Thursday, March 12, 2026

ರಾಜ್ಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ರಾಜ್ಯದ 6 ಜಿಲ್ಲೆಗಳಿಗೆ ‘ಜಿಲ್ಲಾ ಉಸ್ತುವಾರಿ ಸಚಿವ’ರ ನೇಮಕ ; ಸಚಿವ ಎಸ್ ಅಂಗಾರ ಸೇರಿದಂತೆ ಯಾವ ಸಚಿವರಿಗೆ ಯಾವ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಗೊತ್ತಾ.? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಬಾಕಿ ಇದ್ದಂತ ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಹಾಗಾದ್ರೇ.. ಯಾವ ಸಚಿವರಿಗೆ, ಯಾವ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆ ? ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ...
ಬೆಂಗಳೂರುರಾಜ್ಯಸುದ್ದಿ

Breaking News : ನಾಳೆಯಿಂದ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ; ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ : ರಾಜ್ಯ ಸರ್ಕಾರ ಹೊಸ ಆದೇಶದಲ್ಲೇನಿದೆ…!? – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ಜನಸಂದಣಿ ಮಾತ್ರ ಎಂದಿನಂತೆ ಕಾಣುತ್ತಿತ್ತು. ಈ ನಿಟ್ಟಿನಲ್ಲಿ ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯಂತೆ ನಾಳೆಯಿಂದ ಎಲ್ಲ ರೀತಿಯ ಸಂತೆಗಳು, ವಾರದ ಸಂತೆಗಳು ಬಂದ್ ಆಗಿರಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಿಗ್ಗೆ 6 ರಿಂದ 12ರ ವರೆಗೆ ತೆರೆದಿರಲಿವೆ. ಈ ಹಿಂದೆ ಈ ವ್ಯಾಪಾರಕ್ಕೆ ಬೆಳಿಗ್ಗೆ...
ಬೆಂಗಳೂರುರಾಜ್ಯಸುದ್ದಿ

Breaking News : ರಾಜ್ಯದಲ್ಲಿ ಇಂದು ( ಶುಕ್ರವಾರ ) ಬರೋಬ್ಬರಿ 48,296 ಮಂದಿಯಲ್ಲಿ ಕೊರೋನಾ ಪಾಸಿಟಿವ್ ; 217 ಮಂದಿ ಬಲಿ – ಕಹಳೆ ನ್ಯೂಸ್

ಬೆಂಗಳೂರು, ಏ. 30 : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ತೀವ್ರ ಹೆಚ್ಚಳವಾಗಿದ್ದು, ಶುಕ್ರವಾರದಂದು ಇದೇ ಮೊದಲ ಬಾರಿಗೆ ಎಂಬಂತೆ 48,296 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ತಲುಪಿದೆ.   ಇನ್ನು ರಾಜ್ಯದಲ್ಲಿ ಶುಕ್ರವಾರದಂದು 217 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ತಲುಪಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ....
ರಾಜ್ಯಸುದ್ದಿಹುಬ್ಬಳ್ಳಿ

ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಹುಬ್ಬಳ್ಳಿಯಲ್ಲಿ ಆರ್‌ಎಸ್‌ಎಸ್‌ನಿಂದ ಸ್ಥಾಪಿಸಲಾದ ಕೋವಿಡ್ ನೆರವು ಕೇಂದ್ರ ಉದ್ಘಾಟಿಸಿ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೆರಿಕ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೊನಾ ಸೋಂಕನ್ನು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋ ಸೃಷ್ಟಿ ; ಬಜರಂಗದಳದಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಬಂಟ್ವಾಳ, ಏ.28: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573  Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...
ಬೆಂಗಳೂರುರಾಜ್ಯಸುದ್ದಿ

Breaking News: ಕರ್ನಾಟಕದಲ್ಲಿ ಮೇ 4ರ ತನಕ ‘ನೈಟ್ ಕರ್ಫ್ಯೂ’ ಹಾಗೂ ‘ವೀಕ್‌ ಎಂಡ್‌ ಕರ್ಫ್ಯೂ’, ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫೂ ಹಾಗೂ 'ವೀಕ್‌ ಎಂಡ್‌ ಕರ್ಫ್ಯೂ' ಜಾರಿ ಗೊಳಿಸಲಾಗಿದೆ ನಾಳೆಯಿಂದ ಮೇ 4ರ ತನಕ 'ವೀಕ್‌ ಎಂಡ್‌ ಕರ್ಫ್ಯೂ' ಜಾರಿಗೊಳಿಸಲಾಗುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೆಲವೇ ಗಂಟೆಗಳ ಹಿಂದೆ ಮುಕ್ತಾಯವಾದ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಕರೋನ ಸ್ಥಿತಿಗತಿಗಳ ಬಗ್ಗೆ ಸಚಿವರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರು ಭಾಗವಹಿಸಿದ್ದರು ಈ ವೇಳೆಯಲ್ಲಿ ಎಲ್ಲರ ಒಮ್ಮತದ ತೀರ್ಮಾನದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಭೀತಿ ; ಮದ್ಯದಂಗಡಿಗಳಲ್ಲಿ ಎಣ್ಣೆಗಾಗಿ ಮುಗಿಬಿದ್ದ ಜನ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಮದ್ಯದಂಗಡಿಗಳಲ್ಲಿ ಮದ್ಯ ಪ್ರಿಯರು ಎಣ್ಣೆಗಾಗಿ ಮುಗಿಬಿದ್ದಿದ್ದಾರೆ. ಹೌದು, ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಬಹುದೆಂದು ಕಾರಣಕ್ಕೆ ಮದ್ಯದಂಗಡಿಯ ಎದುರು ಜನ ಮುಗಿಬಿದ್ದಿದ್ದಾರೆ. ಈ ಹಿಂದೆ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮದ್ಯಸಿಗದೆ ಮದ್ಯಪ್ರಿಯರು ಪರದಾಡುವಂತಾಗಿತ್ತು. ಆದ್ದರಿಂದ ಜನರು ಮುನ್ನೆಚ್ಚರಿಕೆಯಾಗಿ ಬಾರ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಣ್ಣೆಗಾಗಿ ಜನರು ಮುಗಿಬಿದ್ದಿದ್ದಾರೆ. ಸರ್ಕಾರ ಸರ್ವಪಕ್ಷ ಸಭೆ ಕರೆದು...
1 251 252 253 254 255 272
Page 253 of 272