Tuesday, June 9, 2026

ರಾಜ್ಯ

ಕೊಡಗುರಾಜ್ಯಸುದ್ದಿ

ಬ್ರಹ್ಮಗಿರಿ ಬೆಟ್ಟ ಕುಸಿದು ಇಂದಿಗೆ ಆರು ದಿನ – ಆಸ್ಟ್ರೇಲಿಯಾದಿಂದ ಬಂದ ಮಕ್ಕಳ ಆಕ್ರಂದನ ; ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ – ಕಹಳೆ ನ್ಯೂಸ್

ಮಡಿಕೇರಿ: ಕೊಡಗಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿದು ಆರು ದಿನಗಳಾಗಿವೆ. ದುರಂತದಲ್ಲಿ ಐವರು ಭೂ ಸಮಾಧಿಯಾಗಿದ್ದಾರೆ. ಇದುವರೆಗೂ ಒಂದು ಮೃತ ದೇಹ ಮಾತ್ರ ಪತ್ತೆಯಾಗಿದೆ. ಇಂದು ಕೂಡ ಮೃತದೇಹ ಹುಡುಕುವ ಕಾರ್ಯಾಚರಣೆ ಮುಂದುವರಿಯಲಿದೆ. ಕೊಡಗಿನಲ್ಲಿ ಸುರಿದ ಭಾರೀ ಮಳೆ ಪರಿಣಾಮ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಕುಸಿದಿತ್ತು. ಪರಿಣಾಮ ಬೆಟ್ಟದಲ್ಲಿ ಮನೆ ಕೊಂಡಿದ್ದ ಅರ್ಚಕ ನಾರಾಯಣ್ ಆಚಾರ್ ಅವರ ಮನೆಯೂ ಈ ಬೆಟ್ಟದ ಮಣ್ಣಿನಲ್ಲಿ ಮುಚ್ಚಿ ಹೋಗಿ ಮನೆಯಲ್ಲಿದ್ದ ಅರ್ಚಕರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೋನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು : ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಿಎಂ ಯಡಿಯೂರಪ್ಪ ಗುಣಮುಖರಾದಂತ ಹಿನ್ನಲೆಯಲ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೊರೋನಾವನ್ನು ಗೆದ್ದು ಬಂದಿದ್ದಾರೆ. ಕೊರೋನಾದಿಂದ ಗುಣಮುಖರಾದಂತ ಮುಖ್ಯಮಂತ್ರಿ ಬಿಎಸ್...
ರಾಜ್ಯ

ರಾಜ್ಯದಲ್ಲಿ ಭಾರಿ ಮಳೆ -ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ-ಕಹಳೆ ನ್ಯೂಸ್

ಕರಾವಳಿ ಹಾಗು ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇದು ಆ.13ರವರೆಗೂ ಮುಂದುವರೆಯಲಿದೆ ಎನ್ನಲಾಗಿದೆ. ಆಗಸ್ಟ್ 11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗು ಆಗಸ್ಟ್ 12 ಮತ್ತು 13ರಂದು ಕಡಿಮೆ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ಬೆಂಗಳೂರುರಾಜ್ಯಸುದ್ದಿ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು, ಆ 09 : ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಕೊರೊನಾ ದೃಢಪಟ್ಟಿರುವ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ...
ರಾಜಕೀಯರಾಜ್ಯಸುದ್ದಿ

ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡ್ತೀವಿ, ತಾಕತ್ತಿದ್ದರೆ ಬಂಧಿಸಿ : ಸಿಎಂ ಬಿಎಸ್‌ವೈಗೆ ಮುತಾಲಿಕ್ ಓಪನ್ ಚಾಲೆಂಜ್..! – ಕಹಳೆ ನ್ಯೂಸ್

ವಿಜಯಪುರ: ಸಾರ್ವಜನಿಕ‌ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ. ಆದ್ರೆ, ನಾವು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಓಪನ್‌ ಚಾಲೆಂಜ್ ಮಾಡಿದ್ದಾರೆ. ಗಣೇಶ ಹಬ್ಬಕ್ಕೆ ಸರ್ಕಾರ ಸಾಕಷ್ಟು ಮಾರ್ಗಸೂಚಿಗಳನ್ನು ನೀಡಿದ್ದು, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು, ಸಾರ್ವಜನಿಕ‌ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ ಎಂದು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ರಾಜ್ಯಶಿಕ್ಷಣ

Breaking News : ಆ.10ರಂದು SSLC ಫಲಿತಾಂಶ ಪ್ರಕಟ ; ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ರಾಜ್ಯದ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಆಗಸ್ಟ್ 10ರಂದು ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ...
1 290 291 292 293 294 297
Page 292 of 297