Wednesday, June 10, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯ

ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ; ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ. ಎಲ್ಲ ರಾಜ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.? – ಕಹಳೆ ನ್ಯೂಸ್

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಿರುವ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದರೆ ಲಾಕ್‌ಡೌನ್‌ ವಿಧಿಸುವ ಅಗತ್ಯ ಬೀಳುತ್ತಿರಲಿಲ್ಲ. ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗಿದೆ. ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಗೆಲುವು ; ಮಹಿಳೆಗೆ ಗೆಲುವು ಇದೇ ಮೊದಲು – ಕಹಳೆ ನ್ಯೂಸ್

  ಬೆಳಗಾವಿ: ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯೊಬ್ಬರು ಇಲ್ಲಿ ವಿಜಯಿಯಾದ ಇತಿಹಾಸ ನಿರ್ಮಾಣವಾಗಿದೆ. ಪ್ರಥಮ ಪ್ರಯತ್ನದಲ್ಲೇ ಅವರು ಲೋಕಸಭೆ ಪ್ರವೇಶಿಸಿರುವುದು ಮತ್ತೊಂದು ವಿಶೇಷ. ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಅವರು ತೀವ್ರ ಪೈಪೋಟಿ ನೀಡಿದ್ದರಿಂದಾಗಿ, ಆಡಳಿತ ಪಕ್ಷದ ಅಭ್ಯರ್ಥಿ ಮಂಗಲಾಗೆ ಗೆಲುವು ಸುಲಭದ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ರಾಜ್ಯದ 6 ಜಿಲ್ಲೆಗಳಿಗೆ ‘ಜಿಲ್ಲಾ ಉಸ್ತುವಾರಿ ಸಚಿವ’ರ ನೇಮಕ ; ಸಚಿವ ಎಸ್ ಅಂಗಾರ ಸೇರಿದಂತೆ ಯಾವ ಸಚಿವರಿಗೆ ಯಾವ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಗೊತ್ತಾ.? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಬಾಕಿ ಇದ್ದಂತ ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಹಾಗಾದ್ರೇ.. ಯಾವ ಸಚಿವರಿಗೆ, ಯಾವ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆ ? ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ...
ಬೆಂಗಳೂರುರಾಜ್ಯಸುದ್ದಿ

Breaking News : ನಾಳೆಯಿಂದ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ; ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ : ರಾಜ್ಯ ಸರ್ಕಾರ ಹೊಸ ಆದೇಶದಲ್ಲೇನಿದೆ…!? – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ಜನಸಂದಣಿ ಮಾತ್ರ ಎಂದಿನಂತೆ ಕಾಣುತ್ತಿತ್ತು. ಈ ನಿಟ್ಟಿನಲ್ಲಿ ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯಂತೆ ನಾಳೆಯಿಂದ ಎಲ್ಲ ರೀತಿಯ ಸಂತೆಗಳು, ವಾರದ ಸಂತೆಗಳು ಬಂದ್ ಆಗಿರಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಿಗ್ಗೆ 6 ರಿಂದ 12ರ ವರೆಗೆ ತೆರೆದಿರಲಿವೆ. ಈ ಹಿಂದೆ ಈ ವ್ಯಾಪಾರಕ್ಕೆ ಬೆಳಿಗ್ಗೆ...
ಬೆಂಗಳೂರುರಾಜ್ಯಸುದ್ದಿ

Breaking News : ರಾಜ್ಯದಲ್ಲಿ ಇಂದು ( ಶುಕ್ರವಾರ ) ಬರೋಬ್ಬರಿ 48,296 ಮಂದಿಯಲ್ಲಿ ಕೊರೋನಾ ಪಾಸಿಟಿವ್ ; 217 ಮಂದಿ ಬಲಿ – ಕಹಳೆ ನ್ಯೂಸ್

ಬೆಂಗಳೂರು, ಏ. 30 : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ತೀವ್ರ ಹೆಚ್ಚಳವಾಗಿದ್ದು, ಶುಕ್ರವಾರದಂದು ಇದೇ ಮೊದಲ ಬಾರಿಗೆ ಎಂಬಂತೆ 48,296 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ತಲುಪಿದೆ.   ಇನ್ನು ರಾಜ್ಯದಲ್ಲಿ ಶುಕ್ರವಾರದಂದು 217 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ತಲುಪಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ....
ರಾಜ್ಯಸುದ್ದಿಹುಬ್ಬಳ್ಳಿ

ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಹುಬ್ಬಳ್ಳಿಯಲ್ಲಿ ಆರ್‌ಎಸ್‌ಎಸ್‌ನಿಂದ ಸ್ಥಾಪಿಸಲಾದ ಕೋವಿಡ್ ನೆರವು ಕೇಂದ್ರ ಉದ್ಘಾಟಿಸಿ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೆರಿಕ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೊನಾ ಸೋಂಕನ್ನು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋ ಸೃಷ್ಟಿ ; ಬಜರಂಗದಳದಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಬಂಟ್ವಾಳ, ಏ.28: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ....
1 276 277 278 279 280 297
Page 278 of 297