ಯಡಿಯೂರಪ್ಪ ನಂತರ ರಾಜ್ಯ ಬಿಜೆಪಿ ನಾಯಕತ್ವ ಯಾರಿಗೆ? ನಳಿನ್ ಕುಮಾರ್ ಕಟೀಲ್ ಏನಾಂತರೆ!- ಕಹಳೆ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಂತರ ರಾಜ್ಯದಲ್ಲಿ ಯಾರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಪಕ್ಷ ನಿರ್ಧರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮದು ವಿಭಿನ್ನ ಪಕ್ಷ, ನಮ್ಮ ನಾಯಕರು ಸುವ್ಯವಸ್ಥಿತವಾಗಿ ಬೆಳೆದಿರುತ್ತಾರೆ ಎಂದು ಸ್ಪಷ್ಟಪಡಿಸಿದ ನಳಿನ್ ಕುಮಾರ್ ಕಟೀಲ್, ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಮ್ಮ ನಾಯಕರು, ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ನಾಯಕರು. ಮುಂದೆ ಯಾರು ನಾಯಕತ್ವ ವಹಿಸಬೇಕು ಎಂಬ ಸಂದರ್ಭ ಬಂದಾಗ ಪಕ್ಷ...







