Wednesday, March 18, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮುಂದಿನ ವಿಚಾರಣೆವರೆಗೆ ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು – ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆಯಾಗುವಂತೆ ಮಾತನಾಡಿದ್ದ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಗುರುವಾರ (ಮೇ.15) ನಡೆದಿದೆ. ಹೈಕೋರ್ಟ್ ನ್ಯಾ. ಶಿವಶಂಕರ್ ಅಮರಣ್ಣನವರ್ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ. ಸೋನು ನಿಗಮ್‌ ಅವರು ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ. ಅವರು ತನಿಖೆಗೆ ಸಹಕರಿಸಿಲ್ಲವೆಂದು ಎಂದು ಪೊಲೀಸರ ಪರ ಎಸ್‌ಪಿಪಿ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಇಂದಿನಿಂದ (ಮೇ 12 ) ರಾಜ್ಯದಲ್ಲಿ ಪೆಟ್ರೋಲ್‌ ದರ ಭಾರೀ ಇಳಿಕೆ-ಕಹಳೆ ನ್ಯೂಸ್

ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 12) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಭಾರತದ ತಿರುಗೇಟಿಗೆ ಬೆದರಿದ ಪಾಕ್‌ ; ದಾಳಿ ನಿಲ್ಲಿಸಿದ್ರೆ..ನಾವು ತಟಸ್ಥರಾಗ್ತೇವೆ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋ*ತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್‌ ಸಿಂದೂರ ಹೆಸರಿನಲ್ಲಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದೊಳಗೆ ದಾಳಿ ನಡೆಸಿ ಉ*ಗ್ರರನ್ನು ಹಾಗೂ ಉ*ಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸುವ ಮೂಲಕ ತಕ್ಕ ಪಾಠ ಕಲಿಸಿದ ಬೆನ್ನಲ್ಲೇ ಇದೀಗ ಒಂದು ವೇಳೆ ಭಾರತ ಸೇನಾ ದಾಳಿಯನ್ನು ನಿಲ್ಲಿಸಿದರೆ, ಪಾಕ್‌ ಕೂಡಾ ಸಂಘರ್ಷ ನಿಲ್ಲಿಸಲು ಪರಿಗಣಿಸಲಿದೆ ಎಂದು ಶನಿವಾರ (ಮೇ 10) ಪಾಕ್‌ ವಿದೇಶಾಂಗ ಸಚಿವ ಇಶಾಕ್‌ ದಾರ್‌ ಹೇಳಿರುವುದಾಗಿ ವರದಿಯಾಗಿದೆ....
ರಾಜ್ಯಸುದ್ದಿ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರ ಬಂಧನ – 13 ಮಂದಿ ಎಸ್ಕೇಪ್- ಕಹಳೆ ನ್ಯೂಸ್ 

ಕೋಲಾರ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದ್ದು, ಇಬ್ಬರು ಬಾಲಕರನ್ನು ಆರ್‌ಪಿಎಫ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 15 ಮಂದಿ ಮುಸ್ಲಿಂ ಹುಡುಗರ ಗುಂಪು ಈ ಕೃತ್ಯ ಮಾಡಿದ್ದು, 13 ಹುಡುಗರು ಓಡಿ ಕಲ್ಲು ತೂರಿ ಪರಾರಿಯಾಗಿದ್ದಾರೆ.ಇಬ್ಬರು ಮಾತ್ರ ಬಂಗಾರಪೇಟೆ ಅರ್ ಪಿಎಫ್ ಸಿಕ್ಕಿಬಿದ್ದಿದ್ದಾರೆ ಬಂಧಿತರನ್ನು ವಿಚಾರಣೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಇಬ್ಬರೂ ಬಾಲಕರು ಅಪ್ರಾಪ್ತರಾಗಿದ್ದು, ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ. ಬಳಿಕ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌ -ಕಹಳೆ ನ್ಯೂಸ್

ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ. ಈ ಸಮಯದಲ್ಲಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ...
ರಾಜ್ಯರಾಷ್ಟ್ರೀಯಸುದ್ದಿ

ಆಗತ್ಯವಿದ್ದರೆ ಯುದ್ಧಕ್ಕೆ ಮರಳಲು ಸಿದ್ದ : ವಾಯುಪಡೆಯ ಮಾಜಿ ಪೈಲಟ್, ತೆಲಂಗಾಣ ಸಚಿವ ಉತ್ತಮ್ ರೆಡ್ಡಿ-ಕಹಳೆ ನ್ಯೂಸ್

ಹೈದರಾಬಾದ್ : ದೇಶ ಮತ್ತೆ ಕರೆದರೆ ಯುದ್ಧ ಕರ್ತವ್ಯಕ್ಕೆ ಮರಳುವ ಸಿದ್ದ ಎಂದು ಭಾರತೀಯ ವಾಯುಪಡೆಯ ಮಾಜಿ ಪೈಲಟ್ ಹಾಗು ತೆಲಂಗಾಣ ಸಚಿವ ಎನ್ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಇಲ್ಲಿನ ಗಾಂಧಿ ಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ನೀರಾವರಿ ಮತ್ತು ನಾಗರಿಕ ಸರಬರಾಜು ಸಚಿವ ರೆಡ್ಡಿ, ಭಾರತೀಯ ಸೇನೆಯನ್ನು ಸಾಧನೆಗೆ ಹೆಮ್ಮೆ ಪಟ್ಟರು. 1982 ರ ಹೊತ್ತಿಗೆ 16 ನೇ ವಯಸ್ಸಿನಲ್ಲಿ ಸಶಸ್ತ್ರ ಪಡೆಗಳಿಗೆ ಸೇರಿ 20ರ ವೇಳೆಗೆ ಫೈಟರ್...
ರಾಜ್ಯರಾಷ್ಟ್ರೀಯಸುದ್ದಿ

ಭಾರತ ಮತ್ತು ಪಾಕ್​ ಶಾಂತಿ, ಸ್ಥಿರತೆಗೆ ಆದ್ಯತೆ ನೀಡಬೇಕು; ಉದ್ವಿಗ್ನತೆ ಹೆಚ್ಚಿಸಿಕೊಳ್ಳದಂತೆ ಚೀನಾ ಒತ್ತಾಯ – ಕಹಳೆ ನ್ಯೂಸ್

'ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ, ಸ್ಥಿರತೆಗೆ ಆದ್ಯತೆ ನೀಡಬೇಕು. ಜೊತೆಗೆ ಶಾಂತ ಮತ್ತು ಸಂಯಮದಿಂದಿರಬೇಕು ಎಂದು' ಚೀನಾ ಹೇಳಿದೆ. ಪರಮಾಣು ಶಸ್ತ್ರಸಜ್ಜಿತ ನೆರೆಯ ರಾಷ್ಟ್ರಗಳ ನಡುವಿನ ಸಂಘರ್ಷವು ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವುದರಿಂದ, ಭಾರತ ಮತ್ತು ಪಾಕಿಸ್ತಾನಗಳು ಸಂಘರ್ಷದಲ್ಲಿ ಉಲ್ಬಣಗೊಳ್ಳುವುದನ್ನು ತಪ್ಪಿಸುವಂತೆ ಚೀನಾ ಶನಿವಾರ (ಮೇ.10) ಒತ್ತಾಯಿಸಿದೆ ಎಂದು ಬೀಜಿಂಗ್ ವಿದೇಶಾಂಗ ಸಚಿವಾಲಯ ತಿಳಿಸಿದೆ. 'ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ ಮತ್ತು ಸ್ಥಿರತೆಗೆ ಆದ್ಯತೆ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಪಾಕಿಸ್ತಾನಿ ಶೆಲ್‌ ದಾಳಿಯಲ್ಲಿ ಜಮ್ಮು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿ ಸಾ*ವು-ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಕಾಶ್ಮೀರದ ಬೆಳಿಗ್ಗೆ ರಾಜೌರಿ ಮತ್ತು ಕೇಂದ್ರಾಡಳಿತ ಪ್ರದೇಶದ ಇತರ ಭಾಗಗಳಲ್ಲಿ ಶನಿವಾರ (ಮೇ 10) ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ ಎಂದು ಹೇಳಿದ್ದು, ಆ ಅಧಿಕಾರಿ ತಮ್ಮ ದುರಂತ ಸಾವಿಗೆ ಕೆಲವು ಗಂಟೆಗಳ ಮೊದಲು ಅವರೊಂದಿಗೆ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು ಎಂದು...
1 91 92 93 94 95 273
Page 93 of 273