೈರಲ್ ಆಗಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲಾ ಕೇಂದ್ರದಲ್ಲಿರುವ ಎಸ್ಸಿ ಬಾಲಕಿಯರ ಹಾಸ್ಟೆಲ್ನಲ್ಲಿ ಪದವಿಯ ಮೂರನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿ ವಾರ್ಡನ್ ಭವಾನಿ ಆಕೆಯನ್ನು ಶಪಿಸಿ ಕೋಲು ಮತ್ತು ಕೈಗಳಿಂದ ಮನಬಂದಂತೆ...
ದೆಹಲಿರಾಜ್ಯಸುದ್ದಿ

 ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ 2025ರ ಭಾರತದ ಸಾಧನೆ, ಹೆಮ್ಮೆಯ ಕ್ಷಣಗಳ ಸ್ಮರಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ 129 ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡುತ್ತಾ 2025 ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡರು. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ ಪ್ರದರ್ಶನವಾಗಿ ಕಾರ್ಯನಿರ್ವಹಿಸಿತು. ಪಾಕಿಸ್ತಾನದ ದುಸ್ಸಾಹಸದ ವಿರುದ್ಧದ ಕಾರ್ಯಾಚರಣೆಯು ಭಾರತ ಭದ್ರತೆಯ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ವರ್ಷ,...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಬಸ್‌ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್‌ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್‌ ಬಾಟಲಿಗಳ ಬಾಕ್ಸ್‌ಗಳು ಇದ್ದ ಕಾರಣ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್‌ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಅದರಲ್ಲೂ ಕರ್ನೂಲ್‌ನಲ್ಲಿ ಖಾಸಗಿ ಬಸ್‌ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್,...
ಬೆಂಗಳೂರುರಾಜ್ಯಸುದ್ದಿ

ಇನ್ಮುಂದೆ ‘ನಮ್ಮ ಮೆಟ್ರೋ’ದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ಭಾರಿ ದಂಡ!-ಕಹಳೆ ನ್ಯೂಸ್

ಬೆಂಗಳೂರು : ನಗರದ ಬಹುತೇಕ ಪ್ರಯಾಣಿಕರ ಮೊದಲ ಆಯ್ಕೆ ಕೂಡ ಮೆಟ್ರೋ. ಆದರೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು, ರೂಲ್ಸ್‌ಗಳ ಕಡೆ ಹೆಚ್ಚು ಗಮನ ನೀಡದೆ, ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್‌ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್‌ಸಿಎಲ್‌ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ...
1 20 21 22 23 24 272
Page 22 of 272