Monday, June 15, 2026

ರಾಜ್ಯ

ದೆಹಲಿರಾಜ್ಯಸುದ್ದಿ

ಹಠಾತ್ ಬಿರುಗಾಳಿ ಸಹಿತ ಮಳೆ : ದೆಹಲಿ ಏರ್‌ಪೋರ್ಟ್‌ನಲ್ಲಿ 3 ಏರ್ ಇಂಡಿಯಾ ವಿಮಾನಗಳು ಜಖಂ -ಕಹಳೆ ನ್ಯೂಸ್

ನವದೆಹಲಿ: ಹಠಾತ್ ಬಿರುಗಾಳಿ ಸಹಿತ ಭಾರೀ ಮಳೆಗೆ ದೆಹಲಿಯ  ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಮೂರು ಏರ್ ಇಂಡಿಯಾ ವಿಮಾನಗಳು ಜಖಂಗೊಂಡಿವೆ. ಬಿರುಗಾಳಿಗೆ ಸಿಕ್ಕಿ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಜಖಂಗೊಂಡಿವೆ. ಭಾನುವಾರ (ಜೂ.7) ಸಂಜೆ 4:40ರ ಸುಮಾರಿಗೆ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ...
ರಾಜ್ಯಸುದ್ದಿ

ಕದನ ವಿರಾಮದ ಬಳಿಕ ಫಸ್ಟ್‌ ಟೈಮ್‌ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ – ಕಹಳೆ ನ್ಯೂಸ್

ಟೆಲ್‌ ಅವಿವ್‌/ಜೆರುಸಲೇಂ: ಏಪ್ರಿಲ್‌ನಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಅಮೆರಿಕದ (America) ವಿನಂತಿಗಳನ್ನ ಧಿಕ್ಕರಿಸುತ್ತಲೇ ಬಂದ ಇರಾನ್‌ ಯಾವುದೇ ಎಚ್ಚರಿಕೆಯಿಲ್ಲದೇ ಇಸ್ರೇಲ್‌ನ ಬೈರೂತ್‌ನ ದಕ್ಷಿಣ ಉಪನಗರಗಳನ್ನ ಗುರಿಯಾಗಿಸಿ ಇರಾನ್‌ ಮಿಸೈಲ್‌ ದಾಳಿ ನಡೆಸಿದೆ. ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿರುವಂತೆಯೇ ಪಶ್ಚಿಮ ಏಷ್ಯಾದಲ್ಲಿ (West Asia) ಮತ್ತೆ ಸಂಘರ್ಷ...
ದೆಹಲಿರಾಜ್ಯಸುದ್ದಿ

ದೆಹಲಿ ರೆಸ್ಟೋರೆಂಟ್‌ನಲ್ಲಿ ಅಗ್ನಿ ದುರಂತ : ಮತ್ತೊಬ್ಬ ಆರೋಪಿ ಬಂಧನ -ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಪೊಲೀಸರು  ಬಂಧಿಸಿದ್ದಾರೆ. ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ದಿಲ್ಶಾದ್ ಗಾರ್ಡನ್ ನಿವಾಸಿ ಕೇಶವ್ ನೇಗಿ (65) ಬಂಧಿತ ಆರೋಪಿ. ಈ ಅಗ್ನಿ ದುರಂತಕ್ಕೆ ಹೋಟೆಲ್‌ನ ಅಡುಗೆಯವರ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದ್ದರಿಂದ ಅಡುಗೆ ಕೆಲಸಗಾರನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏನಾಗಿತ್ತು ಆ ದಿನ? ಇದೇ ತಿಂಗಳ...
ದೆಹಲಿರಾಜ್ಯಸುದ್ದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ -ಕಹಳೆ ನ್ಯೂಸ್

ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ  ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್  ಅವರನ್ನು ಭೇಟಿಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ...
ರಾಜ್ಯಸುದ್ದಿ

ನಾರ್ವೆ ಚೆಸ್‌ 2026ʼ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ -ಕಹಳೆ ನ್ಯೂಸ್

ಓಸ್ಕೊ: ನಾರ್ವೆ ಚೆಸ್-2026 ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆರ್.‌ ಪ್ರಜ್ಞಾನಂದ  ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈ ಮೂಲದ 20 ವರ್ಷದ ಆರ್. ಪ್ರಜ್ಞಾನಂದ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಂತಿಮ ಸುತ್ತಿನಲ್ಲಿ ಜಯ ದಾಖಲಿಸಿದ್ದಾರೆ. ಈ ಮೂಲಕ ಪ್ರತಿಷ್ಠಿತ ʻನಾರ್ವೆ ಚೆಸ್ʼ (Norway Chess 2026) ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಅವರು,...
ಬೆಂಗಳೂರುರಾಜ್ಯಸುದ್ದಿ

ರಾಜ್ಯಸಭಾ ಚುನಾವಣೆ : ನಾಮಪತ್ರ ಸಲ್ಲಿಸಿದ ಖರ್ಗೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ  ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಉಪಸ್ಥಿತರಿದ್ದರು....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ಪರೋಕ್ಷವಾಗಿ ಖಾತೆ ಬಿಟ್ಟುಕೊಡಲ್ಲ ಎಂದ ಕೃಷ್ಣಬೈರೇಗೌಡ -ಕಹಳೆ ನ್ಯೂಸ್

ಬೆಂಗಳೂರು: ಸಚಿವ ಸಂಪುಟ ಪುನರ್‌ರಚನೆ ಬಳಿಕ ಬೆಂಗಳೂರು ಅಭಿವೃದ್ಧಿ ಖಾತೆ ಪಡೆದಿರುವ ಸಚಿವ ಕೃಷ್ಣ ಬೈರೇಗೌಡ  ಈ ಜವಾಬ್ದಾರಿ ಸುಲಭವಾಗಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನ ಜನರ ಜೀವನಮಟ್ಟ ಸುಧಾರಿಸುವುದೇ ತಮ್ಮ ಮೊದಲ ಗುರಿ ಎಂದು ತಿಳಿಸಿದ್ದಾರೆ. ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ತಾವು ಕಂದಾಯ ಇಲಾಖೆಯಲ್ಲಿ ಆರಂಭಿಸಿರುವ ಕೆಲಸಗಳನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದೆ. ಆದರೆ ಪಕ್ಷದ ನಾಯಕತ್ವ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿದೆ ಎಂದು ಹೇಳಿದರು....
ಬೆಂಗಳೂರುರಾಜ್ಯಸುದ್ದಿ

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕುಂಬಳಗೋಡು ವ್ಯಾಪ್ತಿಯಲ್ಲಿ ನಡೆದಿದೆ. ಜ್ಯೋತಿ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ. ಜ್ಯೋತಿಗೆ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಮನನೊಂದು ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ....
1 2 3 4 5 6 299
Page 4 of 299