Thursday, March 12, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಗನ್ ತೋರಿಸಿ ಯುವತಿ ಮೇಲೆ ಗ್ರಾ.ಪಂ. ಸದಸ್ಯನಿಂದ ರೇಪ್ ; ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿದ ಅಹಮದ್ ಪಾಷಾ –

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‍ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‍ಡೌನ್...
ಬೆಂಗಳೂರುರಾಜ್ಯಸುದ್ದಿ

ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಹೇಳಿಕೆ ; ದೂರು ಸಂಬಂಧ ಎಫ್‍ಐಆರ್, ನಟ ಚೇತನ್ ಪೊಲೀಸ್ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್

ಬೆಂಗಳೂರು: ಆ ದಿನಗಳು ಖ್ಯಾತಿಯ ನಟ ಚೇತನ್ ಇವತ್ತು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.   ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‍ಐಆರ್...
ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರದ ಪರವಾಗಿ ಹೈಕೋರ್ಟ್ ಗೆ ರಾಜಶೇಖರ ಹಿಲಿಯಾರು, ಪ್ರಿಯಾಂಕ ಶ್ಯಾಮ್ ಭಟ್, ಸಂಪಾಜೆ ಸೇರಿದಂತೆ ದಕ್ಷಿಣ ಕನ್ನಡ ಮೂಲದ 6 ಮಂದಿ ವಕೀಲರ ನೇಮಕ – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಪರವಾಗಿ ರಾಜ್ಯ ಹೈಕೋರ್ಟ್ ಗೆ ಹಿರಿಯ ವಕೀಲರು ಹಾಗೂ ವಕೀಲರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ 118 ವಕೀಲರ ಪೈಕಿ 2 ಮಂದಿ ದಕ್ಷಿಣ ಕನ್ನಡದವರು ಹಾಗೂ 16 ಮಂದಿ ಹಿರಿಯ ವಕೀಲರ ಪೈಕಿ 4 ಮಂದಿ ದಕ್ಷಿಣ ಕನ್ನಡ ಮೂಲಕದವರು. ಹೈಕೋರ್ಟಿನ ಪ್ರಸಿದ್ಧ ನ್ಯಾಯವಾದಿ ಎಸ್. ರಾಜಶೇಕರ್, ರಾಜೇಶ್ ರೈ., ಕೆ. ಅಪರಾಜಿತ ಅರಿಗ, ಪಿ. ಕರುಣಾಕರ ಅವರನ್ನು 2015ರಲ್ಲಿ ಕೇಂದ್ರ ಸರಕಾರದ ಪರವಾಗಿ...
ರಾಜ್ಯ

ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ನೀಡುವ ಪರಿಹಾರ 5 ಲಕ್ಷಕ್ಕೆ ಹೆಚ್ಚಿಸಿ – ಸಿದ್ದರಾಮಯ್ಯ-ಕಹಳೆ ನ್ಯೂಸ್

ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಐದುಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಒಂದು ಲಕ್ಷ ರೂ. ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೊರೊನಾ ಸಾಂಕ್ರಮಿಕ ರೋಗವನ್ನು...
ರಾಜ್ಯ

ಕೊರೋನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಓರ್ವ ವ್ಯಕ್ತಿಗೆ ₹1 ಲಕ್ಷ ಪರಿಹಾರ :ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ಕುಟುಂಬಕ್ಕೆ ಪರಿಹಾರ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಘೋಷಿಸಿದ್ದು, ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಓರ್ವ ಸದಸ್ಯ ಕೊರೋನಾದಿಂದ ಸಾವನ್ನಪ್ಪಿದರೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್​ ಕಾರ್ಡುದಾರರಿಗೆ ಈ ಯೋಜನೆ ಅನ್ವಯಿಸಲಿದೆ. ಒಂದು ಕುಟುಂಬದಲ್ಲಿ ಎಷ್ಟೇ ಮಂದಿ ಕೊರೊನಾದಿಂದ ಸತ್ತಿದ್ದರು ಒಬ್ಬರ ಸಾವಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ತಿಳಿಸಿದ್ದಾರೆ....
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ಉಡುಪಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

“ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ” ; ದಿಗ್ವಿಜಯ್ ಸಿಂಗ್ ಹೇಳಿಕೆ ದೇಶ ವಿರೋಧಿ ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ – ಕಹಳೆ ನ್ಯೂಸ್

ಉಡುಪಿ, ಜೂ. 13 : "ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ" ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.   ಪಾಕಿಸ್ತಾನ ಮೂಲದ ಪತ್ರಕರ್ತ ಶಹಜೇಬ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ನಾನು ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಗಮನ ಹರಿಸುವುತ್ತೇನೆ ಎಂದು ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಶೋಭಾ, "ಕಾಂಗ್ರೆಸ್ ಪಕ್ಷವು ತನ್ನ ಮಾನಸಿಕ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

‘ಪ್ರಾಯ ಆಗೋಗಿದೆ, ವಯಸ್ಸಾದ್ರಿಂದ ಏನೇನೋ ಬಡಬಡಿಸ್ತಾರೆ – ಅಧಿಕಾರಕ್ಕೆ ಬರಬೇಕಂತೆ ಆಸೆ ಪಾಪ.’ ; ದಿಗ್ವಿಜಯ ಸಿಂಗ್ ದೇಶ ವಿರೋಧಿ ಹೇಳಿಕೆ ಸಹಿಸಲಾಗದು ಕಿಡಿಕಾರಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ – ಕಹಳೆ ನ್ಯೂಸ್

ಬೆಂಗಳೂರು: ಕೆಲವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದರು. ಸಂಜಯನಗರದಲ್ಲಿ ಅಗತ್ಯವುಳ್ಖವರಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದ 370ನೇ ವಿಧಿ ರದ್ದು ಮರು ಪರಿಶೀಲನೆ ಕುರಿತು ಕಾಂಗ್ರೆಸ್ ನ ಹಿರಿಯ ಧುರೀಣ ದಿಗ್ವಿಜಯ ಸಿಂಗ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈಗಾಗಲೇ ಅನೇಕ ಚುನಾವಣೆಯಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಕೇರಳ,...
1 246 247 248 249 250 272
Page 248 of 272